ಬ್ರೇಕಿಂಗ್ ನ್ಯೂಸ್
22-01-21 10:39 am Mangalore Correspondent ಕರಾವಳಿ
ಮಂಗಳೂರು, ಜ.22 : ಹಿರಿಯ ವಿದ್ಯಾರ್ಥಿಗಳ ರ್ಯಾಗಿಂಗ್ ಹಾವಳಿಯಿಂದಾಗಿ ಬಿ ಫಾರ್ಮಾ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಕಾಲೇಜನ್ನೇ ತೊರೆದು ಪೊಲೀಸ್ ದೂರು ದಾಖಲಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಂಗಳೂರಿನ ವಳಚಿಲ್ನಲ್ಲಿರುವ ಶ್ರೀನಿವಾಸ ಕಾಲೇಜಿನಲ್ಲಿ ಮೊದಲ ವರ್ಷದ ಬಿ ಫಾರ್ಮಸಿ ಕಲಿಯುತ್ತಿರುವ ವಿದ್ಯಾರ್ಥಿ ರ್ಯಾಗಿಂಗ್ ಹಿನ್ನೆಲೆಯಲ್ಲಿ ಕಾಲೇಜು ತೊರೆಯಲು ನಿರ್ಧರಿಸಿದ್ದಾನೆ. ಈತ ಜ.10 ರಂದು ತರಗತಿ ಮುಗಿಸಿ ಹಾಸ್ಟೆಲ್ ಕಡೆಗೆ ಹೋಗುತ್ತಿದ್ದ ವೇಳೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಅಡ್ಡಗಟ್ಟಿದ್ದು ಕಾಲೇಜಿಗೆ ಬರುವಾಗ ತಲೆಕೂದಲು ಹಾಗೂ ಮೀಸೆ ತೆಗೆದು ಬರಬೇಕೆಂದು ಬೆದರಿಸಿದ್ದಾರೆ. ಅದೇ ವೇಳೆ ಒಬ್ಬ ವಿದ್ಯಾರ್ಥಿ ಕೆನ್ನೆಗೆ ಹೊಡೆದಿದ್ದಾನೆ. ಜ.12 ರಂದು ಅದೇ ವಿದ್ಯಾರ್ಥಿಗಳು ಮತ್ತೆ ಅಡ್ಡಗಟ್ಟಿ ಮೀಸೆ ಹಾಗೂ ತಲೆಕೂದಲು ತೆಗೆಯದೇ ಬಂದ ಕಾರಣಕ್ಕೆ ಬೈದಿದ್ದಾರೆ. ನಾಳೆ ಕಾಲೇಜಿಗೆ ಬರುವಾಗ ಮೀಸೆ ಹಾಗೂ ತಲೆ ಕೂದಲು ತೆಗೆಯದೇ ಬಂದಲ್ಲಿ ಕೂದಲನ್ನು ಕತ್ತರಿಸುತ್ತೇವೆ ಎಂದು ಹೇಳಿದ್ದಾರೆ. ಈ ವೇಳೆಯೂ ಓರ್ವ ವಿದ್ಯಾರ್ಥಿ ಕೆನ್ನೆಗೆ ಹೊಡೆದಿದ್ದಾನೆ.

ಭಯಗೊಂಡ ವಿದ್ಯಾರ್ಥಿ ಹಾಸ್ಟೆಲ್ಗೆ ಬಂದು ಮನೆಯವರಿಗೆ ಮಾಹಿತಿ ನೀಡಿದ್ದು, ಮನೆಯವರು ಅದೇ ದಿನ ಬಂದು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಘಟನೆ ಬಗ್ಗೆ ಸಂಬಂಧಿಕರಲ್ಲಿ ಚರ್ಚಿಸಿದ ಬಳಿಕ ರ್ಯಾಗಿಂಗ್ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರೆಸಲು ಅಸಾಧ್ಯವಾಗಿರುವುದರಿಂದ ಕಾಲೇಜಿಗೆ ನೀಡಿರುವ SSLC, PUC ಸರ್ಟಿಫಿಕೇಟ್, ಟಿಸಿ ಮತ್ತು1,63,000 ಹಣವನ್ನು ಹಿಂದಿರುಗಿಸಲು ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
A ragging case has been reported at Srinivas college at Valachil in Mangalore. The student has discontinued his studies.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm