ಬ್ರೇಕಿಂಗ್ ನ್ಯೂಸ್
22-01-21 10:39 am Mangalore Correspondent ಕರಾವಳಿ
ಮಂಗಳೂರು, ಜ.22 : ಹಿರಿಯ ವಿದ್ಯಾರ್ಥಿಗಳ ರ್ಯಾಗಿಂಗ್ ಹಾವಳಿಯಿಂದಾಗಿ ಬಿ ಫಾರ್ಮಾ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಕಾಲೇಜನ್ನೇ ತೊರೆದು ಪೊಲೀಸ್ ದೂರು ದಾಖಲಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಂಗಳೂರಿನ ವಳಚಿಲ್ನಲ್ಲಿರುವ ಶ್ರೀನಿವಾಸ ಕಾಲೇಜಿನಲ್ಲಿ ಮೊದಲ ವರ್ಷದ ಬಿ ಫಾರ್ಮಸಿ ಕಲಿಯುತ್ತಿರುವ ವಿದ್ಯಾರ್ಥಿ ರ್ಯಾಗಿಂಗ್ ಹಿನ್ನೆಲೆಯಲ್ಲಿ ಕಾಲೇಜು ತೊರೆಯಲು ನಿರ್ಧರಿಸಿದ್ದಾನೆ. ಈತ ಜ.10 ರಂದು ತರಗತಿ ಮುಗಿಸಿ ಹಾಸ್ಟೆಲ್ ಕಡೆಗೆ ಹೋಗುತ್ತಿದ್ದ ವೇಳೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಅಡ್ಡಗಟ್ಟಿದ್ದು ಕಾಲೇಜಿಗೆ ಬರುವಾಗ ತಲೆಕೂದಲು ಹಾಗೂ ಮೀಸೆ ತೆಗೆದು ಬರಬೇಕೆಂದು ಬೆದರಿಸಿದ್ದಾರೆ. ಅದೇ ವೇಳೆ ಒಬ್ಬ ವಿದ್ಯಾರ್ಥಿ ಕೆನ್ನೆಗೆ ಹೊಡೆದಿದ್ದಾನೆ. ಜ.12 ರಂದು ಅದೇ ವಿದ್ಯಾರ್ಥಿಗಳು ಮತ್ತೆ ಅಡ್ಡಗಟ್ಟಿ ಮೀಸೆ ಹಾಗೂ ತಲೆಕೂದಲು ತೆಗೆಯದೇ ಬಂದ ಕಾರಣಕ್ಕೆ ಬೈದಿದ್ದಾರೆ. ನಾಳೆ ಕಾಲೇಜಿಗೆ ಬರುವಾಗ ಮೀಸೆ ಹಾಗೂ ತಲೆ ಕೂದಲು ತೆಗೆಯದೇ ಬಂದಲ್ಲಿ ಕೂದಲನ್ನು ಕತ್ತರಿಸುತ್ತೇವೆ ಎಂದು ಹೇಳಿದ್ದಾರೆ. ಈ ವೇಳೆಯೂ ಓರ್ವ ವಿದ್ಯಾರ್ಥಿ ಕೆನ್ನೆಗೆ ಹೊಡೆದಿದ್ದಾನೆ.

ಭಯಗೊಂಡ ವಿದ್ಯಾರ್ಥಿ ಹಾಸ್ಟೆಲ್ಗೆ ಬಂದು ಮನೆಯವರಿಗೆ ಮಾಹಿತಿ ನೀಡಿದ್ದು, ಮನೆಯವರು ಅದೇ ದಿನ ಬಂದು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಘಟನೆ ಬಗ್ಗೆ ಸಂಬಂಧಿಕರಲ್ಲಿ ಚರ್ಚಿಸಿದ ಬಳಿಕ ರ್ಯಾಗಿಂಗ್ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರೆಸಲು ಅಸಾಧ್ಯವಾಗಿರುವುದರಿಂದ ಕಾಲೇಜಿಗೆ ನೀಡಿರುವ SSLC, PUC ಸರ್ಟಿಫಿಕೇಟ್, ಟಿಸಿ ಮತ್ತು1,63,000 ಹಣವನ್ನು ಹಿಂದಿರುಗಿಸಲು ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
A ragging case has been reported at Srinivas college at Valachil in Mangalore. The student has discontinued his studies.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am