ಬ್ರೇಕಿಂಗ್ ನ್ಯೂಸ್
22-01-21 10:39 am Mangalore Correspondent ಕರಾವಳಿ
ಮಂಗಳೂರು, ಜ.22 : ಹಿರಿಯ ವಿದ್ಯಾರ್ಥಿಗಳ ರ್ಯಾಗಿಂಗ್ ಹಾವಳಿಯಿಂದಾಗಿ ಬಿ ಫಾರ್ಮಾ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಕಾಲೇಜನ್ನೇ ತೊರೆದು ಪೊಲೀಸ್ ದೂರು ದಾಖಲಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಂಗಳೂರಿನ ವಳಚಿಲ್ನಲ್ಲಿರುವ ಶ್ರೀನಿವಾಸ ಕಾಲೇಜಿನಲ್ಲಿ ಮೊದಲ ವರ್ಷದ ಬಿ ಫಾರ್ಮಸಿ ಕಲಿಯುತ್ತಿರುವ ವಿದ್ಯಾರ್ಥಿ ರ್ಯಾಗಿಂಗ್ ಹಿನ್ನೆಲೆಯಲ್ಲಿ ಕಾಲೇಜು ತೊರೆಯಲು ನಿರ್ಧರಿಸಿದ್ದಾನೆ. ಈತ ಜ.10 ರಂದು ತರಗತಿ ಮುಗಿಸಿ ಹಾಸ್ಟೆಲ್ ಕಡೆಗೆ ಹೋಗುತ್ತಿದ್ದ ವೇಳೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಅಡ್ಡಗಟ್ಟಿದ್ದು ಕಾಲೇಜಿಗೆ ಬರುವಾಗ ತಲೆಕೂದಲು ಹಾಗೂ ಮೀಸೆ ತೆಗೆದು ಬರಬೇಕೆಂದು ಬೆದರಿಸಿದ್ದಾರೆ. ಅದೇ ವೇಳೆ ಒಬ್ಬ ವಿದ್ಯಾರ್ಥಿ ಕೆನ್ನೆಗೆ ಹೊಡೆದಿದ್ದಾನೆ. ಜ.12 ರಂದು ಅದೇ ವಿದ್ಯಾರ್ಥಿಗಳು ಮತ್ತೆ ಅಡ್ಡಗಟ್ಟಿ ಮೀಸೆ ಹಾಗೂ ತಲೆಕೂದಲು ತೆಗೆಯದೇ ಬಂದ ಕಾರಣಕ್ಕೆ ಬೈದಿದ್ದಾರೆ. ನಾಳೆ ಕಾಲೇಜಿಗೆ ಬರುವಾಗ ಮೀಸೆ ಹಾಗೂ ತಲೆ ಕೂದಲು ತೆಗೆಯದೇ ಬಂದಲ್ಲಿ ಕೂದಲನ್ನು ಕತ್ತರಿಸುತ್ತೇವೆ ಎಂದು ಹೇಳಿದ್ದಾರೆ. ಈ ವೇಳೆಯೂ ಓರ್ವ ವಿದ್ಯಾರ್ಥಿ ಕೆನ್ನೆಗೆ ಹೊಡೆದಿದ್ದಾನೆ.

ಭಯಗೊಂಡ ವಿದ್ಯಾರ್ಥಿ ಹಾಸ್ಟೆಲ್ಗೆ ಬಂದು ಮನೆಯವರಿಗೆ ಮಾಹಿತಿ ನೀಡಿದ್ದು, ಮನೆಯವರು ಅದೇ ದಿನ ಬಂದು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಘಟನೆ ಬಗ್ಗೆ ಸಂಬಂಧಿಕರಲ್ಲಿ ಚರ್ಚಿಸಿದ ಬಳಿಕ ರ್ಯಾಗಿಂಗ್ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರೆಸಲು ಅಸಾಧ್ಯವಾಗಿರುವುದರಿಂದ ಕಾಲೇಜಿಗೆ ನೀಡಿರುವ SSLC, PUC ಸರ್ಟಿಫಿಕೇಟ್, ಟಿಸಿ ಮತ್ತು1,63,000 ಹಣವನ್ನು ಹಿಂದಿರುಗಿಸಲು ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
A ragging case has been reported at Srinivas college at Valachil in Mangalore. The student has discontinued his studies.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm