ಬ್ರೇಕಿಂಗ್ ನ್ಯೂಸ್
22-01-21 10:39 am Mangalore Correspondent ಕರಾವಳಿ
ಮಂಗಳೂರು, ಜ.22 : ಹಿರಿಯ ವಿದ್ಯಾರ್ಥಿಗಳ ರ್ಯಾಗಿಂಗ್ ಹಾವಳಿಯಿಂದಾಗಿ ಬಿ ಫಾರ್ಮಾ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಕಾಲೇಜನ್ನೇ ತೊರೆದು ಪೊಲೀಸ್ ದೂರು ದಾಖಲಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಂಗಳೂರಿನ ವಳಚಿಲ್ನಲ್ಲಿರುವ ಶ್ರೀನಿವಾಸ ಕಾಲೇಜಿನಲ್ಲಿ ಮೊದಲ ವರ್ಷದ ಬಿ ಫಾರ್ಮಸಿ ಕಲಿಯುತ್ತಿರುವ ವಿದ್ಯಾರ್ಥಿ ರ್ಯಾಗಿಂಗ್ ಹಿನ್ನೆಲೆಯಲ್ಲಿ ಕಾಲೇಜು ತೊರೆಯಲು ನಿರ್ಧರಿಸಿದ್ದಾನೆ. ಈತ ಜ.10 ರಂದು ತರಗತಿ ಮುಗಿಸಿ ಹಾಸ್ಟೆಲ್ ಕಡೆಗೆ ಹೋಗುತ್ತಿದ್ದ ವೇಳೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಅಡ್ಡಗಟ್ಟಿದ್ದು ಕಾಲೇಜಿಗೆ ಬರುವಾಗ ತಲೆಕೂದಲು ಹಾಗೂ ಮೀಸೆ ತೆಗೆದು ಬರಬೇಕೆಂದು ಬೆದರಿಸಿದ್ದಾರೆ. ಅದೇ ವೇಳೆ ಒಬ್ಬ ವಿದ್ಯಾರ್ಥಿ ಕೆನ್ನೆಗೆ ಹೊಡೆದಿದ್ದಾನೆ. ಜ.12 ರಂದು ಅದೇ ವಿದ್ಯಾರ್ಥಿಗಳು ಮತ್ತೆ ಅಡ್ಡಗಟ್ಟಿ ಮೀಸೆ ಹಾಗೂ ತಲೆಕೂದಲು ತೆಗೆಯದೇ ಬಂದ ಕಾರಣಕ್ಕೆ ಬೈದಿದ್ದಾರೆ. ನಾಳೆ ಕಾಲೇಜಿಗೆ ಬರುವಾಗ ಮೀಸೆ ಹಾಗೂ ತಲೆ ಕೂದಲು ತೆಗೆಯದೇ ಬಂದಲ್ಲಿ ಕೂದಲನ್ನು ಕತ್ತರಿಸುತ್ತೇವೆ ಎಂದು ಹೇಳಿದ್ದಾರೆ. ಈ ವೇಳೆಯೂ ಓರ್ವ ವಿದ್ಯಾರ್ಥಿ ಕೆನ್ನೆಗೆ ಹೊಡೆದಿದ್ದಾನೆ.

ಭಯಗೊಂಡ ವಿದ್ಯಾರ್ಥಿ ಹಾಸ್ಟೆಲ್ಗೆ ಬಂದು ಮನೆಯವರಿಗೆ ಮಾಹಿತಿ ನೀಡಿದ್ದು, ಮನೆಯವರು ಅದೇ ದಿನ ಬಂದು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಘಟನೆ ಬಗ್ಗೆ ಸಂಬಂಧಿಕರಲ್ಲಿ ಚರ್ಚಿಸಿದ ಬಳಿಕ ರ್ಯಾಗಿಂಗ್ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರೆಸಲು ಅಸಾಧ್ಯವಾಗಿರುವುದರಿಂದ ಕಾಲೇಜಿಗೆ ನೀಡಿರುವ SSLC, PUC ಸರ್ಟಿಫಿಕೇಟ್, ಟಿಸಿ ಮತ್ತು1,63,000 ಹಣವನ್ನು ಹಿಂದಿರುಗಿಸಲು ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
A ragging case has been reported at Srinivas college at Valachil in Mangalore. The student has discontinued his studies.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm