ಬ್ರೇಕಿಂಗ್ ನ್ಯೂಸ್
13-08-20 06:35 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 13: ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ಯೊಂದು ಭಾರೀ ವಿವಾದಾತ್ಮಕ ಸೃಷ್ಟಿಸಿದೆ. ಗೃಹ ಸಚಿವರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರಿಗೆ ನಿಮ್ಮ ಮೇಲೆ ಯಾವುದೇ ಕೇಸು ಹಾಕಿದ್ರೂ, ಎಲ್ಲ ತೆಗೆದು ಹಾಕುತ್ತೇವೆ’ ಎಂದು ಅಭಯ ನೀಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗೃಹ ಸಚಿವರ ಈ ವಿಡಿಯೋ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಠಿಸಲಿದೆ.
ಉಡುಪಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲು ಇತ್ತೀಚೆಗೆ ಬಂದಿದ್ದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂಆದ ಗೃಹಸಚಿವ ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಹಿಂದಿರುಗುವ ಸಂದರ್ಭ ವಿಮಾನ ನಿಲ್ದಾಣದಲ್ಲಿ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಮತ್ತು ಕಾರ್ಯಕರ್ತರು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಬೋಮ್ಮಯಿ ಈ ಅಭಯವನ್ನು ಶರಣ್ ಪಂಪ್ ವೆಲ್ ಅವರಿಗೆ ನೀಡಿದ್ದಾರೆ. 7 ಸೆಕೆಂಡ್ ನ ಈ ವಿಡಿಯೋ ದಲ್ಲಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸ್ವತಃ ಗೃಹ ಸಚಿವರು ಈ ಮಾತನ್ನು ಹೇಳುವಾಗ ದನಿತಗ್ಗಿಸಿ ಹೇಳುತ್ತಿರುವುದು ವಿಡಿಯೋ ದಲ್ಲಿ ಸ್ಪಷ್ಟವಾಗಿ ಕೇಳಿಸುತ್ತಿದೆ.
ವಿಎಚ್ಪಿಯ ಶರಣ್ ಪಂಪ್ವೆಲ್ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಆ.12ರಂದು ನಸುಕಿನಜಾವ 2:53ಕ್ಕೆ ಗೃಹಸಚಿವರ ವಿವಾದಾತ್ಮಕ ಹೇಳಿಕೆಯ ವೀಡಿಯೊವನ್ನು ಹಂಚಿಕೊಂಡಿದ್ದರು. ವೀಡಿಯೊದಲ್ಲಿ ವಿವಾದಾತ್ಮಕ ಹೇಳಿಕೆ ಇರುವುದು ಕಂಡುಬಂದ ನಂತರ ಎಚ್ಚೆತ್ತುಕೊಂಡ ಶರಣ್ ಪಂಪ್ವೆಲ್, ಬಳಿಕ ಆ ಟ್ವೀಟ್ನ್ನು ಅಳಿಸಿ ಹಾಕಿದ್ದಾರೆ.
Video:
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm