ಬ್ರೇಕಿಂಗ್ ನ್ಯೂಸ್
22-01-21 02:48 pm Mangalore Correspondent ಕರಾವಳಿ
ಮಂಗಳೂರು, ಜ.22: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದು ದೇವಸ್ಥಾನ, ದೈವಸ್ಥಾನಗಳನ್ನು ಅಪವಿತ್ರಗೊಳಿಸುವ ಕೃತ್ಯ ನಡೆಯುತ್ತಿದೆ. ಇನ್ನೊಂದೆಡೆ ದೇಶ ವಿರೋಧಿ ಕೃತ್ಯಗಳು, ಸಮಾಜಬಾಹಿರ ಚಟುವಟಿಕೆಗಳು ಹೆಚ್ಚುತ್ತಿವೆ. ಸಮಾಜ ವಿರೋಧಿ ಕೃತ್ಯಗಳ ಹಿಂದೆ ಎಸ್ಡಿಪಿಐ, ಪಿಎಫ್ಐ ಇರುವ ಬಗ್ಗೆ ಶಂಕೆಯಿದ್ದು, ಹಲವು ಪ್ರಕರಣಗಳಲ್ಲಿ ಈ ಸಂಘಟನೆಗಳ ಕೈವಾಡ ಸಾಬೀತಾಗಿದೆ. ಎಸ್ಡಿಪಿಐ ಮತ್ತು ಪಿಎಫ್ಐ ಬ್ಯಾನ್ ಮಾಡಬೇಕೆಂದು ರಾಜ್ಯ ಸರಕಾರವನ್ನು ಒತ್ತಾಯಿಸುತ್ತೇವೆ ಎಂದು ವಿಹಿಂಪ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ತಿಳಿಸಿದ್ದಾರೆ.
ಕದ್ರಿಯ ವಿಶ್ವ ಹಿಂದು ಪರಿಷತ್ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಪೊಲೀಸರ ಮೇಲಿನ ಹಲ್ಲೆ ಪ್ರಕರಣದಲ್ಲಿ ಆರು ಮಂದಿಯನ್ನು ಬಂಧಿಸಿದ್ದು, ಆರೋಪಿಗಳೆಲ್ಲರು ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಯಲ್ಲಿದ್ದವರು. ಆಮೂಲಕ ಕೃತ್ಯವನ್ನು ಈ ಸಂಘಟನೆಯವರೇ ಮಾಡಿದ್ದು ಎನ್ನುವುದು ಸಾಬೀತಾಗಿದೆ. ಅದರಲ್ಲೂ ಅಪ್ರಾಪ್ತ ಹುಡುಗನಿಗೆ ಡ್ರಗ್ಸ್ ತಿನ್ನಿಸಿ, ಈ ಕೃತ್ಯ ಮಾಡಿದ್ದಾರೆ. ಬೆಳ್ತಂಗಡಿಯಲ್ಲಿ ಎಸ್ಡಿಪಿಐನವರ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ ಹಾಕಿದ್ದು, ದೇಶವಿರೋಧಿ ಕೃತ್ಯ ನಡೆಸಿರುವುದು ಸ್ಪಷ್ಟವಾಗಿದೆ.

ಸಿಟಿ ಬಸ್ ಚಾಲಕ ಸೈಡ್ ಕೊಟ್ಟಿಲ್ಲವೆಂದು ಆರೋಪಿ ಅಶ್ರಫ್ ಎಂಬಾತ ಚಾಲಕ ಮತ್ತು ಬಸ್ಸಿಗೆ ಪೆಟ್ರೋಲ್ ಸುರಿದು ಕೊಲ್ಲುವ ಪ್ರಯತ್ನ ಮಾಡಿದ್ದಾನೆ. ಇದು ಸಮಾಜದಲ್ಲಿ ಭಯ ಮೂಡಿಸುವ ಯತ್ನ. ಇದೇ ವೇಳೆ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವತಿಗೆ ಕಿರುಕುಳ ಕೊಟ್ಟ ಪ್ರಕರಣ ನಡೆದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮತ್ತೊಂದು ಕಡೆ 15 ವರ್ಷಗಳ ಹಿಂದೆ ಮುಸ್ಲಿಂ ಆಗಿ ಮತಾಂತರ ಆಗಿದ್ದ ಮಹಿಳೆಗೆ ಎಸ್ಡಿಪಿಐ ಮುಖಂಡನೇ ಅತ್ಯಾಚಾರ ಎಸಗಿ, ಆಕೆಯ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ನಡೆದಿದ್ದು ಆರೋಪಿಯನ್ನು ಇನ್ನೂ ಪೊಲೀಸರು ಬಂಧಿಸಿಲ್ಲ. ಇವೆಲ್ಲ ಪ್ರಕರಣಗಳು ಸಮಾಜದಲ್ಲಿ ಶಾಂತಿ ಕೆಡಿಸಿ, ಸಾಮರಸ್ಯಕ್ಕೆ ಧಕ್ಕೆ ತರುವ ಪ್ರಯತ್ನಗಳಾಗಿದ್ದು, ಇದರ ಹಿಂದೆ ಷಡ್ಯಂತ್ರ ಅಡಗಿದ್ದು, ಹಿಂದಿನ ರೂವಾರಿ ಯಾರಿದ್ದಾರೆ ಅವರನ್ನು ಪತ್ತೆ ಮಾಡುವ ಕೆಲಸ ಆಗಬೇಕು ಎಂದು ಶಿವಾನಂದ ಮೆಂಡನ್ ಒತ್ತಾಯಿಸಿದರು.

ಇದೇ ವೇಳೆ, ಮಾತನಾಡಿದ ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ, ಜಿಲ್ಲೆಯಲ್ಲಿ ಸರಣಿಯಾಗಿ ನಡೆಯುತ್ತಿರುವ ಸಮಾಜ ವಿರೋಧಿ ಕೃತ್ಯಗಳನ್ನು ಖಂಡಿಸಿ, ಜ.25ರಂದು ಸಂಜೆ ನಾಲ್ಕು ಗಂಟೆಗೆ ತೊಕ್ಕೊಟ್ಟು ಜಂಕ್ಷನ್ನಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದೇವೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ವಿಹಿಂಪ ಜಿಲ್ಲಾಧ್ಯಕ್ಷ ಗೋಪಾಲ ಕುತ್ತಾರ್, ವಿಹಿಂಪ ಜಿಲ್ಲಾ ಸಹ ಕಾರ್ಯದರ್ಶಿ ರವಿ ಅಸೈಗೋಳಿ ಉಪಸ್ಥಿತರಿದ್ದರು.
minate SDPI and Pfi states bajrang dal Sharon Pumpwell in Mangalore. Sdpi and Pfi are the ones behind provocative activities in Mangalore.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm