ಬ್ರೇಕಿಂಗ್ ನ್ಯೂಸ್
22-01-21 02:48 pm Mangalore Correspondent ಕರಾವಳಿ
ಮಂಗಳೂರು, ಜ.22: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದು ದೇವಸ್ಥಾನ, ದೈವಸ್ಥಾನಗಳನ್ನು ಅಪವಿತ್ರಗೊಳಿಸುವ ಕೃತ್ಯ ನಡೆಯುತ್ತಿದೆ. ಇನ್ನೊಂದೆಡೆ ದೇಶ ವಿರೋಧಿ ಕೃತ್ಯಗಳು, ಸಮಾಜಬಾಹಿರ ಚಟುವಟಿಕೆಗಳು ಹೆಚ್ಚುತ್ತಿವೆ. ಸಮಾಜ ವಿರೋಧಿ ಕೃತ್ಯಗಳ ಹಿಂದೆ ಎಸ್ಡಿಪಿಐ, ಪಿಎಫ್ಐ ಇರುವ ಬಗ್ಗೆ ಶಂಕೆಯಿದ್ದು, ಹಲವು ಪ್ರಕರಣಗಳಲ್ಲಿ ಈ ಸಂಘಟನೆಗಳ ಕೈವಾಡ ಸಾಬೀತಾಗಿದೆ. ಎಸ್ಡಿಪಿಐ ಮತ್ತು ಪಿಎಫ್ಐ ಬ್ಯಾನ್ ಮಾಡಬೇಕೆಂದು ರಾಜ್ಯ ಸರಕಾರವನ್ನು ಒತ್ತಾಯಿಸುತ್ತೇವೆ ಎಂದು ವಿಹಿಂಪ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ತಿಳಿಸಿದ್ದಾರೆ.
ಕದ್ರಿಯ ವಿಶ್ವ ಹಿಂದು ಪರಿಷತ್ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಪೊಲೀಸರ ಮೇಲಿನ ಹಲ್ಲೆ ಪ್ರಕರಣದಲ್ಲಿ ಆರು ಮಂದಿಯನ್ನು ಬಂಧಿಸಿದ್ದು, ಆರೋಪಿಗಳೆಲ್ಲರು ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಯಲ್ಲಿದ್ದವರು. ಆಮೂಲಕ ಕೃತ್ಯವನ್ನು ಈ ಸಂಘಟನೆಯವರೇ ಮಾಡಿದ್ದು ಎನ್ನುವುದು ಸಾಬೀತಾಗಿದೆ. ಅದರಲ್ಲೂ ಅಪ್ರಾಪ್ತ ಹುಡುಗನಿಗೆ ಡ್ರಗ್ಸ್ ತಿನ್ನಿಸಿ, ಈ ಕೃತ್ಯ ಮಾಡಿದ್ದಾರೆ. ಬೆಳ್ತಂಗಡಿಯಲ್ಲಿ ಎಸ್ಡಿಪಿಐನವರ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ ಹಾಕಿದ್ದು, ದೇಶವಿರೋಧಿ ಕೃತ್ಯ ನಡೆಸಿರುವುದು ಸ್ಪಷ್ಟವಾಗಿದೆ.
ಸಿಟಿ ಬಸ್ ಚಾಲಕ ಸೈಡ್ ಕೊಟ್ಟಿಲ್ಲವೆಂದು ಆರೋಪಿ ಅಶ್ರಫ್ ಎಂಬಾತ ಚಾಲಕ ಮತ್ತು ಬಸ್ಸಿಗೆ ಪೆಟ್ರೋಲ್ ಸುರಿದು ಕೊಲ್ಲುವ ಪ್ರಯತ್ನ ಮಾಡಿದ್ದಾನೆ. ಇದು ಸಮಾಜದಲ್ಲಿ ಭಯ ಮೂಡಿಸುವ ಯತ್ನ. ಇದೇ ವೇಳೆ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವತಿಗೆ ಕಿರುಕುಳ ಕೊಟ್ಟ ಪ್ರಕರಣ ನಡೆದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮತ್ತೊಂದು ಕಡೆ 15 ವರ್ಷಗಳ ಹಿಂದೆ ಮುಸ್ಲಿಂ ಆಗಿ ಮತಾಂತರ ಆಗಿದ್ದ ಮಹಿಳೆಗೆ ಎಸ್ಡಿಪಿಐ ಮುಖಂಡನೇ ಅತ್ಯಾಚಾರ ಎಸಗಿ, ಆಕೆಯ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ನಡೆದಿದ್ದು ಆರೋಪಿಯನ್ನು ಇನ್ನೂ ಪೊಲೀಸರು ಬಂಧಿಸಿಲ್ಲ. ಇವೆಲ್ಲ ಪ್ರಕರಣಗಳು ಸಮಾಜದಲ್ಲಿ ಶಾಂತಿ ಕೆಡಿಸಿ, ಸಾಮರಸ್ಯಕ್ಕೆ ಧಕ್ಕೆ ತರುವ ಪ್ರಯತ್ನಗಳಾಗಿದ್ದು, ಇದರ ಹಿಂದೆ ಷಡ್ಯಂತ್ರ ಅಡಗಿದ್ದು, ಹಿಂದಿನ ರೂವಾರಿ ಯಾರಿದ್ದಾರೆ ಅವರನ್ನು ಪತ್ತೆ ಮಾಡುವ ಕೆಲಸ ಆಗಬೇಕು ಎಂದು ಶಿವಾನಂದ ಮೆಂಡನ್ ಒತ್ತಾಯಿಸಿದರು.
ಇದೇ ವೇಳೆ, ಮಾತನಾಡಿದ ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ, ಜಿಲ್ಲೆಯಲ್ಲಿ ಸರಣಿಯಾಗಿ ನಡೆಯುತ್ತಿರುವ ಸಮಾಜ ವಿರೋಧಿ ಕೃತ್ಯಗಳನ್ನು ಖಂಡಿಸಿ, ಜ.25ರಂದು ಸಂಜೆ ನಾಲ್ಕು ಗಂಟೆಗೆ ತೊಕ್ಕೊಟ್ಟು ಜಂಕ್ಷನ್ನಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದೇವೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ವಿಹಿಂಪ ಜಿಲ್ಲಾಧ್ಯಕ್ಷ ಗೋಪಾಲ ಕುತ್ತಾರ್, ವಿಹಿಂಪ ಜಿಲ್ಲಾ ಸಹ ಕಾರ್ಯದರ್ಶಿ ರವಿ ಅಸೈಗೋಳಿ ಉಪಸ್ಥಿತರಿದ್ದರು.
minate SDPI and Pfi states bajrang dal Sharon Pumpwell in Mangalore. Sdpi and Pfi are the ones behind provocative activities in Mangalore.
31-03-25 12:24 pm
HK News Desk
Areca Nut, Machine Accident, Sirsi: ಅಡಿಕೆ ಸುಲ...
29-03-25 09:19 pm
Mysuru three drowned, Lake, Ugadi: ಮೈಸೂರು ; ಹ...
29-03-25 03:13 pm
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
Minister Rajanna, honeytrap, Son, Murder atte...
28-03-25 12:19 pm
29-03-25 04:40 pm
HK News Desk
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
31-03-25 12:26 pm
Mangalore Correspondent
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
Mangalore, Ullal Netravati Bridge Repair, Tra...
30-03-25 03:07 pm
Kumapla, Mangalore, Crime: ಲಕೋಟೆಯಲ್ಲಿ ಸಂಸ್ಕರಿ...
30-03-25 02:39 pm
Mangalore CM Medal, Anupam Agrawal, Police Ma...
29-03-25 11:04 pm
30-03-25 08:59 am
Mangaluru Correspondent
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm
Bajrang Dal, Arrest, Cow Transport, Mangalore...
29-03-25 04:02 pm
Mangalore Nandigudde Prostitution case: ನಂದಿಗ...
28-03-25 09:25 pm
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm