ಬ್ರೇಕಿಂಗ್ ನ್ಯೂಸ್
22-01-21 02:48 pm Mangalore Correspondent ಕರಾವಳಿ
ಮಂಗಳೂರು, ಜ.22: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದು ದೇವಸ್ಥಾನ, ದೈವಸ್ಥಾನಗಳನ್ನು ಅಪವಿತ್ರಗೊಳಿಸುವ ಕೃತ್ಯ ನಡೆಯುತ್ತಿದೆ. ಇನ್ನೊಂದೆಡೆ ದೇಶ ವಿರೋಧಿ ಕೃತ್ಯಗಳು, ಸಮಾಜಬಾಹಿರ ಚಟುವಟಿಕೆಗಳು ಹೆಚ್ಚುತ್ತಿವೆ. ಸಮಾಜ ವಿರೋಧಿ ಕೃತ್ಯಗಳ ಹಿಂದೆ ಎಸ್ಡಿಪಿಐ, ಪಿಎಫ್ಐ ಇರುವ ಬಗ್ಗೆ ಶಂಕೆಯಿದ್ದು, ಹಲವು ಪ್ರಕರಣಗಳಲ್ಲಿ ಈ ಸಂಘಟನೆಗಳ ಕೈವಾಡ ಸಾಬೀತಾಗಿದೆ. ಎಸ್ಡಿಪಿಐ ಮತ್ತು ಪಿಎಫ್ಐ ಬ್ಯಾನ್ ಮಾಡಬೇಕೆಂದು ರಾಜ್ಯ ಸರಕಾರವನ್ನು ಒತ್ತಾಯಿಸುತ್ತೇವೆ ಎಂದು ವಿಹಿಂಪ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ತಿಳಿಸಿದ್ದಾರೆ.
ಕದ್ರಿಯ ವಿಶ್ವ ಹಿಂದು ಪರಿಷತ್ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಪೊಲೀಸರ ಮೇಲಿನ ಹಲ್ಲೆ ಪ್ರಕರಣದಲ್ಲಿ ಆರು ಮಂದಿಯನ್ನು ಬಂಧಿಸಿದ್ದು, ಆರೋಪಿಗಳೆಲ್ಲರು ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಯಲ್ಲಿದ್ದವರು. ಆಮೂಲಕ ಕೃತ್ಯವನ್ನು ಈ ಸಂಘಟನೆಯವರೇ ಮಾಡಿದ್ದು ಎನ್ನುವುದು ಸಾಬೀತಾಗಿದೆ. ಅದರಲ್ಲೂ ಅಪ್ರಾಪ್ತ ಹುಡುಗನಿಗೆ ಡ್ರಗ್ಸ್ ತಿನ್ನಿಸಿ, ಈ ಕೃತ್ಯ ಮಾಡಿದ್ದಾರೆ. ಬೆಳ್ತಂಗಡಿಯಲ್ಲಿ ಎಸ್ಡಿಪಿಐನವರ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ ಹಾಕಿದ್ದು, ದೇಶವಿರೋಧಿ ಕೃತ್ಯ ನಡೆಸಿರುವುದು ಸ್ಪಷ್ಟವಾಗಿದೆ.

ಸಿಟಿ ಬಸ್ ಚಾಲಕ ಸೈಡ್ ಕೊಟ್ಟಿಲ್ಲವೆಂದು ಆರೋಪಿ ಅಶ್ರಫ್ ಎಂಬಾತ ಚಾಲಕ ಮತ್ತು ಬಸ್ಸಿಗೆ ಪೆಟ್ರೋಲ್ ಸುರಿದು ಕೊಲ್ಲುವ ಪ್ರಯತ್ನ ಮಾಡಿದ್ದಾನೆ. ಇದು ಸಮಾಜದಲ್ಲಿ ಭಯ ಮೂಡಿಸುವ ಯತ್ನ. ಇದೇ ವೇಳೆ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವತಿಗೆ ಕಿರುಕುಳ ಕೊಟ್ಟ ಪ್ರಕರಣ ನಡೆದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮತ್ತೊಂದು ಕಡೆ 15 ವರ್ಷಗಳ ಹಿಂದೆ ಮುಸ್ಲಿಂ ಆಗಿ ಮತಾಂತರ ಆಗಿದ್ದ ಮಹಿಳೆಗೆ ಎಸ್ಡಿಪಿಐ ಮುಖಂಡನೇ ಅತ್ಯಾಚಾರ ಎಸಗಿ, ಆಕೆಯ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ನಡೆದಿದ್ದು ಆರೋಪಿಯನ್ನು ಇನ್ನೂ ಪೊಲೀಸರು ಬಂಧಿಸಿಲ್ಲ. ಇವೆಲ್ಲ ಪ್ರಕರಣಗಳು ಸಮಾಜದಲ್ಲಿ ಶಾಂತಿ ಕೆಡಿಸಿ, ಸಾಮರಸ್ಯಕ್ಕೆ ಧಕ್ಕೆ ತರುವ ಪ್ರಯತ್ನಗಳಾಗಿದ್ದು, ಇದರ ಹಿಂದೆ ಷಡ್ಯಂತ್ರ ಅಡಗಿದ್ದು, ಹಿಂದಿನ ರೂವಾರಿ ಯಾರಿದ್ದಾರೆ ಅವರನ್ನು ಪತ್ತೆ ಮಾಡುವ ಕೆಲಸ ಆಗಬೇಕು ಎಂದು ಶಿವಾನಂದ ಮೆಂಡನ್ ಒತ್ತಾಯಿಸಿದರು.

ಇದೇ ವೇಳೆ, ಮಾತನಾಡಿದ ಬಜರಂಗದಳ ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ, ಜಿಲ್ಲೆಯಲ್ಲಿ ಸರಣಿಯಾಗಿ ನಡೆಯುತ್ತಿರುವ ಸಮಾಜ ವಿರೋಧಿ ಕೃತ್ಯಗಳನ್ನು ಖಂಡಿಸಿ, ಜ.25ರಂದು ಸಂಜೆ ನಾಲ್ಕು ಗಂಟೆಗೆ ತೊಕ್ಕೊಟ್ಟು ಜಂಕ್ಷನ್ನಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದೇವೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ವಿಹಿಂಪ ಜಿಲ್ಲಾಧ್ಯಕ್ಷ ಗೋಪಾಲ ಕುತ್ತಾರ್, ವಿಹಿಂಪ ಜಿಲ್ಲಾ ಸಹ ಕಾರ್ಯದರ್ಶಿ ರವಿ ಅಸೈಗೋಳಿ ಉಪಸ್ಥಿತರಿದ್ದರು.
minate SDPI and Pfi states bajrang dal Sharon Pumpwell in Mangalore. Sdpi and Pfi are the ones behind provocative activities in Mangalore.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am