ಬ್ರೇಕಿಂಗ್ ನ್ಯೂಸ್
23-01-21 03:31 pm Mangalore Correspondent ಕರಾವಳಿ
ಮಂಗಳೂರು, ಜ.23 : ಮಂಗಳೂರು - ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ನೇತ್ರಾವತಿ ಸೇತುವೆ ಸಮೀಪ ವಾಹನ ಸವಾರರು ತ್ಯಾಜ್ಯ ಎಸೆಯುವ ಜಾಗದಲ್ಲಿ ಹಸಿರು ದಳ ಸಂಸ್ಥೆಯ ಸದಸ್ಯರು ಜಾಗೃತಿ ಮೂಡಿಸುವ ಕಾರ್ಯವನ್ನು ಶಾಸಕ ವೇದವ್ಯಾಸ್ ಕಾಮತ್ ಶ್ಲಾಘಿಸಿದ್ದಾರೆ.
ಸ್ಥಳಕ್ಕೆ ತೆರಳಿದ ಶಾಸಕ ಕಾಮತ್ ಅವರು, ನೇತ್ರಾವತಿ ಸೇತುವೆಯ ಬಳಿ ಖಾಲಿ ಜಾಗದಲ್ಲಿ ಪ್ರತಿನಿತ್ಯ ವಾಹನ ಸವಾರರು ಕಸ ಎಸೆದು ಹೋಗುವ ಕುರಿತು ಮಾಹಿತಿ ನೀಡಿದ್ದರು. ಹಲವಾರು ಬಾರಿ ಸ್ಥಳವನ್ನು ಸ್ವಚ್ಛಗೊಳಿಸಿದರು ತ್ಯಾಜ್ಯ ಎಸೆಯುವುದು ನಿಂತಿರಲಿಲ್ಲ. ಇತ್ತೀಚೆಗೆ ಕಳೆದ ಕೆಲ ಸಮಯದಿಂದ ಹಸಿರು ದಳ ಸಂಸ್ಥೆಯ ಸದಸ್ಯರು ಈ ಜಾಗದಲ್ಲಿ ಪ್ಲೆಕಾರ್ಡ್ ಹಿಡಿದು ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅವರ ಕಾರ್ಯ ಶ್ಲಾಘನೀಯ ಎಂದು ಶಾಸಕ ಕಾಮತ್ ಹೇಳಿದರು.

ಸ್ವಚ್ಚತಾ ಕಾರ್ಯಗಳು ಸೀಮಿತ ಸಂಸ್ಥೆಗಳು ಅಥವಾ ವ್ಯಕ್ತಿಯಿಂದ ಆಗುವಂತದ್ದಲ್ಲ. ಪ್ರತಿಯೊಬ್ಬ ನಾಗರಿಕರಿಗೂ ತನ್ನದೇ ಆದ ಜವಬ್ದಾರಿಗಳಿರುತ್ತವೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು, ತ್ಯಾಜ್ಯಗಳನ್ನು ಎಸೆಯುವುದರಿಂದ ವಿವಿಧ ಸಮಸ್ಯೆಗಳು ತಲೆದೋರುತ್ತವೆ. ಹಾಗಾಗಿ ಪ್ರತಿಯೊಬ್ಬರೂ ಕೂಡ ಸ್ವಚ್ಚತೆಯ ನಿಟ್ಟಿನಲ್ಲಿ ಚಿಂತಿಸಬೇಕು. ಆ ಮೂಲಕ ಸ್ವಚ್ಛ ಭಾರತದ ಪರಿಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಕೈಜೋಡಿಸಬೇಕೆಂದು ಶಾಸಕ ಕಾಮತ್ ತಿಳಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಪಾಲಿಕೆ ಸದಸ್ಯರಾದ ವೀಣಾ ಮಂಗಳ, ಬಿಜೆಪಿ ಪ್ರಮುಖರಾದ ಸುರೇಂದ್ರ ಜೆಪ್ಪಿನಮೊಗರು, ಹಸಿರು ದಳ ಸಂಸ್ಥೆಯ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am