ಬ್ರೇಕಿಂಗ್ ನ್ಯೂಸ್
23-01-21 03:31 pm Mangalore Correspondent ಕರಾವಳಿ
ಮಂಗಳೂರು, ಜ.23 : ಮಂಗಳೂರು - ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ನೇತ್ರಾವತಿ ಸೇತುವೆ ಸಮೀಪ ವಾಹನ ಸವಾರರು ತ್ಯಾಜ್ಯ ಎಸೆಯುವ ಜಾಗದಲ್ಲಿ ಹಸಿರು ದಳ ಸಂಸ್ಥೆಯ ಸದಸ್ಯರು ಜಾಗೃತಿ ಮೂಡಿಸುವ ಕಾರ್ಯವನ್ನು ಶಾಸಕ ವೇದವ್ಯಾಸ್ ಕಾಮತ್ ಶ್ಲಾಘಿಸಿದ್ದಾರೆ.
ಸ್ಥಳಕ್ಕೆ ತೆರಳಿದ ಶಾಸಕ ಕಾಮತ್ ಅವರು, ನೇತ್ರಾವತಿ ಸೇತುವೆಯ ಬಳಿ ಖಾಲಿ ಜಾಗದಲ್ಲಿ ಪ್ರತಿನಿತ್ಯ ವಾಹನ ಸವಾರರು ಕಸ ಎಸೆದು ಹೋಗುವ ಕುರಿತು ಮಾಹಿತಿ ನೀಡಿದ್ದರು. ಹಲವಾರು ಬಾರಿ ಸ್ಥಳವನ್ನು ಸ್ವಚ್ಛಗೊಳಿಸಿದರು ತ್ಯಾಜ್ಯ ಎಸೆಯುವುದು ನಿಂತಿರಲಿಲ್ಲ. ಇತ್ತೀಚೆಗೆ ಕಳೆದ ಕೆಲ ಸಮಯದಿಂದ ಹಸಿರು ದಳ ಸಂಸ್ಥೆಯ ಸದಸ್ಯರು ಈ ಜಾಗದಲ್ಲಿ ಪ್ಲೆಕಾರ್ಡ್ ಹಿಡಿದು ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅವರ ಕಾರ್ಯ ಶ್ಲಾಘನೀಯ ಎಂದು ಶಾಸಕ ಕಾಮತ್ ಹೇಳಿದರು.
ಸ್ವಚ್ಚತಾ ಕಾರ್ಯಗಳು ಸೀಮಿತ ಸಂಸ್ಥೆಗಳು ಅಥವಾ ವ್ಯಕ್ತಿಯಿಂದ ಆಗುವಂತದ್ದಲ್ಲ. ಪ್ರತಿಯೊಬ್ಬ ನಾಗರಿಕರಿಗೂ ತನ್ನದೇ ಆದ ಜವಬ್ದಾರಿಗಳಿರುತ್ತವೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು, ತ್ಯಾಜ್ಯಗಳನ್ನು ಎಸೆಯುವುದರಿಂದ ವಿವಿಧ ಸಮಸ್ಯೆಗಳು ತಲೆದೋರುತ್ತವೆ. ಹಾಗಾಗಿ ಪ್ರತಿಯೊಬ್ಬರೂ ಕೂಡ ಸ್ವಚ್ಚತೆಯ ನಿಟ್ಟಿನಲ್ಲಿ ಚಿಂತಿಸಬೇಕು. ಆ ಮೂಲಕ ಸ್ವಚ್ಛ ಭಾರತದ ಪರಿಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಕೈಜೋಡಿಸಬೇಕೆಂದು ಶಾಸಕ ಕಾಮತ್ ತಿಳಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಪಾಲಿಕೆ ಸದಸ್ಯರಾದ ವೀಣಾ ಮಂಗಳ, ಬಿಜೆಪಿ ಪ್ರಮುಖರಾದ ಸುರೇಂದ್ರ ಜೆಪ್ಪಿನಮೊಗರು, ಹಸಿರು ದಳ ಸಂಸ್ಥೆಯ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm