ಬ್ರೇಕಿಂಗ್ ನ್ಯೂಸ್
23-01-21 03:31 pm Mangalore Correspondent ಕರಾವಳಿ
ಮಂಗಳೂರು, ಜ.23 : ಮಂಗಳೂರು - ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ನೇತ್ರಾವತಿ ಸೇತುವೆ ಸಮೀಪ ವಾಹನ ಸವಾರರು ತ್ಯಾಜ್ಯ ಎಸೆಯುವ ಜಾಗದಲ್ಲಿ ಹಸಿರು ದಳ ಸಂಸ್ಥೆಯ ಸದಸ್ಯರು ಜಾಗೃತಿ ಮೂಡಿಸುವ ಕಾರ್ಯವನ್ನು ಶಾಸಕ ವೇದವ್ಯಾಸ್ ಕಾಮತ್ ಶ್ಲಾಘಿಸಿದ್ದಾರೆ.
ಸ್ಥಳಕ್ಕೆ ತೆರಳಿದ ಶಾಸಕ ಕಾಮತ್ ಅವರು, ನೇತ್ರಾವತಿ ಸೇತುವೆಯ ಬಳಿ ಖಾಲಿ ಜಾಗದಲ್ಲಿ ಪ್ರತಿನಿತ್ಯ ವಾಹನ ಸವಾರರು ಕಸ ಎಸೆದು ಹೋಗುವ ಕುರಿತು ಮಾಹಿತಿ ನೀಡಿದ್ದರು. ಹಲವಾರು ಬಾರಿ ಸ್ಥಳವನ್ನು ಸ್ವಚ್ಛಗೊಳಿಸಿದರು ತ್ಯಾಜ್ಯ ಎಸೆಯುವುದು ನಿಂತಿರಲಿಲ್ಲ. ಇತ್ತೀಚೆಗೆ ಕಳೆದ ಕೆಲ ಸಮಯದಿಂದ ಹಸಿರು ದಳ ಸಂಸ್ಥೆಯ ಸದಸ್ಯರು ಈ ಜಾಗದಲ್ಲಿ ಪ್ಲೆಕಾರ್ಡ್ ಹಿಡಿದು ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅವರ ಕಾರ್ಯ ಶ್ಲಾಘನೀಯ ಎಂದು ಶಾಸಕ ಕಾಮತ್ ಹೇಳಿದರು.

ಸ್ವಚ್ಚತಾ ಕಾರ್ಯಗಳು ಸೀಮಿತ ಸಂಸ್ಥೆಗಳು ಅಥವಾ ವ್ಯಕ್ತಿಯಿಂದ ಆಗುವಂತದ್ದಲ್ಲ. ಪ್ರತಿಯೊಬ್ಬ ನಾಗರಿಕರಿಗೂ ತನ್ನದೇ ಆದ ಜವಬ್ದಾರಿಗಳಿರುತ್ತವೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು, ತ್ಯಾಜ್ಯಗಳನ್ನು ಎಸೆಯುವುದರಿಂದ ವಿವಿಧ ಸಮಸ್ಯೆಗಳು ತಲೆದೋರುತ್ತವೆ. ಹಾಗಾಗಿ ಪ್ರತಿಯೊಬ್ಬರೂ ಕೂಡ ಸ್ವಚ್ಚತೆಯ ನಿಟ್ಟಿನಲ್ಲಿ ಚಿಂತಿಸಬೇಕು. ಆ ಮೂಲಕ ಸ್ವಚ್ಛ ಭಾರತದ ಪರಿಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಕೈಜೋಡಿಸಬೇಕೆಂದು ಶಾಸಕ ಕಾಮತ್ ತಿಳಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಪಾಲಿಕೆ ಸದಸ್ಯರಾದ ವೀಣಾ ಮಂಗಳ, ಬಿಜೆಪಿ ಪ್ರಮುಖರಾದ ಸುರೇಂದ್ರ ಜೆಪ್ಪಿನಮೊಗರು, ಹಸಿರು ದಳ ಸಂಸ್ಥೆಯ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm