ಬ್ರೇಕಿಂಗ್ ನ್ಯೂಸ್
23-01-21 04:21 pm Mangalore Correspondent ಕರಾವಳಿ
ಮಂಗಳೂರು, ಜ.23 : ಸಿಎಂ ತವರು ಜಿಲ್ಲೆಯಲ್ಲೇ ಅಕ್ರಮ ಗಣಿಗಾರಿಕೆ ಕಂಡುಬಂದಿದ್ದಲ್ಲದೆ, ಭಾರೀ ಸ್ಫೋಟ ಆಗಿರುವುದು ಅಲ್ಲಿನ ಕಾನೂನು ವ್ಯವಸ್ಥೆ ಬಗ್ಗೆ ಶಂಕೆ ಮೂಡಿಸಿದೆ. ಪೊಲೀಸರು ಜನ ಸಾಮಾನ್ಯರ ಮರಳು ಗಾಡಿಯನ್ನು ವಶ ಪಡಿಸಿಕೊಳ್ಳತ್ತಾರೆ. ಯಾಕೆ ಲಾರಿಯಲ್ಲಿ ಸ್ಪೋಟಕ ವಸ್ತು ಸಾಗಟ ಮಾಡುವವರನ್ನ ಹಿಡಿಯಲ್ಲಾ.. ಇದು ಅಲ್ಲಿನ ಗಣಿ ಇಲಾಖೆ ಅಧಿಕಾರಿಗಳಿಗೆ ಗೊತ್ತಿರಲಿಲ್ಲವೇ ? ಸಂಬಂಧಪಟ್ಟ ಗಣಿ ಇಲಾಖೆ ಅಧಿಕಾರಿಗಳನ್ನ ಕೂಡಲೇ ಸಂಸ್ಪೆಂಡ್ ಮಾಡಬೇಕು ಎಂದು ಮಾಜಿ ಸಚಿವ ಯು.ಟಿ ಖಾದರ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಖಾದರ್, ಸ್ಫೋಟ ಘಟನೆಯಿಂದ ಜನಸಾಮಾನ್ಯರ ಮನೆಗಳು ಹಾಳಾಗಿವೆ. ಅಕ್ರಮ ಎಂದು ಗೊತ್ತಿದ್ದರೂ ಯಾಕೆ ಸರಕಾರ ಇದರ ಬಗ್ಗೆ ತನಿಖೆ ಮಾಡಲು ಹಿಂದೇಟು ಹಾಕಿತ್ತು. ಇದರಲ್ಲಿ ಯಾರೆಲ್ಲಾ ಶಾಮೀಲಾತಿ ಇದ್ದಾರೆ ಜನರಿಗೆ ಗೊತ್ತಾಗಬೇಕು. ಈ ಘಟನೆಯಿಂದ ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯ ಜನರ ಜೀವನದ ಮೇಲೆ ಪರಿಣಾಮ ಬೀರಲಿದೆ. ಆಸುಪಾಸಿನಲ್ಲಿ ಮನೆ ಹಾಳಾದವರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಅರ್ನಾಬ್ ವಿರುದ್ಧ ಕ್ರಮಕ್ಕೆ ಆಗ್ರಹ
ದೇಶದ ರಕ್ಷಣೆ ಉದ್ದೇಶದಿಂದ ಭದ್ರತಾ ವಿಷಯ ಗೌಪ್ಯವಾಗಿರಬೇಕು. ಆದರೆ, ರಿಪಬ್ಲಿಕ್ ಟಿವಿ ಮುಖ್ಯಸ್ಥರು ಹೀನ ಕೃತ್ಯದಲ್ಲಿ ತೊಡಗಿದ್ದಾರೆ. ದೇಶದ ಭದ್ರತೆ ವಿಚಾರವನ್ನು ಅಧಿಕಾರಿಗಳು ಸೋರಿಕೆ ಮಾಡಿದ್ದಾರೆ. ಹೀನ ಕೃತ್ಯದ ಹೊಣೆಯನ್ನ ನೇರವಾಗಿ ಪ್ರಧಾನ ಮಂತ್ರಿ ಹೊರಬೇಕು. ಘಟನೆ ಬಗ್ಗೆ ಸದನ ಸಮಿತಿಯಿಂದ ತನಿಖೆ ನಡೆಯಬೇಕು ಎಂದು ಕೆಪಿಸಿಸಿ ವಕ್ತಾರ, ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ್ ಹೇಳಿದ್ದಾರೆ.
ಅರ್ನಾಬ್ ಗೋಸ್ವಾಮಿಯ ವಾಟ್ಸಪ್ ಚಾಟ್ ನೋಡಿದರೆ ಸಂಪೂರ್ಣವಾಗಿ ಅರ್ಥವಾಗುತ್ತೆ. ಇದು ಒಂದು ದೇಶದೋಹ್ರದ ಕೃತ್ಯವೆಂದು ತಿಳಿದುಬರುತ್ತದೆ. ಇದರಿಂದ ಪುಲ್ವಾಮ ದಾಳಿಯ ಕೃತ್ಯ ಮೊದಲೇ ನಿರ್ಧಾರವಾಗಿತ್ತಾ ಎನ್ನುವ ಸಂಶಯ ಕಾಡುವಂತಾಗಿದೆ. ರಾಜಕೀಯ ದುರುದ್ದೇಶದಿಂದ ಈ ದಾಳಿ ನಡೆಸಿದ್ದಾರೆಯೇ ಎನ್ನುವ ಶಂಕೆ ಮೂಡುತ್ತಿದೆ. ಅರ್ನಾಬ್ ಗೋಸ್ವಾಮಿಯ ವಾಹಿನಿ TRP ಗಾಗಿ ಈ ಕೃತ್ಯ ನಡೆಸಿದೆ ಎನ್ನುವುದಕ್ಕೆ ಬೇರೆ ಸಾಕ್ಷಿ ಬೇಕಿಲ್ಲ. ದೇಶದ್ರೋಹಿ ಕೃತ್ಯದಲ್ಲಿ ತೊಡಗಿರುವ ಅರ್ನಾಬ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm