ಬ್ರೇಕಿಂಗ್ ನ್ಯೂಸ್
23-01-21 04:21 pm Mangalore Correspondent ಕರಾವಳಿ
ಮಂಗಳೂರು, ಜ.23 : ಸಿಎಂ ತವರು ಜಿಲ್ಲೆಯಲ್ಲೇ ಅಕ್ರಮ ಗಣಿಗಾರಿಕೆ ಕಂಡುಬಂದಿದ್ದಲ್ಲದೆ, ಭಾರೀ ಸ್ಫೋಟ ಆಗಿರುವುದು ಅಲ್ಲಿನ ಕಾನೂನು ವ್ಯವಸ್ಥೆ ಬಗ್ಗೆ ಶಂಕೆ ಮೂಡಿಸಿದೆ. ಪೊಲೀಸರು ಜನ ಸಾಮಾನ್ಯರ ಮರಳು ಗಾಡಿಯನ್ನು ವಶ ಪಡಿಸಿಕೊಳ್ಳತ್ತಾರೆ. ಯಾಕೆ ಲಾರಿಯಲ್ಲಿ ಸ್ಪೋಟಕ ವಸ್ತು ಸಾಗಟ ಮಾಡುವವರನ್ನ ಹಿಡಿಯಲ್ಲಾ.. ಇದು ಅಲ್ಲಿನ ಗಣಿ ಇಲಾಖೆ ಅಧಿಕಾರಿಗಳಿಗೆ ಗೊತ್ತಿರಲಿಲ್ಲವೇ ? ಸಂಬಂಧಪಟ್ಟ ಗಣಿ ಇಲಾಖೆ ಅಧಿಕಾರಿಗಳನ್ನ ಕೂಡಲೇ ಸಂಸ್ಪೆಂಡ್ ಮಾಡಬೇಕು ಎಂದು ಮಾಜಿ ಸಚಿವ ಯು.ಟಿ ಖಾದರ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಖಾದರ್, ಸ್ಫೋಟ ಘಟನೆಯಿಂದ ಜನಸಾಮಾನ್ಯರ ಮನೆಗಳು ಹಾಳಾಗಿವೆ. ಅಕ್ರಮ ಎಂದು ಗೊತ್ತಿದ್ದರೂ ಯಾಕೆ ಸರಕಾರ ಇದರ ಬಗ್ಗೆ ತನಿಖೆ ಮಾಡಲು ಹಿಂದೇಟು ಹಾಕಿತ್ತು. ಇದರಲ್ಲಿ ಯಾರೆಲ್ಲಾ ಶಾಮೀಲಾತಿ ಇದ್ದಾರೆ ಜನರಿಗೆ ಗೊತ್ತಾಗಬೇಕು. ಈ ಘಟನೆಯಿಂದ ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯ ಜನರ ಜೀವನದ ಮೇಲೆ ಪರಿಣಾಮ ಬೀರಲಿದೆ. ಆಸುಪಾಸಿನಲ್ಲಿ ಮನೆ ಹಾಳಾದವರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಅರ್ನಾಬ್ ವಿರುದ್ಧ ಕ್ರಮಕ್ಕೆ ಆಗ್ರಹ
ದೇಶದ ರಕ್ಷಣೆ ಉದ್ದೇಶದಿಂದ ಭದ್ರತಾ ವಿಷಯ ಗೌಪ್ಯವಾಗಿರಬೇಕು. ಆದರೆ, ರಿಪಬ್ಲಿಕ್ ಟಿವಿ ಮುಖ್ಯಸ್ಥರು ಹೀನ ಕೃತ್ಯದಲ್ಲಿ ತೊಡಗಿದ್ದಾರೆ. ದೇಶದ ಭದ್ರತೆ ವಿಚಾರವನ್ನು ಅಧಿಕಾರಿಗಳು ಸೋರಿಕೆ ಮಾಡಿದ್ದಾರೆ. ಹೀನ ಕೃತ್ಯದ ಹೊಣೆಯನ್ನ ನೇರವಾಗಿ ಪ್ರಧಾನ ಮಂತ್ರಿ ಹೊರಬೇಕು. ಘಟನೆ ಬಗ್ಗೆ ಸದನ ಸಮಿತಿಯಿಂದ ತನಿಖೆ ನಡೆಯಬೇಕು ಎಂದು ಕೆಪಿಸಿಸಿ ವಕ್ತಾರ, ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ್ ಹೇಳಿದ್ದಾರೆ.

ಅರ್ನಾಬ್ ಗೋಸ್ವಾಮಿಯ ವಾಟ್ಸಪ್ ಚಾಟ್ ನೋಡಿದರೆ ಸಂಪೂರ್ಣವಾಗಿ ಅರ್ಥವಾಗುತ್ತೆ. ಇದು ಒಂದು ದೇಶದೋಹ್ರದ ಕೃತ್ಯವೆಂದು ತಿಳಿದುಬರುತ್ತದೆ. ಇದರಿಂದ ಪುಲ್ವಾಮ ದಾಳಿಯ ಕೃತ್ಯ ಮೊದಲೇ ನಿರ್ಧಾರವಾಗಿತ್ತಾ ಎನ್ನುವ ಸಂಶಯ ಕಾಡುವಂತಾಗಿದೆ. ರಾಜಕೀಯ ದುರುದ್ದೇಶದಿಂದ ಈ ದಾಳಿ ನಡೆಸಿದ್ದಾರೆಯೇ ಎನ್ನುವ ಶಂಕೆ ಮೂಡುತ್ತಿದೆ. ಅರ್ನಾಬ್ ಗೋಸ್ವಾಮಿಯ ವಾಹಿನಿ TRP ಗಾಗಿ ಈ ಕೃತ್ಯ ನಡೆಸಿದೆ ಎನ್ನುವುದಕ್ಕೆ ಬೇರೆ ಸಾಕ್ಷಿ ಬೇಕಿಲ್ಲ. ದೇಶದ್ರೋಹಿ ಕೃತ್ಯದಲ್ಲಿ ತೊಡಗಿರುವ ಅರ್ನಾಬ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm