ಬ್ರೇಕಿಂಗ್ ನ್ಯೂಸ್
23-01-21 04:21 pm Mangalore Correspondent ಕರಾವಳಿ
ಮಂಗಳೂರು, ಜ.23 : ಸಿಎಂ ತವರು ಜಿಲ್ಲೆಯಲ್ಲೇ ಅಕ್ರಮ ಗಣಿಗಾರಿಕೆ ಕಂಡುಬಂದಿದ್ದಲ್ಲದೆ, ಭಾರೀ ಸ್ಫೋಟ ಆಗಿರುವುದು ಅಲ್ಲಿನ ಕಾನೂನು ವ್ಯವಸ್ಥೆ ಬಗ್ಗೆ ಶಂಕೆ ಮೂಡಿಸಿದೆ. ಪೊಲೀಸರು ಜನ ಸಾಮಾನ್ಯರ ಮರಳು ಗಾಡಿಯನ್ನು ವಶ ಪಡಿಸಿಕೊಳ್ಳತ್ತಾರೆ. ಯಾಕೆ ಲಾರಿಯಲ್ಲಿ ಸ್ಪೋಟಕ ವಸ್ತು ಸಾಗಟ ಮಾಡುವವರನ್ನ ಹಿಡಿಯಲ್ಲಾ.. ಇದು ಅಲ್ಲಿನ ಗಣಿ ಇಲಾಖೆ ಅಧಿಕಾರಿಗಳಿಗೆ ಗೊತ್ತಿರಲಿಲ್ಲವೇ ? ಸಂಬಂಧಪಟ್ಟ ಗಣಿ ಇಲಾಖೆ ಅಧಿಕಾರಿಗಳನ್ನ ಕೂಡಲೇ ಸಂಸ್ಪೆಂಡ್ ಮಾಡಬೇಕು ಎಂದು ಮಾಜಿ ಸಚಿವ ಯು.ಟಿ ಖಾದರ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಖಾದರ್, ಸ್ಫೋಟ ಘಟನೆಯಿಂದ ಜನಸಾಮಾನ್ಯರ ಮನೆಗಳು ಹಾಳಾಗಿವೆ. ಅಕ್ರಮ ಎಂದು ಗೊತ್ತಿದ್ದರೂ ಯಾಕೆ ಸರಕಾರ ಇದರ ಬಗ್ಗೆ ತನಿಖೆ ಮಾಡಲು ಹಿಂದೇಟು ಹಾಕಿತ್ತು. ಇದರಲ್ಲಿ ಯಾರೆಲ್ಲಾ ಶಾಮೀಲಾತಿ ಇದ್ದಾರೆ ಜನರಿಗೆ ಗೊತ್ತಾಗಬೇಕು. ಈ ಘಟನೆಯಿಂದ ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯ ಜನರ ಜೀವನದ ಮೇಲೆ ಪರಿಣಾಮ ಬೀರಲಿದೆ. ಆಸುಪಾಸಿನಲ್ಲಿ ಮನೆ ಹಾಳಾದವರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಅರ್ನಾಬ್ ವಿರುದ್ಧ ಕ್ರಮಕ್ಕೆ ಆಗ್ರಹ
ದೇಶದ ರಕ್ಷಣೆ ಉದ್ದೇಶದಿಂದ ಭದ್ರತಾ ವಿಷಯ ಗೌಪ್ಯವಾಗಿರಬೇಕು. ಆದರೆ, ರಿಪಬ್ಲಿಕ್ ಟಿವಿ ಮುಖ್ಯಸ್ಥರು ಹೀನ ಕೃತ್ಯದಲ್ಲಿ ತೊಡಗಿದ್ದಾರೆ. ದೇಶದ ಭದ್ರತೆ ವಿಚಾರವನ್ನು ಅಧಿಕಾರಿಗಳು ಸೋರಿಕೆ ಮಾಡಿದ್ದಾರೆ. ಹೀನ ಕೃತ್ಯದ ಹೊಣೆಯನ್ನ ನೇರವಾಗಿ ಪ್ರಧಾನ ಮಂತ್ರಿ ಹೊರಬೇಕು. ಘಟನೆ ಬಗ್ಗೆ ಸದನ ಸಮಿತಿಯಿಂದ ತನಿಖೆ ನಡೆಯಬೇಕು ಎಂದು ಕೆಪಿಸಿಸಿ ವಕ್ತಾರ, ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ್ ಹೇಳಿದ್ದಾರೆ.

ಅರ್ನಾಬ್ ಗೋಸ್ವಾಮಿಯ ವಾಟ್ಸಪ್ ಚಾಟ್ ನೋಡಿದರೆ ಸಂಪೂರ್ಣವಾಗಿ ಅರ್ಥವಾಗುತ್ತೆ. ಇದು ಒಂದು ದೇಶದೋಹ್ರದ ಕೃತ್ಯವೆಂದು ತಿಳಿದುಬರುತ್ತದೆ. ಇದರಿಂದ ಪುಲ್ವಾಮ ದಾಳಿಯ ಕೃತ್ಯ ಮೊದಲೇ ನಿರ್ಧಾರವಾಗಿತ್ತಾ ಎನ್ನುವ ಸಂಶಯ ಕಾಡುವಂತಾಗಿದೆ. ರಾಜಕೀಯ ದುರುದ್ದೇಶದಿಂದ ಈ ದಾಳಿ ನಡೆಸಿದ್ದಾರೆಯೇ ಎನ್ನುವ ಶಂಕೆ ಮೂಡುತ್ತಿದೆ. ಅರ್ನಾಬ್ ಗೋಸ್ವಾಮಿಯ ವಾಹಿನಿ TRP ಗಾಗಿ ಈ ಕೃತ್ಯ ನಡೆಸಿದೆ ಎನ್ನುವುದಕ್ಕೆ ಬೇರೆ ಸಾಕ್ಷಿ ಬೇಕಿಲ್ಲ. ದೇಶದ್ರೋಹಿ ಕೃತ್ಯದಲ್ಲಿ ತೊಡಗಿರುವ ಅರ್ನಾಬ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm