ಬ್ರೇಕಿಂಗ್ ನ್ಯೂಸ್
23-01-21 05:29 pm Mangalore Correspondent ಕರಾವಳಿ
ಮಂಗಳೂರು, ಜ.23 : ಮಂಗಳೂರು ಬಹಳ ಸಾಮರಸ್ಯದಿಂದ ಇರುವ ನಗರ. ಇತರ ರಾಜ್ಯಗಳಲ್ಲದೆ, ದೇಶ -ವಿದೇಶಗಳಿಂದಲೂ ಬಂದು ಜನರು ಇಲ್ಲಿ ವಾಸಿಸುತ್ತಿದ್ದಾರೆ. ಕಿಡಿಗೇಡಿಗಳ ಕೆಲವು ಕೃತ್ಯದಿಂದಾಗಿ ಮಂಗಳೂರಿನ ಹೆಸರು ಹಾಳಾಗಬಾರದು ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಹೇಳಿದರು.
ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಕಮಿಷನರ್, ಮಂಗಳೂರಿನಲ್ಲಿ ಇತ್ತೀಚೆಗೆ ಧಾರ್ಮಿಕ ಕೇಂದ್ರಗಳ ಹುಂಡಿಯಲ್ಲಿ ಅನುಚಿತ ವಸ್ತುಗಳು ಹಾಗೂ ಅಸಹ್ಯಕರ ರೀತಿಯಲ್ಲಿ ಬರೆದ ಕಾಗದಗಳನ್ನು ಹಾಕಿದ್ದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ನಾಲ್ಕೈದು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದರು.
ಈ ರೀತಿಯ ಕೃತ್ಯಗಳಲ್ಲಿ ತೊಡಗಿಸಿಕೊಂಡವರು ತಕ್ಷಣ ಇದನ್ನು ನಿಲ್ಲಿಸಬೇಕು. ಅಲ್ಲದೆ ಇದಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಹಚ್ಚುವ ಕೆಲಸ ಶೀಘ್ರ ಮಾಡಲಿದ್ದೇವೆ. ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳು ಇರಬಹುದು, ಅಲ್ಲಿನ ಆಡಳಿತ ಸಮಿತಿ ಇಂತಹ ಕಡೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದು. ಸೂಕ್ತವಾದ ಭದ್ರತಾ ವ್ಯವಸ್ಥೆ ನಿಯೋಜಿಸುವ ಕಾರ್ಯ ಮಾಡಬೇಕೆಂದು ಕಮಿಷನರ್ ಮನವಿ ಮಾಡಿದರು.
ಸಾರ್ವಜನಿಕರು ಇಂತಹ ಕೃತ್ಯಗಳ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಇಲಾಖೆ ಅಥವಾ ನೇರವಾಗಿ ನನಗೂ ಮಾಹಿತಿ ನೀಡಬಹುದು. ಈ ಮೂಲಕ ಇಂತಹ ಕೃತ್ಯ ನಡೆಸುವ ಕಿಡಿಗೇಡಿಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಲು ಸಹಕಾರಿಯಾಗುತ್ತದೆ. ಸಾರ್ವಜನಿಕರು ಈ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಕಂಟ್ರೋಲ್ ದೂರವಾಣಿ ಸಂಖ್ಯೆ 9480802300ಗೆ ವಾಟ್ಸ್ ಆ್ಯಪ್ ಅಥವಾ ಮೆಸೇಜ್ ಮೂಲಕ ತಿಳಿಸಬಹುದು ಎಂದು ಪೊಲೀಸ್ ಕಮಿಷನರ್ ವಿನಂತಿಸಿಕೊಂಡರು.
(1/2)Appeal to people of Mangaluru Commisionerate to share information regarding any untoward developments in your neighborhood. pic.twitter.com/DvWTMB3PUz
— N. Shashi Kumar CP Mangaluru City (@compolmlr) January 23, 2021
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am