ಬ್ರೇಕಿಂಗ್ ನ್ಯೂಸ್
25-01-21 01:18 pm Mangalore Correspondent ಕರಾವಳಿ
ಮಂಗಳೂರು, ಜ.25: ಕೇಂದ್ರ ಬಿಜೆಪಿ ಸರಕಾರ ಜಾರಿಗೆ ತರುತ್ತಿರುವ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ಮತ್ತು ದೇಶಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದರು.
ದೇಶಾದ್ಯಂತ ಚಳವಳಿ ನಿರತ ರೈತರನ್ನು ಬೆಂಬಲಿಸಿ ಕಾಂಗ್ರೆಸ್ ಹೋರಾಟ ಹಮ್ಮಿಕೊಂಡಿದ್ದು, ಕರ್ನಾಟಕದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರ ಮತ್ತು ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಅದರಂತೆ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗಿದೆ.


ಪ್ರತಿಭಟನೆಯಲ್ಲಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜೆ. ಆರ್. ಲೋಬೋ, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದು ಈಗ ರೈತರನ್ನೇ ವಂಚಿಸುತ್ತಿವೆ. ಎರಡು ತಿಂಗಳಿನಿಂದ ರೈತರು ಬೀದಿಯಲ್ಲಿದ್ದಾರೆ, ಅರುವತ್ತರಷ್ಟು ರೈತರು ಚಳವಳಿ ಮಾಡುತ್ತಲೇ ಮರಣ ಹೊಂದಿದ್ದಾರೆ. ಆದರೆ ಮೋದಿ ಸರಕಾರವು ಮಾನವೀಯತೆ ಇಲ್ಲದ ರೀತಿ ರೈತರನ್ನು ನಡೆಸಿಕೊಳ್ಳುತ್ತಿದೆ. ಈ ದೇಶದ ಬುನಾದಿಯಾಗಿರುವ ರೈತರಿಗೆ ನ್ಯಾಯ ಕೊಡಿಸಲಾಗದ ಬಿಜೆಪಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ಇಲ್ಲ. ಕಾಂಗ್ರೆಸ್ ಸರಕಾರ ಸಾಧಿಸಿದ ಕೃಷಿ ಕ್ರಾಂತಿ, ಭೂಸುಧಾರಣೆ ಎಲ್ಲವನ್ನೂ ಬಿಜೆಪಿ ನಾಶ ಪಡಿಸುತ್ತಿದೆ. ಇದು ಬಿಜೆಪಿಯ ಅವನತಿಗೆ ಕಾರಣವಾಗಲಿದೆ ಎಂದರು.

ಸ್ಥಳೀಯ ಕಾರ್ಪೊರೇಟರ್ ವಿನಯರಾಜ್ ಮಾತನಾಡಿದರು. ಪ್ರತಿಭಟನೆಯಲ್ಲಿ ನಮಿತಾ ರಾವ್, ಗೀತಾ, ಮರಿಯಮ್ಮ ಥಾಮಸ್, ಮಂಜುಳ ನಾಯಕ್, ಜೀನತ್ ಸಂಶುದ್ದೀನ್, ಶಶಿಧರ ಹೆಗ್ಡೆ, ಕೇಶವ ಮರೋಳಿ, ನೀರಜ್ ಪಾಲ್, ಭರತೇಶ್ ಅಮೀನ್, ಟಿ. ಕೆ. ಸುಧೀರ್, ವಿಶ್ವಾಸ್ ದಾಸ್, ಯೂಸುಫ್ ಉಚ್ಚಿಲ, ಗಣೇಶ ರಾವ್ ಮೊದಲಾದವರು ಸೇರಿದ್ದರು.
Video:
In a show of support to the farmers protesting against the farm laws in New Delhi and Karnataka Mangalore, Congress leaders held a mass protest.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm