ಬ್ರೇಕಿಂಗ್ ನ್ಯೂಸ್
25-01-21 01:18 pm Mangalore Correspondent ಕರಾವಳಿ
ಮಂಗಳೂರು, ಜ.25: ಕೇಂದ್ರ ಬಿಜೆಪಿ ಸರಕಾರ ಜಾರಿಗೆ ತರುತ್ತಿರುವ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ಮತ್ತು ದೇಶಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದರು.
ದೇಶಾದ್ಯಂತ ಚಳವಳಿ ನಿರತ ರೈತರನ್ನು ಬೆಂಬಲಿಸಿ ಕಾಂಗ್ರೆಸ್ ಹೋರಾಟ ಹಮ್ಮಿಕೊಂಡಿದ್ದು, ಕರ್ನಾಟಕದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರ ಮತ್ತು ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಅದರಂತೆ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗಿದೆ.


ಪ್ರತಿಭಟನೆಯಲ್ಲಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜೆ. ಆರ್. ಲೋಬೋ, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದು ಈಗ ರೈತರನ್ನೇ ವಂಚಿಸುತ್ತಿವೆ. ಎರಡು ತಿಂಗಳಿನಿಂದ ರೈತರು ಬೀದಿಯಲ್ಲಿದ್ದಾರೆ, ಅರುವತ್ತರಷ್ಟು ರೈತರು ಚಳವಳಿ ಮಾಡುತ್ತಲೇ ಮರಣ ಹೊಂದಿದ್ದಾರೆ. ಆದರೆ ಮೋದಿ ಸರಕಾರವು ಮಾನವೀಯತೆ ಇಲ್ಲದ ರೀತಿ ರೈತರನ್ನು ನಡೆಸಿಕೊಳ್ಳುತ್ತಿದೆ. ಈ ದೇಶದ ಬುನಾದಿಯಾಗಿರುವ ರೈತರಿಗೆ ನ್ಯಾಯ ಕೊಡಿಸಲಾಗದ ಬಿಜೆಪಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ಇಲ್ಲ. ಕಾಂಗ್ರೆಸ್ ಸರಕಾರ ಸಾಧಿಸಿದ ಕೃಷಿ ಕ್ರಾಂತಿ, ಭೂಸುಧಾರಣೆ ಎಲ್ಲವನ್ನೂ ಬಿಜೆಪಿ ನಾಶ ಪಡಿಸುತ್ತಿದೆ. ಇದು ಬಿಜೆಪಿಯ ಅವನತಿಗೆ ಕಾರಣವಾಗಲಿದೆ ಎಂದರು.

ಸ್ಥಳೀಯ ಕಾರ್ಪೊರೇಟರ್ ವಿನಯರಾಜ್ ಮಾತನಾಡಿದರು. ಪ್ರತಿಭಟನೆಯಲ್ಲಿ ನಮಿತಾ ರಾವ್, ಗೀತಾ, ಮರಿಯಮ್ಮ ಥಾಮಸ್, ಮಂಜುಳ ನಾಯಕ್, ಜೀನತ್ ಸಂಶುದ್ದೀನ್, ಶಶಿಧರ ಹೆಗ್ಡೆ, ಕೇಶವ ಮರೋಳಿ, ನೀರಜ್ ಪಾಲ್, ಭರತೇಶ್ ಅಮೀನ್, ಟಿ. ಕೆ. ಸುಧೀರ್, ವಿಶ್ವಾಸ್ ದಾಸ್, ಯೂಸುಫ್ ಉಚ್ಚಿಲ, ಗಣೇಶ ರಾವ್ ಮೊದಲಾದವರು ಸೇರಿದ್ದರು.
Video:
In a show of support to the farmers protesting against the farm laws in New Delhi and Karnataka Mangalore, Congress leaders held a mass protest.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am