ಬ್ರೇಕಿಂಗ್ ನ್ಯೂಸ್
25-01-21 02:21 pm Mangalore Correspondent ಕರಾವಳಿ
ಮಂಗಳೂರು, ಜ.25: ಕರಾವಳಿಯಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಸಕ್ರಿಯವಾಗಿದ್ದು ಗುಪ್ತಚರ ಅಧಿಕಾರಿಗಳ ಆತಂಕಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅರಣ್ಯ ಭಾಗದಲ್ಲಿ ಸ್ಯಾಟಲೈಟ್ ಫೋನ್ ಮತ್ತೆ ಸಂಪರ್ಕ ಕಂಡುಕೊಂಡಿದ್ದನ್ನು ಕೇಂದ್ರೀಯ ಗುಪ್ತಚರ ಸಂಸ್ಥೆ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಕಳೆದ ಒಂದು ವಾರದಲ್ಲಿ 5 ಬಾರಿ ಸ್ಯಾಟಲೈಟ್ ಫೋನ್ ಸಂಪರ್ಕ ಆಗಿರುವ ಬಗ್ಗೆ ಪತ್ತೆ ಮಾಡಲಾಗಿದ್ದು ನಿಗೂಢ ವ್ಯಕ್ತಿಗಳು ವಿದೇಶಕ್ಕೆ ಸಂಪರ್ಕ ಸಾಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ 5 ಕಡೆಗಳಲ್ಲಿ ನಿಷೇಧಿತ ತುರಾಯ ಫೋನ್ ರಿಂಗಣಿಸಿದ್ದನ್ನು ಕೇಂದ್ರ ಗುಪ್ತಚರ ಸಂಸ್ಥೆ ರಾ ಅಧಿಕಾರಿಗಳು ಖಚಿತ ಪಡಿಸಿದ್ದು ಈ ಬಗ್ಗೆ ರಾಜ್ಯ ಗುಪ್ತಚರ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ನಾವೂರು, ಧರ್ಮಸ್ಥಳ, ಕನಕಮಜಲು ಸೇರಿದಂತೆ 5 ಕಡೆಗಳಲ್ಲಿ ತುರಾಯ ಸ್ಯಾಟಲೈಟ್ ಫೋನ್ ವರ್ಕ್ ಆಗಿದ್ದು ನಿಗೂಢ ವ್ಯಕ್ತಿಗಳ ಜೊತೆ ಸಂಪರ್ಕ ಮಾಡಿವೆ. ಫೋನ್ ಆ್ಯಕ್ಟಿವ್ ಆಗಿರುವ ಪ್ರದೇಶಗಳು ಅರಣ್ಯ ಭಾಗಗಳಾಗಿದ್ದು ಯಾರು, ಯಾರೊಂದಿಗೆ ಮಾತನಾಡಿದ್ದಾರೆ ಎಂಬುದನ್ನು ಅಧಿಕಾರಿಗಳಿಗೆ ಪತ್ತೆ ಮಾಡಲು ಸಾಧ್ಯ ಆಗಿಲ್ಲ. ಈ ಬಗ್ಗೆ ಕೇಂದ್ರ ಮತ್ತು ರಾಜ್ಯದ ಗುಪ್ತಚರ ಅಧಿಕಾರಿಗಳು ತನಿಖೆ ಆರಂಭಿಸಿದ್ದು ತೀವ್ರ ತಲೆಕೆಡಿಸಿ ಕೊಂಡಿದ್ದಾರೆ.

ಫೋನ್ ಸಂಪರ್ಕ ಆಗಿರುವ ಬಗ್ಗೆ ಲೊಕೇಷನ್ ಟ್ರೇಸ್ ಮಾಡಿರೋ 'ರಾ' ಅಧಿಕಾರಿಗಳು ಅದರ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ ನೀಡಿದ್ದಾರೆ.
ಸ್ಯಾಟಲೈಟ್ ಫೋನ್ ಗಳು ಕರಾವಳಿಯಲ್ಲಿ ದಿಢೀರಾಗಿ ಆ್ಯಕ್ಟಿವ್ ಆಗಿರುವುದು ಕುತೂಹಲ ಮತ್ತು ಆತಂಕ ಮೂಡಿಸಿದೆ. ತುರಾಯ ಸ್ಯಾಟಲೈಟ್ ಫೋನ್ ಗಳನ್ನು ಉಗ್ರರು ದುರ್ಬಳಕೆ ಮಾಡುತ್ತಿದ್ದಾರೆಂಬ ನೆಲೆಯಲ್ಲಿ ಭಾರತದಲ್ಲಿ ಅದರ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಈ ನಡುವೆ, ಉಗ್ರರ ಸ್ಲೀಪರ್ ಸೆಲ್ ಎಂದೇ ಹೇಳಲಾಗಿರುವ ಕರಾವಳಿಯಲ್ಲಿ ದಿಢೀರ್ ಆಗಿ ಸ್ಯಾಟಲೈಟ್ ಫೋನ್ ರಿಂಗಣಿಸಿದ್ದು ನಿಗೂಢ ಚಲನವಲನಕ್ಕೆ ಸಾಕ್ಷಿಯೆಂದೇ ಹೇಳಲಾಗುತ್ತಿದೆ. ಹೀಗಾಗಿ ಕೇಂದ್ರ ಗೂಢಚಾರರು ಮತ್ತೆ ನಿಗೂಢವಾಗಿಯೇ ಕರಾವಳಿಯತ್ತ ಹೆಜ್ಜೆ ಇಟ್ಟಿದ್ದಾರೆ.
ಕರಾವಳಿಯಲ್ಲಿ ಮತ್ತೆ ರಿಂಗಣಿಸ್ತಿದೆ ಸ್ಯಾಟಲೈಟ್ ಫೋನ್ !! ಉಗ್ರರ ಸ್ಲೀಪರ್ ಸೆಲ್ ನಂಟಿನ ಬಗ್ಗೆ ಶಂಕೆ !
Satellite phone call signals are once again revealed in Belhangady of Mangalore. Security has been briefed up in Coastal areas.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm