ಬ್ರೇಕಿಂಗ್ ನ್ಯೂಸ್
26-01-21 02:04 pm Mangalore Correspondent ಕರಾವಳಿ
ಕೊಣಾಜೆ, ಜ.26 : ಗಣರಾಜ್ಯೋತ್ಸವ ದಿನ ಸರ್ಕಾರಿ ಸಂಸ್ಥೆಗಳ ಕಟ್ಟಡಗಳಲ್ಲಿ ರಾಷ್ಟ್ರಧ್ವಜವನ್ನು ಗೌರವಪೂರ್ವಕವಾಗಿ ಹಾರಿಸುವುದು ಕಡ್ಡಾಯ. ಆದರೆ, ಇಲ್ಲಿನ ಬೆಳ್ಮ ಗ್ರಾಮ ಪಂಚಾಯತ್ ಕಚೇರಿಯ ಮುಂದೆ ಮಾತ್ರ ಬೆಳಗ್ಗೆ ಹತ್ತು ಗಂಟೆಯಾದರೂ ಧ್ವಜಾರೋಹಣ ಆಗಿರಲಿಲ್ಲ. ಸ್ಥಳೀಯರು ಪಿಡಿಓ ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದು ಬಳಿಕ ಯಾರೋ ಒಬ್ಬ ತಾತ್ಕಾಲಿಕ ಸಿಬಂದಿ ಮೂಲಕ ಧ್ವಜವನ್ನು ಏರಿಸಿದ್ದಾರೆ. ಆತ ಚಪ್ಪಲಿ ಹಾಕಿ, ದೂರದಲ್ಲಿ ನಿಂತು ಧ್ವಜ ಏರಿಸಿದ್ದಲ್ಲದೆ ಧ್ವಜ ವಂದನೆಯನ್ನೂ ಮಾಡದೆ ಅವಮಾನ ಮಾಡಿದ್ದಾನೆ. ರಾಷ್ಟ್ರ ಧ್ವಜಕ್ಕೆ ಅಗೌರವ ಸೂಚಿಸಿದ ವ್ಯಕ್ತಿ ಮತ್ತು ನಿರ್ಲಕ್ಷ್ಯ ತೋರಿದ ಪಿಡಿಓ ಅಧಿಕಾರಿಯನ್ನು ಅಮಾನತು ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಗಣರಾಜ್ಯೋತ್ಸವ ದಿನ ಬೆಳಗ್ಗೆ ಒಂಬತ್ತು ಗಂಟೆ ಮೊದಲು ಸರ್ಕಾರಿ ಸಂಸ್ಥೆಗಳ ಮುಂದೆ ರಾಷ್ಟ್ರ ಧ್ವಜಾರೋಹಣ ಮಾಡಬೇಕೆಂದು ನಿಯಮ ಇದೆ. ಮಂಗಳೂರು ವಿಧಾನಸಭಾ ಕ್ಷೇತ್ರದ ಬೆಳ್ಮ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ಸಮಯಕ್ಕೆ ಸರಿಯಾಗಿ ಧ್ವಜಾರೋಹಣ ನಡೆಯದಿರುವುದು ಸಾರ್ವಜನಿಕವಾಗಿ ಆಕ್ರೋಶಕ್ಕೆ ಕಾರಣವಾಯಿತು.

ಮಂಗಳೂರು ವಿಶ್ವವಿದ್ಯಾಲಯ ರಸ್ತೆಯಲ್ಲೇ ಗ್ರಾಪಂ ಕಚೇರಿ ಇರುವುದರಿಂದ ಹಾಗೂ ಮೂರು ಮೆಡಿಕಲ್ ಕಾಲೇಜು, ಆಸ್ಪತ್ರೆ ಅನತಿ ದೂರದಲ್ಲೇ ಇರುವುದರಿಂದ ಹೊರ ರಾಜ್ಯ ಹಾಗೂ ವಿದೇಶಿ ವಿದ್ಯಾರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಅಧ್ಯಯನ ನಡೆಸುತ್ತಿದ್ದಾರೆ. ಇಂಥ ಜಾಗದಲ್ಲಿ ಬೆಳ್ಮ ಗ್ರಾಮ ಪಂಚಾಯಿತಿ ಎದುರಲ್ಲಿ ಈ ರೀತಿಯ ಅಸಡ್ಡೆ ಆಗಿರುವುದು ಯಾವ ಸಂದೇಶ ತಲುಪಬಹುದು ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ.

ಬೆಳ್ಮ ಪಂಚಾಯಿತಿ ಪಿಡಿಒ ನವೀನ್ ಹೆಗ್ಡೆ ಬಗ್ಗೆ ಭಾರೀ ಆಕ್ರೋಶ ಕೇಳಿಬಂದಿದೆ. ಇದೇ ವೇಳೆ, ಯುವಕನೊಬ್ಬ ಸಾದಾ ಸೀದಾ ಎನ್ನುವ ರೀತಿ ರಾಷ್ಟ್ರ ಧ್ವಜವನ್ನು ಏರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜನರ ಟೀಕೆ, ಟಿಪ್ಪಣಿಗೆ ಆಹಾರವಾಗಿದೆ.
Video:
PDO of Belma gram panchayat Naveen Hedge in Mangalore has shown disrespect to national flag. Villagers urge suspension.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm