ಬ್ರೇಕಿಂಗ್ ನ್ಯೂಸ್
26-01-21 02:04 pm Mangalore Correspondent ಕರಾವಳಿ
ಕೊಣಾಜೆ, ಜ.26 : ಗಣರಾಜ್ಯೋತ್ಸವ ದಿನ ಸರ್ಕಾರಿ ಸಂಸ್ಥೆಗಳ ಕಟ್ಟಡಗಳಲ್ಲಿ ರಾಷ್ಟ್ರಧ್ವಜವನ್ನು ಗೌರವಪೂರ್ವಕವಾಗಿ ಹಾರಿಸುವುದು ಕಡ್ಡಾಯ. ಆದರೆ, ಇಲ್ಲಿನ ಬೆಳ್ಮ ಗ್ರಾಮ ಪಂಚಾಯತ್ ಕಚೇರಿಯ ಮುಂದೆ ಮಾತ್ರ ಬೆಳಗ್ಗೆ ಹತ್ತು ಗಂಟೆಯಾದರೂ ಧ್ವಜಾರೋಹಣ ಆಗಿರಲಿಲ್ಲ. ಸ್ಥಳೀಯರು ಪಿಡಿಓ ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದು ಬಳಿಕ ಯಾರೋ ಒಬ್ಬ ತಾತ್ಕಾಲಿಕ ಸಿಬಂದಿ ಮೂಲಕ ಧ್ವಜವನ್ನು ಏರಿಸಿದ್ದಾರೆ. ಆತ ಚಪ್ಪಲಿ ಹಾಕಿ, ದೂರದಲ್ಲಿ ನಿಂತು ಧ್ವಜ ಏರಿಸಿದ್ದಲ್ಲದೆ ಧ್ವಜ ವಂದನೆಯನ್ನೂ ಮಾಡದೆ ಅವಮಾನ ಮಾಡಿದ್ದಾನೆ. ರಾಷ್ಟ್ರ ಧ್ವಜಕ್ಕೆ ಅಗೌರವ ಸೂಚಿಸಿದ ವ್ಯಕ್ತಿ ಮತ್ತು ನಿರ್ಲಕ್ಷ್ಯ ತೋರಿದ ಪಿಡಿಓ ಅಧಿಕಾರಿಯನ್ನು ಅಮಾನತು ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಗಣರಾಜ್ಯೋತ್ಸವ ದಿನ ಬೆಳಗ್ಗೆ ಒಂಬತ್ತು ಗಂಟೆ ಮೊದಲು ಸರ್ಕಾರಿ ಸಂಸ್ಥೆಗಳ ಮುಂದೆ ರಾಷ್ಟ್ರ ಧ್ವಜಾರೋಹಣ ಮಾಡಬೇಕೆಂದು ನಿಯಮ ಇದೆ. ಮಂಗಳೂರು ವಿಧಾನಸಭಾ ಕ್ಷೇತ್ರದ ಬೆಳ್ಮ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ಸಮಯಕ್ಕೆ ಸರಿಯಾಗಿ ಧ್ವಜಾರೋಹಣ ನಡೆಯದಿರುವುದು ಸಾರ್ವಜನಿಕವಾಗಿ ಆಕ್ರೋಶಕ್ಕೆ ಕಾರಣವಾಯಿತು.

ಮಂಗಳೂರು ವಿಶ್ವವಿದ್ಯಾಲಯ ರಸ್ತೆಯಲ್ಲೇ ಗ್ರಾಪಂ ಕಚೇರಿ ಇರುವುದರಿಂದ ಹಾಗೂ ಮೂರು ಮೆಡಿಕಲ್ ಕಾಲೇಜು, ಆಸ್ಪತ್ರೆ ಅನತಿ ದೂರದಲ್ಲೇ ಇರುವುದರಿಂದ ಹೊರ ರಾಜ್ಯ ಹಾಗೂ ವಿದೇಶಿ ವಿದ್ಯಾರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಅಧ್ಯಯನ ನಡೆಸುತ್ತಿದ್ದಾರೆ. ಇಂಥ ಜಾಗದಲ್ಲಿ ಬೆಳ್ಮ ಗ್ರಾಮ ಪಂಚಾಯಿತಿ ಎದುರಲ್ಲಿ ಈ ರೀತಿಯ ಅಸಡ್ಡೆ ಆಗಿರುವುದು ಯಾವ ಸಂದೇಶ ತಲುಪಬಹುದು ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ.

ಬೆಳ್ಮ ಪಂಚಾಯಿತಿ ಪಿಡಿಒ ನವೀನ್ ಹೆಗ್ಡೆ ಬಗ್ಗೆ ಭಾರೀ ಆಕ್ರೋಶ ಕೇಳಿಬಂದಿದೆ. ಇದೇ ವೇಳೆ, ಯುವಕನೊಬ್ಬ ಸಾದಾ ಸೀದಾ ಎನ್ನುವ ರೀತಿ ರಾಷ್ಟ್ರ ಧ್ವಜವನ್ನು ಏರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜನರ ಟೀಕೆ, ಟಿಪ್ಪಣಿಗೆ ಆಹಾರವಾಗಿದೆ.
Video:
PDO of Belma gram panchayat Naveen Hedge in Mangalore has shown disrespect to national flag. Villagers urge suspension.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm