ಬ್ರೇಕಿಂಗ್ ನ್ಯೂಸ್
26-01-21 08:48 pm Mangaluru Correspondent ಕರಾವಳಿ
ಮಂಗಳೂರು, ಜ.26: ಈ ಬಾರಿ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಏಕೈಕ ವಿದ್ಯಾರ್ಥಿನಿ ಭಾಗವಹಿಸಿದ್ದಾಳೆ. ಪುತ್ತೂರಿನ ಫಿಲೋಮಿನಾ ಕಾಲೇಜಿನ ರಕ್ಷಾ ಅಂಚನ್ ಎನ್ ಸಿಸಿ ಕ್ಯಾಡೆಟ್ ಆಗಿ ಭಾಗವಹಿಸಿದ ವಿದ್ಯಾರ್ಥಿನಿ.
ಸಾಮಾನ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹತ್ತಕ್ಕೂ ಹೆಚ್ಚು ಮಂದಿ ಎನ್ ಸಿಸಿ ಕೆಡೆಟ್ ಗಳು ಭಾಗವಹಿಸುತ್ತಾರೆ. ಆದರೆ, ಈ ಬಾರಿ ಕೊರೊನಾ ನಿರ್ಬಂಧ ಇದ್ದ ಕಾರಣ ಒಬ್ಬರನ್ನು ಮಾತ್ರ ಜಿಲ್ಲೆಯಿಂದ ಆಯ್ಕೆ ಮಾಡಲಾಗಿದೆ. ಪ್ರತಿ ವರ್ಷ ಗೋವಾ- ಕರ್ನಾಟಕ ಡೈರೆಕ್ಟರೇಟ್ ನಿಂದ 111 ಕೆಡೆಟ್ ಗಳು ರಿಪಬ್ಲಿಕ್ ಪರೇಡ್ ನಲ್ಲಿ ಭಾಗವಹಿಸುತ್ತಾರೆ. ಈ ಬಾರಿ ವಿಭಾಗದಿಂದ ಕೇವಲ 26 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಇದರಲ್ಲಿ 16 ಮಂದಿ ಹುಡುಗರಾಗಿದ್ದು, 10 ಮಂದಿ ಹುಡುಗಿಯರು. ದಕ್ಷಿಣ ಕನ್ನಡ ಜಿಲ್ಲೆಯಿಂದ ಕಡಬ ತಾಲೂಕಿನ ರಕ್ಷಾ ಅಂಚನ್ ಒಬ್ಬರಷ್ಟೇ ಆಯ್ಕೆಯಾಗಿದ್ದರು. ರಕ್ಷಾ ಅವರು ನೆಲ್ಯಾಡಿಯ ಉದ್ಯಮಿ ರಮೇಶ್ ಹಾಗೂ ಕಾಂಗ್ರೆಸ್ ನಾಯಕಿ, ಪುತ್ತೂರು ತಾಲೂಕು ಪಂಚಾಯತ್ ಸದಸ್ಯೆ ಉಷಾ ಅಂಚನ್ ಅವರ ಪುತ್ರಿ.


ಕಳೆದ ಡಿ.17ರಂದು ದೆಹಲಿಗೆ ಪ್ರಯಾಣ ಬೆಳೆಸಿದ್ದ ರಕ್ಷಾ 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿದ್ದು ಜ.3ರಿಂದ ಪರೇಟ್ ತರಬೇತಿಯನ್ನು ಪಡೆದಿದ್ದರು. ಅಂದಹಾಗೆ, ರಕ್ಷಾ ಅಂಚನ್ ಫಿಲೋಮಿನಾ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ. ಈ ಹಿಂದೆಲ್ಲಾ ಪ್ರತಿ ವರ್ಷ 11-12 ಮಂದಿ ಕೆಡೆಟ್ ಗಳಿಗೆ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಲು ಅವಕಾಶ ಸಿಗುತ್ತಿತ್ತು. ಆದರೆ, ಈ ಬಾರಿ ಕೊರೊನಾದಿಂದಾಗಿ ಜಿಲ್ಲೆಯಿಂದ ಒಬ್ಬಳನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಈ ಬಾರಿಯೂ ಹಲವು ಮಂದಿ ಪ್ರತಿಭಾವಂತ ಕೆಡೆಟ್ ಗಳಿದ್ದರು.
ಕಳೆದ ಬಾರಿ ರಕ್ಷಾ ಅಂಚನ್ ಅದೇ ಪರೇಡ್ ನಲ್ಲಿ ಭಾಗವಹಿಸುವುದರಿಂದ ಮಿಸ್ ಆಗಿದ್ದಳು. ಹೀಗಾಗಿ ರಕ್ಷಾಳನ್ನು ಈ ಬಾರಿ ಆಯ್ಕೆ ಮಾಡಲಾಯ್ತು ಎಂದು ಕಾಲೇಜಿನ ಎನ್ ಸಿಸಿ ಅಧಿಕಾರಿ ಜಾನ್ಸನ್ ಹೇಳಿದ್ದಾರೆ.
Raksha Anchan, a B Sc student from St Philomena College, Puttur is the ONLY NCC Cadet from Dakshina Kannada to participate in Republic Day Parade in New Delhi on 26 January 2021
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am