ಬ್ರೇಕಿಂಗ್ ನ್ಯೂಸ್
26-01-21 08:48 pm Mangaluru Correspondent ಕರಾವಳಿ
ಮಂಗಳೂರು, ಜ.26: ಈ ಬಾರಿ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಏಕೈಕ ವಿದ್ಯಾರ್ಥಿನಿ ಭಾಗವಹಿಸಿದ್ದಾಳೆ. ಪುತ್ತೂರಿನ ಫಿಲೋಮಿನಾ ಕಾಲೇಜಿನ ರಕ್ಷಾ ಅಂಚನ್ ಎನ್ ಸಿಸಿ ಕ್ಯಾಡೆಟ್ ಆಗಿ ಭಾಗವಹಿಸಿದ ವಿದ್ಯಾರ್ಥಿನಿ.
ಸಾಮಾನ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹತ್ತಕ್ಕೂ ಹೆಚ್ಚು ಮಂದಿ ಎನ್ ಸಿಸಿ ಕೆಡೆಟ್ ಗಳು ಭಾಗವಹಿಸುತ್ತಾರೆ. ಆದರೆ, ಈ ಬಾರಿ ಕೊರೊನಾ ನಿರ್ಬಂಧ ಇದ್ದ ಕಾರಣ ಒಬ್ಬರನ್ನು ಮಾತ್ರ ಜಿಲ್ಲೆಯಿಂದ ಆಯ್ಕೆ ಮಾಡಲಾಗಿದೆ. ಪ್ರತಿ ವರ್ಷ ಗೋವಾ- ಕರ್ನಾಟಕ ಡೈರೆಕ್ಟರೇಟ್ ನಿಂದ 111 ಕೆಡೆಟ್ ಗಳು ರಿಪಬ್ಲಿಕ್ ಪರೇಡ್ ನಲ್ಲಿ ಭಾಗವಹಿಸುತ್ತಾರೆ. ಈ ಬಾರಿ ವಿಭಾಗದಿಂದ ಕೇವಲ 26 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಇದರಲ್ಲಿ 16 ಮಂದಿ ಹುಡುಗರಾಗಿದ್ದು, 10 ಮಂದಿ ಹುಡುಗಿಯರು. ದಕ್ಷಿಣ ಕನ್ನಡ ಜಿಲ್ಲೆಯಿಂದ ಕಡಬ ತಾಲೂಕಿನ ರಕ್ಷಾ ಅಂಚನ್ ಒಬ್ಬರಷ್ಟೇ ಆಯ್ಕೆಯಾಗಿದ್ದರು. ರಕ್ಷಾ ಅವರು ನೆಲ್ಯಾಡಿಯ ಉದ್ಯಮಿ ರಮೇಶ್ ಹಾಗೂ ಕಾಂಗ್ರೆಸ್ ನಾಯಕಿ, ಪುತ್ತೂರು ತಾಲೂಕು ಪಂಚಾಯತ್ ಸದಸ್ಯೆ ಉಷಾ ಅಂಚನ್ ಅವರ ಪುತ್ರಿ.


ಕಳೆದ ಡಿ.17ರಂದು ದೆಹಲಿಗೆ ಪ್ರಯಾಣ ಬೆಳೆಸಿದ್ದ ರಕ್ಷಾ 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿದ್ದು ಜ.3ರಿಂದ ಪರೇಟ್ ತರಬೇತಿಯನ್ನು ಪಡೆದಿದ್ದರು. ಅಂದಹಾಗೆ, ರಕ್ಷಾ ಅಂಚನ್ ಫಿಲೋಮಿನಾ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ. ಈ ಹಿಂದೆಲ್ಲಾ ಪ್ರತಿ ವರ್ಷ 11-12 ಮಂದಿ ಕೆಡೆಟ್ ಗಳಿಗೆ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಲು ಅವಕಾಶ ಸಿಗುತ್ತಿತ್ತು. ಆದರೆ, ಈ ಬಾರಿ ಕೊರೊನಾದಿಂದಾಗಿ ಜಿಲ್ಲೆಯಿಂದ ಒಬ್ಬಳನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಈ ಬಾರಿಯೂ ಹಲವು ಮಂದಿ ಪ್ರತಿಭಾವಂತ ಕೆಡೆಟ್ ಗಳಿದ್ದರು.
ಕಳೆದ ಬಾರಿ ರಕ್ಷಾ ಅಂಚನ್ ಅದೇ ಪರೇಡ್ ನಲ್ಲಿ ಭಾಗವಹಿಸುವುದರಿಂದ ಮಿಸ್ ಆಗಿದ್ದಳು. ಹೀಗಾಗಿ ರಕ್ಷಾಳನ್ನು ಈ ಬಾರಿ ಆಯ್ಕೆ ಮಾಡಲಾಯ್ತು ಎಂದು ಕಾಲೇಜಿನ ಎನ್ ಸಿಸಿ ಅಧಿಕಾರಿ ಜಾನ್ಸನ್ ಹೇಳಿದ್ದಾರೆ.
Raksha Anchan, a B Sc student from St Philomena College, Puttur is the ONLY NCC Cadet from Dakshina Kannada to participate in Republic Day Parade in New Delhi on 26 January 2021
22-12-25 06:29 pm
HK News Desk
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm