ಬ್ರೇಕಿಂಗ್ ನ್ಯೂಸ್
26-01-21 08:48 pm Mangaluru Correspondent ಕರಾವಳಿ
ಮಂಗಳೂರು, ಜ.26: ಈ ಬಾರಿ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಏಕೈಕ ವಿದ್ಯಾರ್ಥಿನಿ ಭಾಗವಹಿಸಿದ್ದಾಳೆ. ಪುತ್ತೂರಿನ ಫಿಲೋಮಿನಾ ಕಾಲೇಜಿನ ರಕ್ಷಾ ಅಂಚನ್ ಎನ್ ಸಿಸಿ ಕ್ಯಾಡೆಟ್ ಆಗಿ ಭಾಗವಹಿಸಿದ ವಿದ್ಯಾರ್ಥಿನಿ.
ಸಾಮಾನ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹತ್ತಕ್ಕೂ ಹೆಚ್ಚು ಮಂದಿ ಎನ್ ಸಿಸಿ ಕೆಡೆಟ್ ಗಳು ಭಾಗವಹಿಸುತ್ತಾರೆ. ಆದರೆ, ಈ ಬಾರಿ ಕೊರೊನಾ ನಿರ್ಬಂಧ ಇದ್ದ ಕಾರಣ ಒಬ್ಬರನ್ನು ಮಾತ್ರ ಜಿಲ್ಲೆಯಿಂದ ಆಯ್ಕೆ ಮಾಡಲಾಗಿದೆ. ಪ್ರತಿ ವರ್ಷ ಗೋವಾ- ಕರ್ನಾಟಕ ಡೈರೆಕ್ಟರೇಟ್ ನಿಂದ 111 ಕೆಡೆಟ್ ಗಳು ರಿಪಬ್ಲಿಕ್ ಪರೇಡ್ ನಲ್ಲಿ ಭಾಗವಹಿಸುತ್ತಾರೆ. ಈ ಬಾರಿ ವಿಭಾಗದಿಂದ ಕೇವಲ 26 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಇದರಲ್ಲಿ 16 ಮಂದಿ ಹುಡುಗರಾಗಿದ್ದು, 10 ಮಂದಿ ಹುಡುಗಿಯರು. ದಕ್ಷಿಣ ಕನ್ನಡ ಜಿಲ್ಲೆಯಿಂದ ಕಡಬ ತಾಲೂಕಿನ ರಕ್ಷಾ ಅಂಚನ್ ಒಬ್ಬರಷ್ಟೇ ಆಯ್ಕೆಯಾಗಿದ್ದರು. ರಕ್ಷಾ ಅವರು ನೆಲ್ಯಾಡಿಯ ಉದ್ಯಮಿ ರಮೇಶ್ ಹಾಗೂ ಕಾಂಗ್ರೆಸ್ ನಾಯಕಿ, ಪುತ್ತೂರು ತಾಲೂಕು ಪಂಚಾಯತ್ ಸದಸ್ಯೆ ಉಷಾ ಅಂಚನ್ ಅವರ ಪುತ್ರಿ.


ಕಳೆದ ಡಿ.17ರಂದು ದೆಹಲಿಗೆ ಪ್ರಯಾಣ ಬೆಳೆಸಿದ್ದ ರಕ್ಷಾ 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿದ್ದು ಜ.3ರಿಂದ ಪರೇಟ್ ತರಬೇತಿಯನ್ನು ಪಡೆದಿದ್ದರು. ಅಂದಹಾಗೆ, ರಕ್ಷಾ ಅಂಚನ್ ಫಿಲೋಮಿನಾ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ. ಈ ಹಿಂದೆಲ್ಲಾ ಪ್ರತಿ ವರ್ಷ 11-12 ಮಂದಿ ಕೆಡೆಟ್ ಗಳಿಗೆ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಲು ಅವಕಾಶ ಸಿಗುತ್ತಿತ್ತು. ಆದರೆ, ಈ ಬಾರಿ ಕೊರೊನಾದಿಂದಾಗಿ ಜಿಲ್ಲೆಯಿಂದ ಒಬ್ಬಳನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಈ ಬಾರಿಯೂ ಹಲವು ಮಂದಿ ಪ್ರತಿಭಾವಂತ ಕೆಡೆಟ್ ಗಳಿದ್ದರು.
ಕಳೆದ ಬಾರಿ ರಕ್ಷಾ ಅಂಚನ್ ಅದೇ ಪರೇಡ್ ನಲ್ಲಿ ಭಾಗವಹಿಸುವುದರಿಂದ ಮಿಸ್ ಆಗಿದ್ದಳು. ಹೀಗಾಗಿ ರಕ್ಷಾಳನ್ನು ಈ ಬಾರಿ ಆಯ್ಕೆ ಮಾಡಲಾಯ್ತು ಎಂದು ಕಾಲೇಜಿನ ಎನ್ ಸಿಸಿ ಅಧಿಕಾರಿ ಜಾನ್ಸನ್ ಹೇಳಿದ್ದಾರೆ.
Raksha Anchan, a B Sc student from St Philomena College, Puttur is the ONLY NCC Cadet from Dakshina Kannada to participate in Republic Day Parade in New Delhi on 26 January 2021
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm