ಬ್ರೇಕಿಂಗ್ ನ್ಯೂಸ್
27-01-21 12:28 pm Udupi Correspondent ಕರಾವಳಿ
ಉಡುಪಿ, ಜ.27: ನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಸಮಾರಂಭದ ಮೆರವಣಿಗೆಯಲ್ಲಿ ಮೂರೂವರೆ ವರ್ಷದ ಪುಟಾಣಿ ಹುಡುಗಿಯೊಬ್ಬಳು ಸೇನಾ ಸಮವಸ್ತ್ರ ಧರಿಸಿ, ಕೈಯಲ್ಲಿ ಮೆಷಿನ್ ಗನ್ ಹಿಡಿದು ನಡೆದಾಡಿದ್ದು, ಎಲ್ಲರ ಗಮನ ಸೆಳೆದಿದ್ದಾಳೆ.
ಉಡುಪಿ ಜಿಲ್ಲಾಡಳಿತದ ವತಿಯಿಂದ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಿಸಿದ್ದು ಮೀನುಗಾರಿಕಾ ಸಚಿವ ಎಸ್. ಅಂಗಾರ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಈ ವೇಳೆ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸುವ ರೀತಿ ಸಮವಸ್ತ್ರ ಧರಿಸಿದ್ದ ಪುಟಾಣಿ ನಡೆದಾಡುತ್ತಿದ್ದುದು ಗಮನ ಸೆಳೆದಿತ್ತು.


ಮೆರವಣಿಗೆಯಲ್ಲಿ ಇತರ ಪೊಲೀಸರು, ಎನ್ ಸಿಸಿ ಕೆಡೆಟ್ ಗಳ ಜೊತೆ ಗಮನ ಸೆಳೆದಿದ್ದು ಪುಟಾಣಿ ಮಯೂರಿ ಪ್ರಭು. ಮಯೂರಿಯ ತಂದೆ ರಾಘವೇಂದ್ರ ಪ್ರಭು ಉಡುಪಿ ಅಂಚೆ ಕಚೇರಿಯಲ್ಲಿ ಪೋಸ್ಟ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾರೆ. ತಾಯಿ ಶ್ರೀದೇವಿ ಗೃಹಿಣಿ. ತಮ್ಮ ಮಗಳು ಪೊಲೀಸ್ ಅಧಿಕಾರಿಯಾಗಬೇಕು ಎಂಬ ಕನಸಿಗೆ ನೀರೆರೆಯುವಂತೆ ಪೋಷಕರು ಸಣ್ಣಂದಿನಲ್ಲೇ ಅದಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವಾಗ ಆಕೆಗೆ ಸೇನಾ ಸಮವಸ್ತ್ರವನ್ನು ತೊಡಿಸಿ, ಪಥಸಂಚಲನಕ್ಕೆ ಕರೆತರುತ್ತಾರೆ. ಈ ಬಾರಿ ಗಣರಾಜ್ಯೋತ್ಸವಕ್ಕೆ ಆಕೆಯ ಪೋಷಕರು ಸೇನಾ ಸಮವಸ್ತ್ರ ನೀಡಿದ್ದು ಕಾರ್ಯಕ್ರಮದಲ್ಲಿ ಆಕರ್ಷಣೆಗೆ ಕಾರಣವಾಯಿತು.

ಮಯೂರಿ ಕೊನೆಗೆ ಸಚಿವ ಎಸ್. ಅಂಗಾರ ಹಾಗೂ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಅವರ ಜೊತೆ ಫೋಟೋ ತೆಗೆಸಿಕೊಂಡಿದ್ದಾಳೆ. ಬಳಿಕ ಇಬ್ಬರೂ ಪುಟಾಣಿಗೆ ಶುಭ ಹಾರೈಸಿದ್ದಾರೆ.
Three and a half-year-old girl, in army uniform, with a machine gun in hand, stole the show at the Republic Day parade that was held in the city on Tuesday, January 26.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm