ಬ್ರೇಕಿಂಗ್ ನ್ಯೂಸ್
28-01-21 01:11 pm Mangalore Correspondent ಕರಾವಳಿ
ಮಂಗಳೂರು, ಜ. 28 : ಇಂಡೋನೇಷ್ಯಾದಲ್ಲಿ ಉದ್ಯೋಗ ದೊರಕಿಸುವುದಾಗಿ ಹೇಳಿ ಉಳ್ಳಾಲ ಮೂಲದ ಯುವಕನಿಗೆ ಟ್ರಾವೆಲ್ ಏಜೆನ್ಸಿಯವರು ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಡಿಪ್ಲೊಮಾ ಓದಿರುವ ಯುವಕ ಮೊಹಮ್ಮದ್ ನಿಯಾಜ್ ಟ್ರಾವೆಲ್ ಏಜೆನ್ಸಿಯ ಮಾಲೀಕರ ವಿರುದ್ಧ ಮಂಗಳೂರಿನ ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ಮಂಗಳೂರು ಟೂರ್ಸ್ ಮತ್ತು ಟ್ರಾವೆಲ್ಸ್ ಮಾಲೀಕ ಶಮೀರ್ ರಿಜ್ವಾನ್, 6 ಲಕ್ಷ ರೂ. ಪಡೆದು ವಂಚಿಸಿದ್ದಾರೆ ಎಂದು ಸಂತ್ರಸ್ತ ಯುವಕ ಆರೋಪಿಸಿದ್ದಾನೆ.
"ಶಮೀರ್ ನನ್ನ ಮಗನಿಂದ ಉದ್ಯೋಗಕ್ಕಾಗಿ ಆತನ ಎಲ್ಲ ಸರ್ಟಿಫಿಕೇಟ್ ಇನ್ನಿತರ ದಾಖಲೆಗಳನ್ನು ತೆಗೆದುಕೊಂಡಿದ್ದಾನೆ. ವೀಸಾಕ್ಕಾಗಿ 6 ಲಕ್ಷ ರೂ. ಪಡೆದಿದ್ದರು. ನಾವು ಆತನಿಗೆ 6 ಲಕ್ಷ ರೂ. ನೀಡಿದರೆ ನನ್ನ ಮಗನಿಗೆ ತಿಂಗಳಿಗೆ 2 ಲಕ್ಷ ರೂ. ಸಂಬಳ ಇರುವ ಮೆಕ್ಯಾನಿಕಲ್ ಎಂಜಿನಿಯರ್ ಕೆಲಸವನ್ನು ಕೊಡಿಸುವುದಾಗಿ ಹೇಳಿದ್ದರು. ಬಳಿಕ ನನ್ನ ಮಗನನ್ನು ವಿಸಿಟಿಂಗ್ ವೀಸಾ ಮೂಲಕ ಇಂಡೋನೇಷ್ಯಾಕ್ಕೆ ಕರೆದೊಯ್ದಿದ್ದು ಅದಕ್ಕಾಗಿ 2019 ರ ಜುಲೈನಲ್ಲಿ 3.5 ಲಕ್ಷ ರೂ. ಮತ್ತು 2020 ಫೆಬ್ರವರಿಯಲ್ಲಿ 2.5 ಲಕ್ಷ ರೂ. ನೀಡಿದ್ದೇನೆ ಎಂದು ಯುವಕನ ತಂದೆ ಅಬ್ದುಲ್ ಅಜೀಜ್ ದೂರಿದ್ದಾರೆ.
2020 ರ ಫೆಬ್ರವರಿಯಿಂದ ಸೆಪ್ಟೆಂಬರ್ ವರೆಗೆ ಇತರ ಮೂವರ ಜೊತೆ ಇಂಡೋನೇಷ್ಯಾದಲ್ಲಿ ರೂಮಿನಲ್ಲಿದ್ದೆ. ಸೆಪ್ಟೆಂಬರ್ನಲ್ಲಿ ನಮ್ಮನ್ನು ವಲಸೆ ಅಧಿಕಾರಿಗಳು ದೇಶದಲ್ಲಿ ಅಕ್ರಮವಾಗಿ ಉಳಿದ ಆರೋಪದಲ್ಲಿ ಬಂಧಿಸಿದ್ದು 14 ದಿನಗಳ ಜೈಲಿಗೆ ಹಾಕಿದ್ದರು. ಪ್ರಕರಣದಲ್ಲಿ ಕಾನೂನು ಹೋರಾಟ ಮಾಡಿದ ಬಳಿಕ ನಮ್ಮನ್ನು ಬಿಡುಗಡೆ ಮಾಡಿದ್ದಾರೆ ಎಂದು ಸಂತ್ರಸ್ತ ನಿಯಾಜ್ ಹೇಳಿದ್ದಾರೆ. ಮಂಗಳೂರಿಗೆ ವಾಪಸ್ ಬರಲು 8 ಲಕ್ಷ ರೂ. ಖರ್ಚು ಆಯ್ತು ಎಂದು ನಿಯಾಜ್ ತಿಳಿಸಿದ್ದಾರೆ.
A youth from Ullal, who was searching for a job was cheated by a tours and travels agency of Mangalore and lost six lac rupees and was jailed in Indonesia. The youth, Mohammed Niyaz, who is a diploma holder, has registered a complaint against the owner of the travel agency.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm