ಬ್ರೇಕಿಂಗ್ ನ್ಯೂಸ್
28-01-21 02:20 pm Mangalore Correspondent ಕರಾವಳಿ
ಸುಳ್ಯ, ಜ.28 : ಇಲ್ಲಿನ ಪೆರಾಜೆ, ಬಿಳಿಯಾರು ಪ್ರದೇಶದಲ್ಲಿ ದೊಡ್ಡ ಗಾತ್ರದ ಕಾಡಾನೆಯೊಂದು ಎರಡು ದಿನಗಳಿಂದ ಹಾದಿಯುದ್ದಕ್ಕೂ ತನ್ನ ಪಾಡಿಗೆ ನಡೆದು ಹೋಗುತ್ತಿದ್ದು ಜನರಲ್ಲಿ ಆತಂಕ ಶುರುವಾಗಿದೆ. ಆದರೆ, ಅಲ್ಲಿನ ಕೆಲವರ ಪ್ರಕಾರ ಈ ಆನೆ ಪ್ರತಿ ವರ್ಷ ಹೀಗೇ ಬರುತ್ತದೆಯಂತೆ. ಜನರಿಗೇನು ತೊಂದರೆ ಕೊಡುವುದಿಲ್ಲವಂತೆ.
ಹೌದು, ಈ ಆನೆಯು ಪ್ರತೀ ವರ್ಷ ಕಡಬದ ಸುಬ್ರಹ್ಮಣ್ಯ ಅರಣ್ಯ ವಲಯದಿಂದ ಸುಳ್ಯದ ಪಂಜ ಮೂಲಕ ಮಡಿಕೇರಿಯ ಭಾಗಮಂಡಲ ವರೆಗೂ ಇದೇ ದಾರಿಯಲ್ಲಿ ಸಂಚರಿಸುತ್ತದೆ ಎನ್ನಲಾಗುತ್ತಿದೆ. ಪ್ರತಿ ಬಾರಿ ಜನವರಿ, ಫೆಬ್ರವರಿ ತಿಂಗಳಲ್ಲಿ ಇದೇ ಆನೆ ಈ ದಾರಿಯಲ್ಲಿ ಕಂಡುಬರುತ್ತಿದೆ.
ಆನೆ ನಡೆದದ್ದೇ ದಾರಿ ಎನ್ನುವಂತೆ, ತಾನು ಹಾದು ಹೋಗುವ ದಾರಿಯಲ್ಲಿ ಹೊಟ್ಟೆ ಹಸಿವು ಆದಾಗ ಬಾಳೆ, ತೆಂಗು ಸೇರಿದಂತೆ ಬೈನೆ ಮರಗಳನ್ನು ತಿನ್ನುತ್ತದೆ. ಮಡಿಕೇರಿ ಗಡಿಭಾಗ ಭಾಗಮಂಡಲದ ವರೆಗೂ ಹೋದ ಆನೆ ನಂತರದಲ್ಲಿ ಫೆಬ್ರವರಿ ತಿಂಗಳ ಮಧ್ಯದಲ್ಲಿ ಅದೇ ದಾರಿಯಲ್ಲಿ ವಾಪಾಸು ಬರುತ್ತದೆಯಂತೆ.

ಆನೆ ಹೋಗುವ ದಾರಿಯಲ್ಲಿ ಸಿಗುವ ಕುಮಾರಧಾರಾ ನದಿ ಹಾಗೂ ಪಯಸ್ವಿನಿ ನದಿಯನ್ನೂ ಆನೆ ಈಜುವ ಮೂಲಕ ನದಿ ದಾಟುತ್ತಿದೆ ಎಂದು ಸಾರ್ವಜನಿಕರು ಹೇಳುತ್ತಾರೆ.
ಈ ಆನೆಯನ್ನು ಅರಣ್ಯಾಧಿಕಾರಿಗಳು ಕೂಡ ಗುರುತಿಸಿದ್ದು ಆನೆ ಅದರ ಪಾಡಿಗೆ ತನ್ನ ದಾರಿಯಲ್ಲೇ ಸಂಚಾರ ಮಾಡುತ್ತದೆ. ಯಾರಿಗೂ ತೊಂದರೆ ನೀಡಿದ ಮಾಹಿತಿ ಇಲ್ಲ. ಆದರೂ ರಾತ್ರಿ ವೇಳೆ ಈ ಭಾಗದಲ್ಲಿ ಸಂಚರಿಸುವ ಜನರು ಎಚ್ಚರಿಕೆ ವಹಿಸಬೇಕು. ತೊಂದರೆ ಕಂಡುಬಂದಲ್ಲಿ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ವಿನಂತಿ ಮಾಡಿದ್ದಾರೆ.
Video:
A Wild elephant caught on Video has become viral on social media as the Elephant enters Kadapa village every year hunting for food towards Bagamandala.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am