ಬ್ರೇಕಿಂಗ್ ನ್ಯೂಸ್
28-01-21 02:20 pm Mangalore Correspondent ಕರಾವಳಿ
ಸುಳ್ಯ, ಜ.28 : ಇಲ್ಲಿನ ಪೆರಾಜೆ, ಬಿಳಿಯಾರು ಪ್ರದೇಶದಲ್ಲಿ ದೊಡ್ಡ ಗಾತ್ರದ ಕಾಡಾನೆಯೊಂದು ಎರಡು ದಿನಗಳಿಂದ ಹಾದಿಯುದ್ದಕ್ಕೂ ತನ್ನ ಪಾಡಿಗೆ ನಡೆದು ಹೋಗುತ್ತಿದ್ದು ಜನರಲ್ಲಿ ಆತಂಕ ಶುರುವಾಗಿದೆ. ಆದರೆ, ಅಲ್ಲಿನ ಕೆಲವರ ಪ್ರಕಾರ ಈ ಆನೆ ಪ್ರತಿ ವರ್ಷ ಹೀಗೇ ಬರುತ್ತದೆಯಂತೆ. ಜನರಿಗೇನು ತೊಂದರೆ ಕೊಡುವುದಿಲ್ಲವಂತೆ.
ಹೌದು, ಈ ಆನೆಯು ಪ್ರತೀ ವರ್ಷ ಕಡಬದ ಸುಬ್ರಹ್ಮಣ್ಯ ಅರಣ್ಯ ವಲಯದಿಂದ ಸುಳ್ಯದ ಪಂಜ ಮೂಲಕ ಮಡಿಕೇರಿಯ ಭಾಗಮಂಡಲ ವರೆಗೂ ಇದೇ ದಾರಿಯಲ್ಲಿ ಸಂಚರಿಸುತ್ತದೆ ಎನ್ನಲಾಗುತ್ತಿದೆ. ಪ್ರತಿ ಬಾರಿ ಜನವರಿ, ಫೆಬ್ರವರಿ ತಿಂಗಳಲ್ಲಿ ಇದೇ ಆನೆ ಈ ದಾರಿಯಲ್ಲಿ ಕಂಡುಬರುತ್ತಿದೆ.
ಆನೆ ನಡೆದದ್ದೇ ದಾರಿ ಎನ್ನುವಂತೆ, ತಾನು ಹಾದು ಹೋಗುವ ದಾರಿಯಲ್ಲಿ ಹೊಟ್ಟೆ ಹಸಿವು ಆದಾಗ ಬಾಳೆ, ತೆಂಗು ಸೇರಿದಂತೆ ಬೈನೆ ಮರಗಳನ್ನು ತಿನ್ನುತ್ತದೆ. ಮಡಿಕೇರಿ ಗಡಿಭಾಗ ಭಾಗಮಂಡಲದ ವರೆಗೂ ಹೋದ ಆನೆ ನಂತರದಲ್ಲಿ ಫೆಬ್ರವರಿ ತಿಂಗಳ ಮಧ್ಯದಲ್ಲಿ ಅದೇ ದಾರಿಯಲ್ಲಿ ವಾಪಾಸು ಬರುತ್ತದೆಯಂತೆ.

ಆನೆ ಹೋಗುವ ದಾರಿಯಲ್ಲಿ ಸಿಗುವ ಕುಮಾರಧಾರಾ ನದಿ ಹಾಗೂ ಪಯಸ್ವಿನಿ ನದಿಯನ್ನೂ ಆನೆ ಈಜುವ ಮೂಲಕ ನದಿ ದಾಟುತ್ತಿದೆ ಎಂದು ಸಾರ್ವಜನಿಕರು ಹೇಳುತ್ತಾರೆ.
ಈ ಆನೆಯನ್ನು ಅರಣ್ಯಾಧಿಕಾರಿಗಳು ಕೂಡ ಗುರುತಿಸಿದ್ದು ಆನೆ ಅದರ ಪಾಡಿಗೆ ತನ್ನ ದಾರಿಯಲ್ಲೇ ಸಂಚಾರ ಮಾಡುತ್ತದೆ. ಯಾರಿಗೂ ತೊಂದರೆ ನೀಡಿದ ಮಾಹಿತಿ ಇಲ್ಲ. ಆದರೂ ರಾತ್ರಿ ವೇಳೆ ಈ ಭಾಗದಲ್ಲಿ ಸಂಚರಿಸುವ ಜನರು ಎಚ್ಚರಿಕೆ ವಹಿಸಬೇಕು. ತೊಂದರೆ ಕಂಡುಬಂದಲ್ಲಿ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ವಿನಂತಿ ಮಾಡಿದ್ದಾರೆ.
Video:
A Wild elephant caught on Video has become viral on social media as the Elephant enters Kadapa village every year hunting for food towards Bagamandala.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm