ಬ್ರೇಕಿಂಗ್ ನ್ಯೂಸ್
28-01-21 03:45 pm Udupi Correspondent ಕರಾವಳಿ
ಉಡುಪಿ, ಜ.28: ಅಲೆಗಳ ಅಬ್ಬರಕ್ಕೆ ಸಮುದ್ರದಲ್ಲಿ ದೋಣಿ ಮಗುಚಿ ಬಿದ್ದ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ. ದೋಣಿಯಲ್ಲಿದ್ದ ನಾಲ್ವರು ಮೀನುಗಾರರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಂಗೊಳ್ಳಿ ನಿವಾಸಿಗಳಾದ ಗುರುರಾಜ ಖಾರ್ವಿ (30), ಮಿಥುನ್ ಖಾರ್ವಿ (29), ಚಂದ್ರ ಖಾರ್ವಿ (46) ಮತ್ತು ರೋಶನ್ (35) ರಕ್ಷಿಸಲ್ಪಟ್ಟ ಮೀನುಗಾರರು. ಗಂಗೊಳ್ಳಿ ಮೀನುಗಾರಿಕಾ ಬಂದರಿನಿಂದ ಗುರುವಾರ ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದ ‘ಸೌಮ್ಯ’ ಹೆಸರಿನ ನಾಡದೋಣಿ ಸಮುದ್ರದಲ್ಲಿ ಗಂಗೊಳ್ಳಿಯಿಂದ ಸುಮಾರು ಏಳು ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿ ಬಿದ್ದಿದೆ.

ದೋಣಿಯಲ್ಲಿದ್ದ ಇಬ್ಬರು ಮೀನುಗಾರರು ಸಮುದ್ರದ ನೀರಿಗೆ ಹಾರಿ ಈಜಿ ಇನ್ನೊಂದು ದೋಣಿ ಮೂಲಕ ಸುರಕ್ಷಿತವಾಗಿ ದಡ ಸೇರಿದ್ದಾರೆ. ಇನ್ನಿಬ್ಬರು ಮೀನುಗಾರರನ್ನು ಸಮೀಪದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಇನ್ನೊಂದು ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ.

ದೋಣಿ, ಅದರ ಇಂಜಿನ್ ಮತ್ತು ಬಲೆ ಸಮುದ್ರ ಪಾಲಾಗಿದ್ದು, ಸುಮಾರು ಐದು ಲಕ್ಷಕ್ಕೂ ಮಿಕ್ಕಿ ನಷ್ಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಸಿಬ್ಬಂದಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
Fishing boat topples in udupi four fishermen escape from drowning at Gangoli.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm