ಬ್ರೇಕಿಂಗ್ ನ್ಯೂಸ್
29-01-21 05:46 pm Mangalore Correspondent ಕರಾವಳಿ
ಮಂಗಳೂರು, ಜ.29: ಪೊಲೀಸ್ ಸಿಬಂದಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮತ್ತೊಂದು ಗ್ಯಾಂಗ್ ಕೈವಾಡ ಇರುವುದನ್ನು ಪೊಲೀಸರು ದೃಢಪಡಿಸಿದ್ದಾರೆ. ಕುದ್ರೋಳಿ ಪರಿಸರದಲ್ಲಿ ಸಕ್ರಿಯವಾಗಿರುವ ಕಾರ್ಖಾನೆ ಗ್ಯಾಂಗ್ ಎನ್ನುವ ಹೆಸರಲ್ಲಿ ಈ ಗ್ಯಾಂಗ್ ಸಕ್ರಿಯವಾಗಿದೆಯಂತೆ.
ಪೊಲೀಸರು ಎರಡು ದಿನಗಳ ಹಿಂದೆ ಪ್ರಕರಣ ಸಂಬಂಧಿಸಿ ಮಹಮ್ಮದ್ ಶಾಕೀರ್ (19(, ಅಕ್ಬರ್(30) ಮತ್ತು ಮಹಮ್ಮದ್ ಹನೀಫ್ (32) ಎಂಬ ಮೂವರನ್ನು ಬಂಧಿಸಿದ್ದರು. ಪೊಲೀಸರ ಮೇಲೆ ಪ್ರತೀಕಾರ ತೀರಿಸಲು ಸಂಚು ರೂಪಿಸಿದವರಲ್ಲಿ ಪೈಕಿ ಇವರ ಶಾಮೀಲಾತಿ ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಜರುಗಿಸಿದ್ದರು. ಇದೀಗ ಇವರು ತಮ್ಮಲ್ಲೇ ಕುದ್ರೋಳಿ ಮಸೀದಿ ಆಸುಪಾಸಿನಲ್ಲಿ ಕಾರ್ಖಾನೆ ಗ್ಯಾಂಗ್ ಎನ್ನುವ ಹೆಸರಲ್ಲಿ ಅಪರಾಧ ಚಟುವಟಿಕೆ ನಡೆಸುತ್ತಿದ್ದರು ಎಂಬ ಮಾಹಿತಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಪ್ರಕರಣ ಸಂಬಂಧಿಸಿ, ಪೊಲೀಸರು ಈ ಹಿಂದೆ ಆರು ಮಂದಿಯನ್ನು ಬಂಧಿಸಿದ್ದು ಅವರು ಮಾಯಾ ಗ್ಯಾಂಗ್ ಹೆಸರಲ್ಲಿ ಕಾರ್ಯಾಚರಿಸುತ್ತಿದ್ದರು ಎನ್ನುವುದನ್ನು ಪತ್ತೆ ಮಾಡಿದ್ದರು. ಆ ಸಂದರ್ಭದಲ್ಲಿ ಪ್ರಕರಣದಲ್ಲಿ ಮತ್ತೊಂದು ಗ್ಯಾಂಗ್ ಪಾತ್ರವೂ ಕಂಡುಬಂದಿದೆ ಎಂದು ಕಮಿಷನರ್ ತಿಳಿಸಿದ್ದರು. ಇದೀಗ ಎಸ್ಡಿಪಿಐ ಪಕ್ಷದಲ್ಲಿ ಸಕ್ರಿಯವಾಗಿರುವ ಅಕ್ಬರ್ ಸೇರಿದಂತೆ ಮೂವರನ್ನು ಪೊಲೀಸರು ಪತ್ತೆ ಮಾಡಿದ್ದು, ಇವರು ಕಾರ್ಖಾನೆ ಗ್ಯಾಂಗ್ ಹೆಸರಲ್ಲಿ ಕಾರ್ಯಾಚರಿಸುತ್ತಿದ್ದರು ಎನ್ನಲಾಗಿದೆ.

ಬಂದರು ಠಾಣೆ ಹೆಡ್ ಕಾನ್ಸ್ ಟೇಬಲ್ ಆಗಿರುವ ಗಣೇಶ್ ಕಾಮತ್ ಮೇಲೆ ಡಿ.16ರಂದು ಹಾಡಹಗಲೇ ನಗರದ ನ್ಯೂಚಿತ್ರಾ ಟಾಕೀಸ್ ಬಳಿ ನಿಂತಿದ್ದಾಗ ಇಬ್ಬರು ಬಂದು ಕತ್ತಿಯಿಂದ ಹಲ್ಲೆ ಮಾಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಇದಕ್ಕೆ ಸಂಬಂಧಿಸಿ ಸರಣಿಯಾಗಿ ಆರೋಪಿಗಳನ್ನು ಪತ್ತೆ ಮಾಡುತ್ತಿದ್ದಾರೆ. ಆರೋಪಿಗಳು ಕಳೆದ ವರ್ಷ ಡಿ.19ರಂದು ನಡೆದಿದ್ದ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರನ್ನು ಟಾರ್ಗೆಟ್ ಮಾಡಿಕೊಂಡಿದ್ದರು. ಘಟನೆಗೆ ವರ್ಷ ತುಂಬುತ್ತಿರುವ ಸಂದರ್ಭದಲ್ಲೇ ಪೊಲೀಸರ ಮೇಲೆ ಪ್ರತೀಕಾರ ತೀರಿಸಬೇಕು ಎಂದು ಪ್ಲಾನ್ ಹಾಕಿದ್ದರು.
ಪೊಲೀಸರ ಮೇಲೆ ರಿವೇಂಜ್ ತೀರಿಸುವ ಮಾಯಾ ಗ್ಯಾಂಗ್ ಸಿಕ್ಕಿಬೀಳುತ್ತಲೇ, ಈಗ ಒಟ್ಟು ಘಟನೆಗೆ ಪ್ರೇರಣೆ ನೀಡಿದ್ದ ತಂಡವನ್ನು ಬಲೆಗೆ ಕೆಡವಲಾಗಿದೆ. ಅಪರಾಧ ಕೃತ್ಯ ಸಾಮಾನ್ಯ. ಆದರೆ, ಒಂದು ಪ್ರಕರಣವನ್ನು ಮುಂದಿಟ್ಟು ಪೊಲೀಸರ ಮೇಲೆ ರಿವೇಂಜ್ ತೀರಿಸುವಂಥ ನಡೆ ಅಪಾಯಕಾರಿ. ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಪೊಲೀಸ್ ಕೊಲೆಯತ್ನ ; ಮತ್ತೆ ಮೂವರು ಸಂಚುಕೋರರ ಸೆರೆ
ಪೊಲೀಸರಿಗೆ ಹಲ್ಲೆ ; ಮತ್ತೆ ಆರು ಮಂದಿ ಸೆರೆ, ಮಾಯಾ ಗ್ಯಾಂಗ್ ಗೋಲಿಬಾರ್ ಸಂಚು ಬಯಲು !! ಮುಚ್ಚಿಹೋಗಿದ್ದ ಕೇಸ್ ಮರುಜೀವ
Three arrested in connection with Attack on Police Head Constable near Car street are from Karkana Gang said Mangalore Police Commissioner Shashi Kumar.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am