ಬ್ರೇಕಿಂಗ್ ನ್ಯೂಸ್
30-01-21 12:22 pm Mangalore Correspondent ಕರಾವಳಿ
ಮಂಗಳೂರು, ಜ.30 : ದುಬೈನಲ್ಲಿ ಕಳೆದ ಎಂಟು ತಿಂಗಳಿಂದ ಕೋಮಾದಲ್ಲಿದ್ದು, ಕಳೆದ ವಾರ ನಿಧನರಾದ ಮಂಗಳೂರು ಮೂಲದ ವ್ಯಕ್ತಿಯ ಮೃತದೇಹವನ್ನು ತಾಯ್ನಾಡಿಗೆ ಕಳುಹಿಸುವಲ್ಲಿ ಅನಿವಾಸಿ ಭಾರತೀಯರ ತಂಡ ಯಶಸ್ವಿಯಾಗಿದೆ.
ಮಂಗಳೂರಿನ ಕಾವೂರು ನಿವಾಸಿಯಾಗಿರುವ, ಅನಿವಾಸಿ ಕನ್ನಡಿಗ ದಿಲೀಪ್ (55) ಅವಿವಾಹಿತರಾಗಿದ್ದು ತಾಯಿ ಮತ್ತು ಅವಿವಾಹಿತ ಸಹೋದರಿಯರ ಕುಟುಂಬಕ್ಕೆ ಏಕೈಕ ಆಸರೆಯಾಗಿದ್ದರು. 15 ವರ್ಷಗಳಿಂದ ದುಬೈನಲ್ಲಿ ದುಡಿಯುತ್ತಿದ್ದ ದಿಲೀಪ್, ಕಳೆದ ಏಪ್ರಿಲ್ ತಿಂಗಳಿನಲ್ಲಿ ಬ್ರೈನ್ ಸ್ಟ್ರೋಕ್ನ ಪರಿಣಾಮ ಕೋಮಾವಸ್ಥೆಗೆ ತಲುಪಿದ್ದರು’ ಎಂದು ಕನ್ನಡಿಗಾಸ್ ಫೆಡರೇಷನ್ ಸಂಚಾಲಕ ಹಿದಾಯತ್ ಅಡ್ಡೂರ್ ತಿಳಿಸಿದ್ದಾರೆ.
ಸತತ ಎಂಟು ತಿಂಗಳಿಂದ ಕೋಮಾ ಸ್ಥಿತಿಯಲ್ಲಿದ್ದ ದಿಲೀಪ್ ಕುಮಾರ್ ಕಳೆದ ಶುಕ್ರವಾರ ನಿಧನರಾದರು. ಅವರ ಮೃತದೇಹವನ್ನು ಇಂಡಿಯನ್ ಕಾನ್ಸುಲೇಟ್ ದುಬೈ, ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್), ಕನ್ನಡಿಗಾಸ್ ಫೆಡರೇಷನ್, ಇಂಡಿಯನ್ ಅಸೋಸಿಯೇಷನ್ ಅಜ್ಮಾನ್ ನೆರವಿನಿಂದ ಕೋವಿಡ್ ಸಂದರ್ಭದಲ್ಲಿ ಪಡೆಯಬೇಕಾದ ಎಲ್ಲ ಅನುಮತಿ ಪತ್ರಗಳನ್ನು ಪಡೆದು ತಾಯ್ನಾಡಿಗೆ ಕಳುಹಿಸಲಾಗಿದೆ.

ದಿಲೀಪ್ ಆರೋಗ್ಯದ ಕುರಿತು ಅಬ್ದುಲ್ ಕರೀಮ್ ನೇತೃತ್ವದ ಕೆಸಿಎಫ್ ತಂಡ ಕಾಳಜಿ ವಹಿಸುತ್ತಿತ್ತು. ಅವರ ತಾಯಿ, ಸಹೋದರಿಯರು ಮಗನ ಮುಖವನ್ನು ಕೊನೆಯ ಬಾರಿ ನೋಡಬೇಕು. ಹೇಗಾದರೂ ಮೃತದೇಹ ಕಳುಹಿಸಿ ಎಂದು ಕೋರಿಕೊಂಡಿದ್ದು ಕೋವಿಡ್ ಸಂದರ್ಭದಲ್ಲಿ ಮೃತದೇಹವನ್ನು ತಾಯ್ನಾಡಿಗೆ ತಲುಪಿಸಲು ಇತರೇ ಅನಿವಾಸಿ ಕನ್ನಡಿಗರ ಸಹಾಯ ಕೇಳಿತ್ತು.
ಕೂಡಲೇ ಕೆಎನ್ಆರ್ಐ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮತ್ತು ದುಬೈ ಕಾನ್ಸುಲೇಟ್ ಕಚೇರಿಯ ಕಾನ್ಸುಲ್ ಜಿತೇಂದ್ರ ಸಿಂಗ್ ನೇಗಿ ಅವರನ್ನು ಸಂಪರ್ಕಿಸಿದ್ದು ತಕ್ಷಣವೇ ಸ್ಪಂದಿಸಿ ಕಾನ್ಸುಲೇಟ್ ಮೂಲಕ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ಅಜ್ಮಾನ್ ಇಂಡಿಯನ್ ಅಸೋಸಿಯೇಷನ್ನ ಛಾಯಾದೇವಿ ಕೃಷ್ಣಮೂರ್ತಿಯವರು ದಿಲೀಪ್ ವೀಸಾ, ಇಮಿಗ್ರೇಷನ್, ಡೆತ್ ಸರ್ಟಿಫಿಕೇಟ್ ಪಡೆಯಲು ಸಹಕರಿಸಿದರು. ಇದೆಲ್ಲರ ಫಲವಾಗಿ ದಿಲೀಪ್ ಮೃತದೇಹ ದುಬೈನಿಂದ ಮಂಗಳೂರಿಗೆ ತಲುಪಿದೆ ಎಂದು ಹಿದಾಯತ್ ಹೇಳಿದರು.
ದಿಲೀಪ್ ಸಹೋದರಿ ಕಿಡ್ನಿ ಸಮಸ್ಯೆಯಿಂದ ಡಯಾಲಿಸಿಸ್ ಮಾಡಿಸುತ್ತಿದ್ದರು. ಸೋದರನ ಆದಾಯವನ್ನೇ ನಂಬಿದ್ದ ಕುಟುಂಬ ದಿಲೀಪ್ ಆಸ್ಪತ್ರೆಗೆ ದಾಖಲಾದ ನಂತರ ಹಣದ ಕೊರತೆಯಿಂದ ಡಯಾಲಿಸಿಸ್ ಮಾಡಲಾಗದೆ ಮುಂದೂಡುತ್ತಿದ್ದಾರೆ. ಮದುವೆ ವಯಸ್ಸು ಮೀರಿದ ಸಹೋದರಿ ಮತ್ತು ತಾಯಿಗೆ ಆಸರೆ ಇಲ್ಲದಾಗಿದೆ.
The mortal remains of Dilip Kumar,57, a pastry chef working in Dubai, arrived at Mangaluru on Thursday. Dilip died on January 22, and Karnataka Cultural Foundation (KCF) and International Kannadigas Federation (IKF) helped in organising Dilip’s last journey from Dubai to Mangaluru.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm