ಬ್ರೇಕಿಂಗ್ ನ್ಯೂಸ್
30-01-21 12:22 pm Mangalore Correspondent ಕರಾವಳಿ
ಮಂಗಳೂರು, ಜ.30 : ದುಬೈನಲ್ಲಿ ಕಳೆದ ಎಂಟು ತಿಂಗಳಿಂದ ಕೋಮಾದಲ್ಲಿದ್ದು, ಕಳೆದ ವಾರ ನಿಧನರಾದ ಮಂಗಳೂರು ಮೂಲದ ವ್ಯಕ್ತಿಯ ಮೃತದೇಹವನ್ನು ತಾಯ್ನಾಡಿಗೆ ಕಳುಹಿಸುವಲ್ಲಿ ಅನಿವಾಸಿ ಭಾರತೀಯರ ತಂಡ ಯಶಸ್ವಿಯಾಗಿದೆ.
ಮಂಗಳೂರಿನ ಕಾವೂರು ನಿವಾಸಿಯಾಗಿರುವ, ಅನಿವಾಸಿ ಕನ್ನಡಿಗ ದಿಲೀಪ್ (55) ಅವಿವಾಹಿತರಾಗಿದ್ದು ತಾಯಿ ಮತ್ತು ಅವಿವಾಹಿತ ಸಹೋದರಿಯರ ಕುಟುಂಬಕ್ಕೆ ಏಕೈಕ ಆಸರೆಯಾಗಿದ್ದರು. 15 ವರ್ಷಗಳಿಂದ ದುಬೈನಲ್ಲಿ ದುಡಿಯುತ್ತಿದ್ದ ದಿಲೀಪ್, ಕಳೆದ ಏಪ್ರಿಲ್ ತಿಂಗಳಿನಲ್ಲಿ ಬ್ರೈನ್ ಸ್ಟ್ರೋಕ್ನ ಪರಿಣಾಮ ಕೋಮಾವಸ್ಥೆಗೆ ತಲುಪಿದ್ದರು’ ಎಂದು ಕನ್ನಡಿಗಾಸ್ ಫೆಡರೇಷನ್ ಸಂಚಾಲಕ ಹಿದಾಯತ್ ಅಡ್ಡೂರ್ ತಿಳಿಸಿದ್ದಾರೆ.
ಸತತ ಎಂಟು ತಿಂಗಳಿಂದ ಕೋಮಾ ಸ್ಥಿತಿಯಲ್ಲಿದ್ದ ದಿಲೀಪ್ ಕುಮಾರ್ ಕಳೆದ ಶುಕ್ರವಾರ ನಿಧನರಾದರು. ಅವರ ಮೃತದೇಹವನ್ನು ಇಂಡಿಯನ್ ಕಾನ್ಸುಲೇಟ್ ದುಬೈ, ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್), ಕನ್ನಡಿಗಾಸ್ ಫೆಡರೇಷನ್, ಇಂಡಿಯನ್ ಅಸೋಸಿಯೇಷನ್ ಅಜ್ಮಾನ್ ನೆರವಿನಿಂದ ಕೋವಿಡ್ ಸಂದರ್ಭದಲ್ಲಿ ಪಡೆಯಬೇಕಾದ ಎಲ್ಲ ಅನುಮತಿ ಪತ್ರಗಳನ್ನು ಪಡೆದು ತಾಯ್ನಾಡಿಗೆ ಕಳುಹಿಸಲಾಗಿದೆ.

ದಿಲೀಪ್ ಆರೋಗ್ಯದ ಕುರಿತು ಅಬ್ದುಲ್ ಕರೀಮ್ ನೇತೃತ್ವದ ಕೆಸಿಎಫ್ ತಂಡ ಕಾಳಜಿ ವಹಿಸುತ್ತಿತ್ತು. ಅವರ ತಾಯಿ, ಸಹೋದರಿಯರು ಮಗನ ಮುಖವನ್ನು ಕೊನೆಯ ಬಾರಿ ನೋಡಬೇಕು. ಹೇಗಾದರೂ ಮೃತದೇಹ ಕಳುಹಿಸಿ ಎಂದು ಕೋರಿಕೊಂಡಿದ್ದು ಕೋವಿಡ್ ಸಂದರ್ಭದಲ್ಲಿ ಮೃತದೇಹವನ್ನು ತಾಯ್ನಾಡಿಗೆ ತಲುಪಿಸಲು ಇತರೇ ಅನಿವಾಸಿ ಕನ್ನಡಿಗರ ಸಹಾಯ ಕೇಳಿತ್ತು.
ಕೂಡಲೇ ಕೆಎನ್ಆರ್ಐ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮತ್ತು ದುಬೈ ಕಾನ್ಸುಲೇಟ್ ಕಚೇರಿಯ ಕಾನ್ಸುಲ್ ಜಿತೇಂದ್ರ ಸಿಂಗ್ ನೇಗಿ ಅವರನ್ನು ಸಂಪರ್ಕಿಸಿದ್ದು ತಕ್ಷಣವೇ ಸ್ಪಂದಿಸಿ ಕಾನ್ಸುಲೇಟ್ ಮೂಲಕ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ಅಜ್ಮಾನ್ ಇಂಡಿಯನ್ ಅಸೋಸಿಯೇಷನ್ನ ಛಾಯಾದೇವಿ ಕೃಷ್ಣಮೂರ್ತಿಯವರು ದಿಲೀಪ್ ವೀಸಾ, ಇಮಿಗ್ರೇಷನ್, ಡೆತ್ ಸರ್ಟಿಫಿಕೇಟ್ ಪಡೆಯಲು ಸಹಕರಿಸಿದರು. ಇದೆಲ್ಲರ ಫಲವಾಗಿ ದಿಲೀಪ್ ಮೃತದೇಹ ದುಬೈನಿಂದ ಮಂಗಳೂರಿಗೆ ತಲುಪಿದೆ ಎಂದು ಹಿದಾಯತ್ ಹೇಳಿದರು.
ದಿಲೀಪ್ ಸಹೋದರಿ ಕಿಡ್ನಿ ಸಮಸ್ಯೆಯಿಂದ ಡಯಾಲಿಸಿಸ್ ಮಾಡಿಸುತ್ತಿದ್ದರು. ಸೋದರನ ಆದಾಯವನ್ನೇ ನಂಬಿದ್ದ ಕುಟುಂಬ ದಿಲೀಪ್ ಆಸ್ಪತ್ರೆಗೆ ದಾಖಲಾದ ನಂತರ ಹಣದ ಕೊರತೆಯಿಂದ ಡಯಾಲಿಸಿಸ್ ಮಾಡಲಾಗದೆ ಮುಂದೂಡುತ್ತಿದ್ದಾರೆ. ಮದುವೆ ವಯಸ್ಸು ಮೀರಿದ ಸಹೋದರಿ ಮತ್ತು ತಾಯಿಗೆ ಆಸರೆ ಇಲ್ಲದಾಗಿದೆ.
The mortal remains of Dilip Kumar,57, a pastry chef working in Dubai, arrived at Mangaluru on Thursday. Dilip died on January 22, and Karnataka Cultural Foundation (KCF) and International Kannadigas Federation (IKF) helped in organising Dilip’s last journey from Dubai to Mangaluru.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am