ಬ್ರೇಕಿಂಗ್ ನ್ಯೂಸ್
30-01-21 12:22 pm Mangalore Correspondent ಕರಾವಳಿ
ಮಂಗಳೂರು, ಜ.30 : ದುಬೈನಲ್ಲಿ ಕಳೆದ ಎಂಟು ತಿಂಗಳಿಂದ ಕೋಮಾದಲ್ಲಿದ್ದು, ಕಳೆದ ವಾರ ನಿಧನರಾದ ಮಂಗಳೂರು ಮೂಲದ ವ್ಯಕ್ತಿಯ ಮೃತದೇಹವನ್ನು ತಾಯ್ನಾಡಿಗೆ ಕಳುಹಿಸುವಲ್ಲಿ ಅನಿವಾಸಿ ಭಾರತೀಯರ ತಂಡ ಯಶಸ್ವಿಯಾಗಿದೆ.
ಮಂಗಳೂರಿನ ಕಾವೂರು ನಿವಾಸಿಯಾಗಿರುವ, ಅನಿವಾಸಿ ಕನ್ನಡಿಗ ದಿಲೀಪ್ (55) ಅವಿವಾಹಿತರಾಗಿದ್ದು ತಾಯಿ ಮತ್ತು ಅವಿವಾಹಿತ ಸಹೋದರಿಯರ ಕುಟುಂಬಕ್ಕೆ ಏಕೈಕ ಆಸರೆಯಾಗಿದ್ದರು. 15 ವರ್ಷಗಳಿಂದ ದುಬೈನಲ್ಲಿ ದುಡಿಯುತ್ತಿದ್ದ ದಿಲೀಪ್, ಕಳೆದ ಏಪ್ರಿಲ್ ತಿಂಗಳಿನಲ್ಲಿ ಬ್ರೈನ್ ಸ್ಟ್ರೋಕ್ನ ಪರಿಣಾಮ ಕೋಮಾವಸ್ಥೆಗೆ ತಲುಪಿದ್ದರು’ ಎಂದು ಕನ್ನಡಿಗಾಸ್ ಫೆಡರೇಷನ್ ಸಂಚಾಲಕ ಹಿದಾಯತ್ ಅಡ್ಡೂರ್ ತಿಳಿಸಿದ್ದಾರೆ.
ಸತತ ಎಂಟು ತಿಂಗಳಿಂದ ಕೋಮಾ ಸ್ಥಿತಿಯಲ್ಲಿದ್ದ ದಿಲೀಪ್ ಕುಮಾರ್ ಕಳೆದ ಶುಕ್ರವಾರ ನಿಧನರಾದರು. ಅವರ ಮೃತದೇಹವನ್ನು ಇಂಡಿಯನ್ ಕಾನ್ಸುಲೇಟ್ ದುಬೈ, ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್), ಕನ್ನಡಿಗಾಸ್ ಫೆಡರೇಷನ್, ಇಂಡಿಯನ್ ಅಸೋಸಿಯೇಷನ್ ಅಜ್ಮಾನ್ ನೆರವಿನಿಂದ ಕೋವಿಡ್ ಸಂದರ್ಭದಲ್ಲಿ ಪಡೆಯಬೇಕಾದ ಎಲ್ಲ ಅನುಮತಿ ಪತ್ರಗಳನ್ನು ಪಡೆದು ತಾಯ್ನಾಡಿಗೆ ಕಳುಹಿಸಲಾಗಿದೆ.

ದಿಲೀಪ್ ಆರೋಗ್ಯದ ಕುರಿತು ಅಬ್ದುಲ್ ಕರೀಮ್ ನೇತೃತ್ವದ ಕೆಸಿಎಫ್ ತಂಡ ಕಾಳಜಿ ವಹಿಸುತ್ತಿತ್ತು. ಅವರ ತಾಯಿ, ಸಹೋದರಿಯರು ಮಗನ ಮುಖವನ್ನು ಕೊನೆಯ ಬಾರಿ ನೋಡಬೇಕು. ಹೇಗಾದರೂ ಮೃತದೇಹ ಕಳುಹಿಸಿ ಎಂದು ಕೋರಿಕೊಂಡಿದ್ದು ಕೋವಿಡ್ ಸಂದರ್ಭದಲ್ಲಿ ಮೃತದೇಹವನ್ನು ತಾಯ್ನಾಡಿಗೆ ತಲುಪಿಸಲು ಇತರೇ ಅನಿವಾಸಿ ಕನ್ನಡಿಗರ ಸಹಾಯ ಕೇಳಿತ್ತು.
ಕೂಡಲೇ ಕೆಎನ್ಆರ್ಐ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮತ್ತು ದುಬೈ ಕಾನ್ಸುಲೇಟ್ ಕಚೇರಿಯ ಕಾನ್ಸುಲ್ ಜಿತೇಂದ್ರ ಸಿಂಗ್ ನೇಗಿ ಅವರನ್ನು ಸಂಪರ್ಕಿಸಿದ್ದು ತಕ್ಷಣವೇ ಸ್ಪಂದಿಸಿ ಕಾನ್ಸುಲೇಟ್ ಮೂಲಕ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ಅಜ್ಮಾನ್ ಇಂಡಿಯನ್ ಅಸೋಸಿಯೇಷನ್ನ ಛಾಯಾದೇವಿ ಕೃಷ್ಣಮೂರ್ತಿಯವರು ದಿಲೀಪ್ ವೀಸಾ, ಇಮಿಗ್ರೇಷನ್, ಡೆತ್ ಸರ್ಟಿಫಿಕೇಟ್ ಪಡೆಯಲು ಸಹಕರಿಸಿದರು. ಇದೆಲ್ಲರ ಫಲವಾಗಿ ದಿಲೀಪ್ ಮೃತದೇಹ ದುಬೈನಿಂದ ಮಂಗಳೂರಿಗೆ ತಲುಪಿದೆ ಎಂದು ಹಿದಾಯತ್ ಹೇಳಿದರು.
ದಿಲೀಪ್ ಸಹೋದರಿ ಕಿಡ್ನಿ ಸಮಸ್ಯೆಯಿಂದ ಡಯಾಲಿಸಿಸ್ ಮಾಡಿಸುತ್ತಿದ್ದರು. ಸೋದರನ ಆದಾಯವನ್ನೇ ನಂಬಿದ್ದ ಕುಟುಂಬ ದಿಲೀಪ್ ಆಸ್ಪತ್ರೆಗೆ ದಾಖಲಾದ ನಂತರ ಹಣದ ಕೊರತೆಯಿಂದ ಡಯಾಲಿಸಿಸ್ ಮಾಡಲಾಗದೆ ಮುಂದೂಡುತ್ತಿದ್ದಾರೆ. ಮದುವೆ ವಯಸ್ಸು ಮೀರಿದ ಸಹೋದರಿ ಮತ್ತು ತಾಯಿಗೆ ಆಸರೆ ಇಲ್ಲದಾಗಿದೆ.
The mortal remains of Dilip Kumar,57, a pastry chef working in Dubai, arrived at Mangaluru on Thursday. Dilip died on January 22, and Karnataka Cultural Foundation (KCF) and International Kannadigas Federation (IKF) helped in organising Dilip’s last journey from Dubai to Mangaluru.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am