ಬ್ರೇಕಿಂಗ್ ನ್ಯೂಸ್
30-01-21 02:51 pm Mangalore Correspondent ಕರಾವಳಿ
ಬಂಟ್ವಾಳ, ಜ.30: ತಾಲೂಕಿನ ಸರಪಾಡಿಯಲ್ಲಿ ನಿರ್ಮಾಣಗೊಂಡು ಉದ್ಘಾಟನೆಗೆ ಸಿದ್ದವಾಗಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ವೀಕ್ಷಣೆಗೆ ತೆರಳಿದ್ದ ಮಾಜಿ ಸಚಿವ ರಮಾನಾಥ ರೈ ಅವರಿಗೆ ಬಿಜೆಪಿ ಕಾರ್ಯಕರ್ತರು ಘೆರಾವ್ ಹಾಕಿದ ಘಟನೆ ನಡೆದಿದೆ.
ತನ್ನ ಅವಧಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಕ್ಷೇತ್ರದ ಮಾಜಿ ಶಾಸಕ ರಮಾನಾಥ ರೈ ಯೋಜನೆಯ ಕಾಮಗಾರಿಯನ್ನು ನೋಡಲೆಂದು ಇಂದು ಸ್ಥಳಕ್ಕೆ ತೆರಳಿದ್ದರು. ಆದರೆ, ರಮಾನಾಥ ರೈ ಸ್ಥಳಕ್ಕೆ ಬರುವ ವಿಚಾರ ತಿಳಿದು ಬಿಜೆಪಿ ಕಾರ್ಯಕರ್ತರು ಸೇರಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನೆಲೆಯಾಗಿದೆ. ಗೇಟ್ ತೆರೆದು ತನಗೆ ವೀಕ್ಷಿಸಲು ಅವಕಾಶ ನೀಡಬೇಕೆಂದು ರಮಾನಾಥ ರೈ ಪಟ್ಟು ಹಿಡಿದಾಗ ಪೊಲೀಸರು ಅದಕ್ಕೆ ಅವಕಾಶ ಕೊಡಲಿಲ್ಲ. ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಲ್ಲದೆ, ರಮಾನಾಥ ರೈ ಜೊತೆ ವಾಗ್ವಾದ ನಡೆಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಆಕ್ರೋಶದ ಮಾತುಗಳು ವಿನಿಮಯ ಆಗಿದ್ದು ಪೊಲೀಸರ ನಡುವೆ ತಳ್ಳಾಟಕ್ಕೂ ಸಾಕ್ಷಿಯಾಯಿತು.


ಬಂಟ್ವಾಳದಿಂದ ಹೆಚ್ಚುವರಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಿದ್ದು ಸೇರಿದ್ದ ಕಾರ್ಯಕರ್ತರನ್ನು ಚದುರಿಸಲಾಗಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ನಾಳೆ ಭಾನುವಾರ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಉದ್ಘಾಟಿಸಲಿದ್ದು ಇದೇ ಸಂದರ್ಭದಲ್ಲಿ ಮಾಜಿ ಶಾಸಕರು ಸ್ಥಳಕ್ಕೆ ಬಂದಿದ್ದು ಬಿಜೆಪಿ ಕಾರ್ಯಕರ್ತರ ಆಕ್ಷೇಪಕ್ಕೆ ಕಾರಣವಾಗಿದೆ.

ರಮಾನಾಥ ರೈ ಈ ವೇಳೆ ಪೊಲೀಸರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಮಾಜಿ ಶಾಸಕ. ಸರಕಾರಿ ಯೋಜನೆಯನ್ನು ವೀಕ್ಷಿಸುವುದು ನನ್ನ ಹಕ್ಕು. ಅದನ್ನು ನಿರಾಕರಿಸುವಂತಿಲ್ಲ ಎಂದಿದ್ದಾರೆ. ಆದರೆ, ಪೊಲೀಸರು ಯೋಜನೆಗೆ ಸಂಬಂಧಪಟ್ಟ ಅಧಿಕಾರಿಗಳು ಇಲ್ಲದೆ ವೀಕ್ಷಿಸಲು ಅವಕಾಶ ನೋಡುವುದಿಲ್ಲ. ಮೇಲಿನ ಅಧಿಕಾರಿಗಳು ಪರ್ಮಿಶನ್ ನೀಡಿದರೆ ಅವಕಾಶ ನೀಡುತ್ತೇವೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನೆಲೆಯಾಗಿದೆ. ಹೀಗಿರುವಾಗ ಅವಕಾಶ ನೀಡುವುದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಗೆ ರಮಾನಾಥ ರೈ ಮತ್ತು ಕಾಂಗ್ರೆಸ್ ನಾಯಕರ ನಿಯೋಗ ಸ್ಥಳದಿಂದ ತೆರಳಿದ್ದಾರೆ.
Video:
Clash erupts between BJP and Congress Members in Bantwal in Mangalore. The issue erupted regarding water project at Bantwal.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am