ಬ್ರೇಕಿಂಗ್ ನ್ಯೂಸ್
30-01-21 10:40 pm Mangaluru Correspondent ಕರಾವಳಿ
ಮಂಗಳೂರು, ಜ.30: ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಶಿಸ್ತು ಕ್ರಮ ಜರುಗಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಎಂಟು ಮಂದಿ ಸಿಬಂದಿಯನ್ನು ಕಮಿಷನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ವರ್ಗಾಯಿಸಿ ಆದೇಶ ಮಾಡಿದ್ದಾರೆ.
ಅಲ್ಲದೆ, ಘಟನೆಗೆ ಸಂಬಂಧಿಸಿ ಹೆಚ್ಚುವರಿ ಇಲಾಖಾ ತನಿಖೆ ಕೈಗೊಂಡು ವಿಚಾರಣಾ ವರದಿ ನೀಡುವಂತೆ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಸೂಚಿಸಲಾಗಿದೆ.
ಪ್ರಕರಣದಲ್ಲಿ ಎಎಸ್ಐಗಳು, ಐದು ಹೆಡ್ ಕಾನ್ಸ್ ಟೇಬಲ್ ಗಳಿದ್ದು ಅವರನ್ನು ಕೊಣಾಜೆ, ಬಜ್ಪೆ, ಕಂಕನಾಡಿ ನಗರ, ಪಾಂಡೇಶ್ವರ, ಬಂದರು, ಉರ್ವಾ ಮತ್ತು ಬರ್ಕೆ ಠಾಣೆಗಳಿಗೆ ವರ್ಗಾಯಿಸಿ ಆದೇಶ ಮಾಡಲಾಗಿದೆ. ಅಲ್ಲದೆ, ನಾಳೆಯೇ ಅವರು ತಮಗೆ ನಿಯೋಜಿಸಿದ ಠಾಣೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಕಮಿಷನರ್ ಶಶಿಕುಮಾರ್, ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸುವ ನಮ್ಮ ಪ್ರಯತ್ನದ ನಡುವೆ ಈ ರೀತಿಯ ಘಟನೆ ನಡೆದಿರುವುದು ಪೊಲೀಸರ ಘನತೆಗೆ ಕುಂದು ತಂದಿದೆ. ಕರ್ತವ್ಯದ ಸಮಯದಲ್ಲಿ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯ ಜೊತೆಗೆ ಜೊತೆಗೆ ಕುಳಿತು ಟೇಬಲ್ ಹಂಚಿಕೊಂಡಿದ್ದು ತಪ್ಪೆಂದು ಪರಿಗಣಿಸಲಾಗಿದೆ. ಹೀಗಾಗಿ ಘಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಹೇಳಿದ್ದಾರೆ.
ಸಿಸಿಬಿ ಸಿಬಂದಿ ಪಾಲ್ಗೊಂಡಿದ್ದ ಎಣ್ಣೆ ಪಾರ್ಟಿಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು.
Read: ಮಂಗಳೂರು ಸಿಸಿಬಿ ಸಿಬಂದಿ ಎಣ್ಣೆ ಪಾರ್ಟಿ ; ತನಿಖೆಗೆ ಸೂಚಿಸಿದ ಕಮಿಷನರ್
In connection to CCB police personals drinking in a bar at Thokottu in Mangalore, Police Commissioner Shashi Kumar has transferred eight of the CCB police personals to Various Police Stations of Mangalore.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm