ಬ್ರೇಕಿಂಗ್ ನ್ಯೂಸ್
31-01-21 05:08 pm Mangaluru Correspondent ಕರಾವಳಿ
ಮಂಗಳೂರು, ಜ.31: ಪ್ರತಿ ನಾಗರಿಕನಿಗೂ ಶುದ್ಧ ಕುಡಿಯುವ ನೀರು ಅವಶ್ಯಕವಾಗಿದ್ದು ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಅವರು ಇಂದು ಬಂಟ್ವಾಳ ತಾಲೂಕಿನ ಸ್ಪರ್ಶ ಸಭಾಂಗಣದಲ್ಲಿ ಬಂಟ್ವಾಳ ತಾಲೂಕಿನ ನರಿಕೊಂಬು ಮತ್ತು ಸರಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಈ ಸಮಸ್ಯೆಗಳನ್ನು ನಿವಾರಿಸಲು ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಅದರಂತೆ ಬಹುಗ್ರಾಮ ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆಯಡಿ 62 ಕೋಟಿ ರೂ. ಅನುದಾನದಲ್ಲಿ ಬಂಟ್ವಾಳ ತಾಲೂಕಿನ ನರಿಕೊಂಬು ಮತ್ತು ಸರಪಾಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ ಎಂದರು.

ನೀರಿನ ಮೂಲಗಳಾದ ಕೆರೆ, ನದಿ, ಅಣೆಕಟ್ಟುಗಳಿಂದ ನೀರನ್ನು ಸಂಗ್ರಹಿಸಿ ರಾಜ್ಯದ ಪ್ರತಿ ಮನೆ ಮನೆಗೂ ನೀರು ತಲುಪುವಂತಾಗಬೇಕು ಹಾಗೂ ದಿನದ 24 ಗಂಟೆಗಳ ಕಾಲವೂ ಶುದ್ಧ ಕುಡಿಯುವ ನೀರು ಪೂರೈಕೆ ಆಗಬೇಕು ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರುಗಳು ತಮ್ಮ ಜಿಲ್ಲೆಯಲ್ಲಿ ಯಾವ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಇವೆ ಎಂದು ಗುರುತಿಸಿ ಅದನ್ನು ಸರಿಪಡಿಸಲು ಕಾರ್ಯವನ್ನು ಮಾಡಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕುಡಿಯುವ ನೀರಿನ ಯೋಜನೆಯು ಬಹಳ ವೇಗವಾಗಿ, ಸಮರ್ಪಕವಾಗಿ ಹಾಗೂ ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲಿ ನಿರ್ಮಾಣವಾಗಿರುವುದು ಬಹಳ ಸಂತೋಷಕರ ಸಂಗತಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಮಾತನಾಡಿ, ಬಂಟ್ವಾಳ ತಾಲೂಕು ನರಿಕೊಂಬು ಮತ್ತು ಇತರೆ 38 ಜನ ವಸತಿ ಪ್ರದೇಶಗಳಿಗೆ ಹಾಗೂ ಸರಪಾಡಿ ಮತ್ತು ಇತರೆ 95 ಜನ ವಸತಿ ಪ್ರದೇಶಗಳಿಗೆ 22.55 ಕೋಟಿ ಮತ್ತು 38.70 ಕೋಟಿ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಸರಬರಾಜು ಕಾಮಗಾರಿ ಪೂರ್ಣಗೊಂಡಿದೆ ಎಂದರು.
ಬಂಟ್ವಾಳ ವಿಧಾನಸಭಾ ಕ್ಷೇತ್ರ ಒಟ್ಟು 39 ಗ್ರಾಮ ಪಂಚಾಯತಿಗಳನ್ನು ಹೊಂದಿದ್ದು, ಈ ಯೋಜನೆಗಳು 30 ಗ್ರಾಮ ಪಂಚಾಯಿತಿಗಳನ್ನು ಒಳಗೊಂಡಿರುತ್ತದೆ. ಇನ್ನುಳಿದ ವೀರಕಂಬ, ಬೋಳಂತೂರು, ಸಜೀಪ ಮುನ್ನೂರು, ಸಜೀಪ ಮೂಡ ಮತ್ತು ಮಂಚಿ ಗ್ರಾಮ ಪಂಚಾಯತಿಗಳ ಒಟ್ಟು 49 ಜನ ವಸತಿ ಪ್ರದೇಶಗಳಿಗೆ ಹಾಗೂ ಉಳ್ಳಾಲ ನಗರಸಭೆ, ಕೋಟೆಕಾರು ಪಟ್ಟಣ ಪಂಚಾಯತಿಗಳಿಗೆ ನೇತ್ರಾವತಿ ನದಿಯಿಂದ ನೀರು ಸರಬರಾಜು ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಕೇಂದ್ರ ಜಲ ಜೀವನ ಮಿಷನ್ ಯೋಜನೆಯಡಿ 2024 ರ ಒಳಗೆ ಗ್ರಾಮೀಣ ಪ್ರದೇಶದ ಪ್ರತಿ ಮನೆಗಳಿಗೆ ನಳಗಳ ಮೂಲಕ ಶುದ್ಧ ಕುಡಿಯುವ ನೀರನ್ನು ತಲುಪಿಸುವ ಯೋಜನೆಗೆ ಸಂಬಂದಿಸಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 30 ಗ್ರಾಮ ಪಂಚಾಯತಿಗಳ 46 ಗ್ರಾಮಗಳಿಗೆ ಅಂದಾಜು 33.72 ಕೋಟಿ ವೆಚ್ಚದ ಅಂದಾಜು ಪಟ್ಟಿಯನ್ನು ತಯಾರಿಸಲಾಗಿದ್ದು, ಈ ಯೋಜನೆ ಅನುಷ್ಟಾನಗೊಳ್ಳಬೇಕಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೊಡು, ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಸೆಲ್ವಮಣಿ. ಆರ್, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿಪಂ ಅಭಿಯಂತರರಾದ ನರೇಂದ್ರ ಬಾಬು, ಜಿಲ್ಲಾ ಪಂಚಾಯತ್ ಸದಸ್ಯರಾದ ರವೀಂದ್ರ ಕಂಬಳಿ, ಮಂಜುಳಾ, ಕಮಲಾಕ್ಷೀ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
26-03-26 09:31 am
HK News Staffer
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
26-03-26 09:28 am
HK News Staffer
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am