ಬ್ರೇಕಿಂಗ್ ನ್ಯೂಸ್
02-02-21 06:15 pm Mangalore Correspondent ಕರಾವಳಿ
ಮಂಗಳೂರು, ಫೆ.2 : ಮೂರು ಬಾರಿ ಶಾಸಕರಾಗಿದ್ದು, ಯಾವುದೇ ಕಪ್ಪು ಚುಕ್ಕೆ ಇಲ್ಲದ ಸಜ್ಜನ ರಾಜಕಾರಣಿಯಾಗಿರುವ ಕರಾವಳಿಯ ಪ್ರಬಲ ಬಂಟ ಸಮುದಾಯದ ಪ್ರತಾಪಚಂದ್ರ ಶೆಟ್ಟಿಯವರನ್ನು ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡು ಸಭಾಪತಿ ಸ್ಥಾನದಿಂದ ಇಳಿಸಲು ಪಿತೂರಿ ಮಾಡಿದೆ. ಅವರನ್ನು ಬಲವಂತವಾಗಿ ರಾಜೀನಾಮೆ ಪಡೆಯಲು ಯತ್ನಿಸುತ್ತಿರುವ ಬೆಳವಣಿಗೆ ಕರಾವಳಿಯ ಜಿಲ್ಲೆಗೆ ಹಾಗೂ ಬಂಟ ಸಮುದಾಯಕ್ಕೆ ಮಾಡುತ್ತಿರುವ ಅವಮಾನ ಎಂದು ಮಾಜಿ ಸಚಿವ ಅಭಯ ಚಂದ್ರ ಜೈನ್ ಆರೋಪಿಸಿದ್ದಾರೆ.
ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಸಭಾಪತಿಯ ಅಧಿಕಾರಾವಧಿ ಮುಗಿಯದೆ ಅವರನ್ನು ರಾಜೀನಾಮೆ ಕೊಡಿಸುವ ಅಥವಾ ಕೆಳಗಿಳಿಸುವ ಪ್ರಯತ್ನ ನಡೆದಿಲ್ಲ. ಆದರೆ ಬಿಜೆಪಿ ಮತ್ತು ಜೆಡಿಎಸ್ ಆ ಕೆಲಸವನ್ನು ಮಾಡುತ್ತಿದೆ ಎಂದು ಅವರು ಹೇಳಿದರು.
ಪ್ರತಾಪಚಂದ್ರ ಶೆಟ್ಟಿ ಶ್ರೀಮಂತ ಕುಟಂಬದವರಾಗಿದ್ದು, ವಿಜಯ ಬ್ಯಾಂಕ್ ಅಧಿಕಾರಿಯಾಗಿದ್ದಾಗ ರಾಜಕೀಯ ಸೇವೆಯ ಉದ್ದೇಶದಿಂದ ಕೆಲಸ ತೊರೆದವರು. ಮೂರು ಬಾರಿ ಶಾಸಕರಾಗಿ ಜನಸೇವೆ ಸಲ್ಲಿಸಿದ್ದರೂ ಮಂತ್ರಿಗಿರಿಗಾಗಿ ಹಾತೊರೆದವರಲ್ಲ. ಭ್ರಷ್ಟಾಚಾರ ರಹಿತ ಹೆಮ್ಮೆಯ ರಾಜಕಾರಣಿಗೆ ಈ ರೀತಿ ಅವಮಾನ ಮಾಡುತ್ತಿರುವುದನ್ನು ಕಂಡು ಬೇಸರವಾಗುತ್ತಿದೆ. ಅಧಿಕಾರ ದಾಹದಿಂದ ಬಿಜೆಪಿ ಹಾಗೂ ಜೆಡಿಎಸ್ ಈ ಕೃತ್ಯ ನಡೆಸುತ್ತಿದೆ ಎಂದು ಆರೋಪಿಸಿದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಮಾತನಾಡಿ, ರಾಜ್ಯ ರಾಜಕಾರಣದಲ್ಲಿ ಪ್ರತಾಪಚಂದ್ರ ಶೆಟ್ಟಿಯವರನ್ನು ರಾಜೀನಾಮೆಗೆ ಮುಂದಾಗಿಸಿರುವ ಈ ಬೆಳವಣಿಗೆ ಕಂಡು ಕೇಳರಿಯದ ಘಟನೆಗೆ ಸಾಕ್ಷಿಯಾಗುತ್ತಿದೆ. ಇದು ಬಂಟ ಸಮುದಾಯಕ್ಕೆ ಮಾಡಲಾಗುತ್ತಿರುವ ವಿಶ್ವಾಸದ್ರೋಹ ಎಂದರು.
ಗೋಷ್ಠಿಯಲ್ಲಿ ಮನಪಾ ಸದಸ್ಯ ಪ್ರವೀಣ್ ಚಂದ್ರ ಆಳ್ವ ಉಸ್ಥಿತರಿದ್ದರು.
Bjp and Jds are trying to Dismiss Prathachandra Shetty from the Position of Speaker says Abhayachandra Jain and Mithun Rai at a press meet held at Mangalore.
09-06-25 03:02 pm
Bangalore Correspondent
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm