ಬ್ರೇಕಿಂಗ್ ನ್ಯೂಸ್
03-02-21 05:08 pm Mangalore Correspondent ಕರಾವಳಿ
ಮಂಗಳೂರು, ಫೆ.3: ಕನ್ನಡ ಕಿರುತೆರೆ ಮತ್ತು ತುಳು ಸಿನಿಮಾಗಳಲ್ಲಿ ನಟಿಸುತ್ತಿರುವ ಶೋಭರಾಜ್ ಪಾವೂರು ವಿರುದ್ಧ ಮೋದಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಪೆಟ್ರೋಲ್ ದರ ವಿಪರೀತ ಏರಿಕೆಯಾಗಿರುವ ಬಗ್ಗೆ ಶೋಭರಾಜ್ ಫೇಸ್ಬುಕ್ ನಲ್ಲಿ ಮಾಡಿದ್ದ ಪೋಸ್ಟಿಗೆ ವಿರುದ್ಧವಾಗಿ ಮೋದಿ ಅಭಿಮಾನಿಗಳು ಬೆದರಿಕೆ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮೋ, ನಮಗೆ ಮೋಸ, ಪೆಟ್ರೋಲ್ ಧಗ ಧಗ ಎಂದು ಶೋಭರಾಜ್ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿ, ಬಜೆಟ್ ನಲ್ಲಿ ಮತ್ತೆ ತೈಲ ದರದ ಮೇಲೆ ಸೆಸ್ ವಿಧಿಸಿರುವುದನ್ನು ವಿರೋಧಿಸಿದ್ದರು. ಈ ಬಗ್ಗೆ ಕರಾವಳಿಯ ಮೋದಿ ಅಭಿಮಾನಿಗಳು ಮೈಪರಚಿಕೊಂಡವರ ರೀತಿ ವರ್ತಿಸಿದ್ದಾರೆ.

ಆಕ್ರೋಶ ಕೇಳಿಬರುತ್ತಿದ್ದಂತೆ, ತನ್ನ ಹಳೆಯ ಪೋಸ್ಟನ್ನು ಡಿಲೀಟ್ ಮಾಡಿದ್ದ ಶೋಭರಾಜ್ ತುಳುವಿನಲ್ಲಿ ಮತ್ತೆ ಪೋಸ್ಟ್ ಮಾಡಿದ್ದರು. ನಾನು ನನ್ನ ಅಭಿಪ್ರಾಯವನ್ನು ಹೇಳಿದ್ದೇನೆ. ಅಷ್ಟಕ್ಕೂ ನನ್ನ ಪೋಸ್ಟ್ ನಿಂದ ತಪ್ಪಾಗಿದ್ದರೆ ಕ್ಷಮಿಸಿ ಎಂದಿದ್ದಾರೆ. ಆದರೆ, ಮೋದಿ ಅಭಿಮಾನಿಗಳ ಆಕ್ರೋಶ ಕಡಿಮೆಯಾಗಿಲ್ಲ. ಕೆಲವರು ನೇರವಾಗಿ ನೋಡಿಕೊಳ್ಳುತ್ತೇವೆಂದು ಬೆದರಿಕೆ ಹಾಕಿದರೆ, ಇನ್ನು ಕೆಲವರು ನಿನ್ನ ಸಿನಿಮಾ ಏನಾಗುತ್ತದೆ ನೋಡುತ್ತಿರು ಅಂತ ಟೀಕೆ ಮಾಡಿದ್ದಾರೆ. ಮತ್ತೆ ಕೆಲವರು ವ್ಯಂಗ್ಯವಾಗಿ ಅಣಕಿಸಿಯೂ ಟೀಕೆ ಮಾಡಿದ್ದಾರೆ.

ಇವೆಲ್ಲ ಆಕ್ರೋಶ ಕೇಳಿಬಂದ ಬಳಿಕ ಶೋಭರಾಜ್ ಫೇಸ್ಬುಕ್ ನಲ್ಲಿ ತಣ್ಣಗಾಗಿದ್ದಾರೆ. ಮಂಗಳೂರು ಮೂಲದ ಪ್ರತಿಭಾವಂತ ನಟನಾಗಿರುವ ಶೋಭರಾಜ್, ಕನ್ನಡ ಕಿರುತೆರೆಯಲ್ಲಿ ಮಿಂಚುತ್ತಿದ್ದಾರೆ. ಜೊತೆಗೆ ತುಳು ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ. ಹುಬ್ಲಿ ಹುಡ್ಗ , ಮಂಗಳೂರು ಹುಡ್ಗಿ ಧಾರಾವಾಹಿಯಲ್ಲಿ ಹುಡುಗಿಯ ತಂದೆಯ ಪಾತ್ರ ಶೋಭರಾಜ್ ಗೆ ಖ್ಯಾತಿ ತಂದುಕೊಟ್ಟಿತ್ತು.
Mangalore Tulu Actor and Director Shobraj Pavoor Lands into Controversy after his post on Fuel Prices and PM Modi turns into Controversy.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm