ಬ್ರೇಕಿಂಗ್ ನ್ಯೂಸ್
04-02-21 11:49 am Mangalore Correspondent ಕರಾವಳಿ
ಮಂಗಳೂರು, ಫೆ.4 : ಕಾರೊಂದು ಮರಕ್ಕೆ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕುಳಾಯಿ ಬಳಿ ನಡೆದಿದೆ.
ಮೃತ ಮಹಿಳೆಯನ್ನು ಕೃಷ್ಣಾಪುರ ಚೊಕ್ಕಬೆಟ್ಟು ನಿವಾಸಿ, ಬೋಂದೆಲ್ನಲ್ಲಿ ವಾಸಿಸುತ್ತಿದ್ದ ಸುಹಾನಾ (26) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಸುಹಾನಾ ಸಹೋದರಿ ಫಾತಿಮಾ ಶೌರೀನ್, ಸಹೋದರರಾದ ರಾಹಿಲ್ ಶಮೀಮ್ ಮತ್ತು ರಾಝಿಕ್ ಶಹಾನ್ ಅವರಿಗೆ ಗಂಭೀರ ಗಾಯಗಳಾಗಿವೆ.
ಗುರುವಾರ ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಮದುವೆ ಕಾರ್ಯಕ್ರಮಕ್ಕೆ ತೆರಳಲು ಸಿದ್ಧತೆಯಲ್ಲಿದ್ದ ಕುಟುಂಬ ನಿನ್ನೆ ರಾತ್ರಿ ನಗರಕ್ಕೆ ಆಗಮಿಸಿ ಆಹಾರ ಪಾರ್ಸೆಲ್ ಮಾಡಿಸಿಕೊಂಡು ಕೃಷ್ಣಾಪುರ ಚೊಕ್ಕಬೆಟ್ಟುವಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಾರು ಚಲಾಯಿಸುತ್ತಿದ್ದ ರಾಹಿಲ್ ಶಮೀಮ್ಗೆ ವಿರುದ್ಧ ದಿಕ್ಕಿನಲ್ಲಿ ವಾಹನ ಬರುತ್ತಿದೆ ಎಂದು ಭ್ರಮಿಸಿ, ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಕಾರು ಮರಕ್ಕೆ ಡಿಕ್ಕಿ ಹೊಡೆಯಿತು ಎನ್ನಲಾಗಿದೆ.
ಕಾರಲ್ಲಿದ್ದ ನಾಲ್ಕು ಮಂದಿಗೂ ಗಾಯವಾಗಿದ್ದು, ಆ ಪೈಕಿ ಸುಹಾನಾ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಸುಹಾನಾ ಅವರು ಪತಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಈ ಬಗ್ಗೆ ಮುಹಮ್ಮದ್ ರಿಯಾಝ್ ನೀಡಿದ ದೂರಿನಂತೆ ಸಂಚಾರ ಉತ್ತರ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
A woman was killed after their car hit a tree at Kulai in Mangalore. Three have been seriously injured. North Police have registered the case.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am