ಬ್ರೇಕಿಂಗ್ ನ್ಯೂಸ್
04-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.4 : ಇಲ್ಲಿನ ಬೈಕಂಪಾಡಿಯಲ್ಲಿ ಇರುವ ಮಂಗಳೂರು ಎಪಿಎಂಸಿ ಯಾರ್ಡಿನ ಗೋದಾಮು ಹಂಚಿಕೆಯ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮಂಗಳೂರು ಸೆಂಟ್ರಲ್ ಮಾರ್ಕೆಟ್ನಲ್ಲಿದ್ದ ಹಣ್ಣು ಮತ್ತು ತರಕಾರಿ ಸಹಿತ ಸುಮಾರು 200ಕ್ಕೂ ಅಧಿಕ ವ್ಯಾಪಾರಿಗಳಿಗೆ 390 ಗೋದಾಮುಗಳನ್ನು ಹಂಚಿಕೆ ಮಾಡಲಾಗಿತ್ತು. ಜೇಷ್ಠತೆಯ ಆಧಾರದ ಹಂಚಿಕೆಯಲ್ಲಿ ಆಗಿರುವ ಲೋಪಗಳು ಮತ್ತು ವ್ಯಾಪಾರಕ್ಕೆ ಯೋಗ್ಯವಲ್ಲದ ಗೋದಾಮುಗಳನ್ನು ಹಂಚಿಕೆ ಮಾಡಿರುವುದು, ಪರಿಶಿಷ್ಟ ಜಾತಿ/ಪಂಗಡಕ್ಕೆ ಮೀಸಲಿಟ್ಟಿರುವ ಗೋದಾಮುಗಳನ್ನು ನಿಯಮಬಾಹಿರವಾಗಿ ಸಾಮಾನ್ಯ ವರ್ಗದ ಬಲಾಢ್ಯ ವರ್ತಕರಿಗೆ ಹಂಚಿಕೆ ಮಾಡಿರುವುದು, ಕಾರ್ನರ್ ಅಂಗಡಿಗಳನ್ನು ಹರಾಜಿಗಿಡದೆ ನೇರವಾಗಿ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದ ಮಂಗಳೂರು ಎಪಿಎಂಸಿ ವರ್ತಕರ ಸಂಘವು ಮಂಗಳೂರು ಎಪಿಎಂಸಿ ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ದಾವೆ ಹೂಡಿತ್ತು.

ಅದಲ್ಲದೆ ಎಪಿಎಂಸಿಯ ಸುಮಾರು 170ಕ್ಕೂ ಅಧಿಕ ವರ್ತಕರು, ನಿಗದಿತ ಡಿಡಿ ಪಾವತಿಸದೆ ಗೋದಾಮು ಹಂಚಿಕೆ ಪ್ರಕ್ರಿಯೆಯನ್ನು ವಿರೋಧಿಸಿ ಕಾನೂನು ಹೋರಾಟ ನಡೆಸುವ ತೀರ್ಮಾನ ಕೈಗೊಂಡಿದ್ದರು.
ದೂರಿನಂತೆ ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ಮಂಗಳೂರು ಎಪಿಎಂಸಿ ಅಧಿಕಾರಿಗಳ ಲೋಪವನ್ನು ಗುರುತಿಸಿ ಗೋದಾಮು ಹಂಚಿಕೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶ ನೀಡಿದೆ.
ಗೋದಾಮು ಹಂಚಿಕೆ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ನೀಡಿದ ತೀರ್ಪನ್ನು ಮಂಗಳೂರು ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಭರತ್ ರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಕೆ.ಇಮ್ತಿಯಾಝ್ ಸ್ವಾಗತಿಸಿದ್ದಾರೆ. ವರ್ತಕರಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
Mangalore Irregularities in distribution of cashews by ampc the district court issues stay order on Apmc.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am