ಬ್ರೇಕಿಂಗ್ ನ್ಯೂಸ್
04-02-21 07:44 pm Mangaluru Correspondent ಕರಾವಳಿ
ಮಂಗಳೂರು, ಫೆ.4: ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳನ್ನು ಹೊರತುಪಡಿಸಿ ಉಳಿದ ಖಾಸಗಿ ಹಿಂದು ದೇವಸ್ಥಾನಗಳನ್ನು ಕಲಂ 53ರ ಅಡಿಯಲ್ಲಿ ನೋಂದಣಿ ಮಾಡಿಸಲು ಸರಕಾರ ಮುಂದಾಗಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಎಲ್ಲ ಖಾಸಗಿ ದೇವಸ್ಥಾನಗಳಿಗೆ ನೋಟೀಸ್ ಜಾರಿ ಮಾಡಲಾಗಿದ್ದು, ಇದನ್ನು ತಕ್ಷಣದಿಂದಲೇ ಹಿಂಪಡೆಯಬೇಕೆಂದು ವಿಶ್ವ ಹಿಂದು ಪರಿಷತ್ ಆಗ್ರಹಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ವಿಹಿಂಪ ಪ್ರಾಂತ ಸಂಚಾಲಕ ಎಂ.ಬಿ.ಪುರಾಣಿಕ್, ಈ ರೀತಿಯ ಸುತ್ತೋಲೆ ಹೊರಡಿಸಿದ್ದು ಸರಕಾರದ ಹಿಂದು ವಿರೋಧಿ ನಿಲುವಾಗಿದ್ದು, ಖಾಸಗಿ ದೇವಸ್ಥಾನಗಳ ವಾರ್ಷಿಕ ಲೆಕ್ಕಪತ್ರ, ಅಲ್ಲಿ ಏನೆಲ್ಲ ಸೊತ್ತುಗಳಿವೆ ಎಂಬ ಬಗ್ಗೆ ಲೆಕ್ಕ ಕೊಡಲು ಸೂಚಿಸಲಾಗಿದೆ. ಇದು ಹಿಂದು ದೇವಸ್ಥಾನಗಳಿಗೆ ಮಾತ್ರ ಸೀಮಿತ ಮಾಡಿದ್ದು ಯಾಕೆ ? ಇಂಥದ್ದೇ ನಿಲುವು ಕ್ರಿಸ್ತಿಯನ್ನರ ಚರ್ಚ್ ಮತ್ತು ಮುಸ್ಲಿಮರ ಮಸೀದಿಗಳಿಗೆ ಯಾಕೆ ಅನ್ವಯ ಮಾಡಿಲ್ಲ ಎಂದು ಪ್ರಶ್ನಿಸಿದರು.

ಕಳೆದ ಬಾರಿ ಕಾಂಗ್ರೆಸ್ ಸರಕಾರ ಇದ್ದಾಗ 2015ರ ಆಗಸ್ಟ್ ತಿಂಗಳಲ್ಲಿ ಈ ರೀತಿಯ ಸುತ್ತೋಲೆಯನ್ನು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಹೊರಡಿಸಲಾಗಿತ್ತು. ಅದನ್ನು ಮಾರ್ಪಾಡುಗೊಳಿಸಿ ಈಗಿನ ಬಿಜೆಪಿ ಸರಕಾರ 2020ರ ನವೆಂಬರ್ ತಿಂಗಳಲ್ಲಿ ಜಾರಿ ಮಾಡಿದ್ದು, ಅನುಷ್ಠಾನಕ್ಕೆ ತರುತ್ತಿದೆ. ಖಾಸಗಿ ಹಿಂದು ದೇವಸ್ಥಾನಗಳಿಗೆ ಅಧಿಕಾರಿಗಳು ನೋಟೀಸ್ ನೀಡಿ, ಚರಾಸ್ತಿ, ಸ್ಥಿರಾಸ್ತಿ ಮತ್ತು ವಾರ್ಷಿಕ ಆದಾಯದ ಬಗ್ಗೆ ಮಾಹಿತಿ ನೀಡಲು ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ. ಒಂದು ತಿಂಗಳಲ್ಲಿ ಲೆಕ್ಕಪತ್ರ ನೀಡದಿದ್ದರೆ ತಾವೇ ಬಂದು ಆ ಕೆಲಸವನ್ನು ಮಾಡಬೇಕಾಗುತ್ತದೆ ಎಂದು ಬೆದರಿಸುತ್ತಿದ್ದಾರೆ. ಮಾಹಿತಿ ನೀಡದಿದ್ದರೆ ಕಾನೂನು ಕ್ರಮದ ಎಚ್ಚರಿಕೆ ನೀಡುತ್ತಿದ್ದಾರೆ. ಈ ರೀತಿಯ ಒತ್ತಡವನ್ನು ಚರ್ಚ್, ಮಸೀದಿಗಳಿಗೂ ಮಾಡುತ್ತೀರಾ ಎಂದು ಪ್ರಶ್ನೆ ಮಾಡಿದರು.
ಮುಜರಾಯಿ ಇಲಾಖೆಯ ದೇವಸ್ಥಾನಗಳಿಗಿಂತ ಹೆಚ್ಚು ಜನಸ್ನೇಹಿಯಾಗಿ ಸೇವಾ ಚಟುವಟಿಕೆಗಳನ್ನು ಖಾಸಗಿ ದೇವಸ್ಥಾನಗಳು ನಡೆಸಿಕೊಂಡು ಬಂದಿವೆ. ರಾಜ್ಯದಲ್ಲಿ ಈ ರೀತಿಯ ಸಾವಿರಾರು ದೇವಸ್ಥಾನಗಳಿದ್ದು, ಇಂಥ ನೋಟೀಸ್ ನೀಡಿ ಹಿಂದು ಶ್ರದ್ಧಾಕೇಂದ್ರಗಳನ್ನು ಸರಕಾರೀಕರಣಗೊಳಿಸಲು ಹುನ್ನಾರ ನಡೆಸುತ್ತಿದೆ. ಸರಕಾರಕ್ಕೆ ತೆಗೆದುಕೊಳ್ಳುವ ಪ್ರಯತ್ನದ ಮೊದಲ ಹೆಜ್ಜೆ. ತಕ್ಷಣದಿಂದಲೇ ಈ ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ನಾವು ಯಾವುದೇ ಹೋರಾಟಕ್ಕೂ ಸಿದ್ಧವಾಗಿದ್ದೇವೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಗೋಪಾಲ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ಇದ್ದರು.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm