ಬ್ರೇಕಿಂಗ್ ನ್ಯೂಸ್
05-02-21 08:29 pm Mangaluru Correspondent ಕರಾವಳಿ
ಕೊಣಾಜೆ, ಫೆ.5: ಪೆಟ್ರೋಲ್, ಡಿಸೇಲ್, ಎಲ್ ಪಿಜಿ ವಿಪರೀತ ದರ ಏರಿಕೆ ಖಂಡಿಸಿ ಆಟೋ ರಾಜಕನ್ಮಾರ್ ಸಂಘಟನೆಯ ಆಶ್ರಯದಲ್ಲಿ ಶುಕ್ರವಾರ ದೇರಳಕಟ್ಟೆ ಜಂಕ್ಷನ್ ನಲ್ಲಿ ಅಟೋ ರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್ ಐ ಮುಖಂಡ ಮುನೀರ್ ಕಾಟಿಪಳ್ಳ ಮಾತನಾಡಿ, ತೈಲ ಏರಿಕೆಯೆಂದರೆ ರಿಕ್ಷಾ ಚಾಲಕರಿಗೆ ಮಾತ್ರವಲ್ಲ ಪ್ರತಿಯೊಂದರ ಮೇಲೂ ದರ ಏರಿಕೆಯ ಬಿಸಿ ತಟ್ಟುತ್ತದೆ. ದುಡಿಯುತ್ತಿರುವ ಹಲವರ ಹಕ್ಕುಗಳನ್ನು ಕೇಂದ್ರ ಸರಕಾರ ಕಸಿದುಕೊಳ್ಳುತ್ತಿದೆ. ಬಡವರಿಂದ ಕಸಿದುಕೊಂಡು ಅಂಬಾನಿ, ಅದಾನಿಯಂತವರ ಜೇಬು ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ. ತೈಲ ದರ ಏರಿಕೆಯ ವಿರುದ್ದ ಎಲ್ಲರೂ ಐಕ್ಯತೆಯೊಂದಿಗೆ ಹೋರಾಡೋಣ ಎಂದರು.
ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಶಕೀಲ್ ಮಾತನಾಡಿ ಕೇಂದ್ರ ಸರಕಾರದ ದರ ಏರಿಕೆ ನೀತಿಯನ್ನು ಖಂಡಿಸಿ ಎಲ್ಲರೂ ಪಕ್ಷಭೇದ ಮರೆತು ಕೆಂಪುಕೋಟೆಗೆ ಲಗ್ಗೆ ಹಾಕುವ ದಿನ ದೂರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಟೋ ರಾಜಕನ್ಮಾರ್ ಸಂಘಟನೆಯ ಅಬ್ದುಲ್ ಜಲೀಲ್ ಪ್ರಾಸ್ತಾವಿಕ ಮಾತನಾಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ದರ ಪಾತಾಳಕ್ಕೆ ಇಳಿದರೂ ಇಲ್ಲಿ ಮಾತ್ರ ಏರಿಕೆಯಾಗುತ್ತಲೇ ಇದೆ. ಶ್ರೀಮಂತರಿಂದ ಬೇಕಾದರೆ ಕಸಿದುಕೊಳ್ಳಿ. ಆದರೆ ಬಡ ಜನರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಬೇಡಿ. ಇವತ್ತು ನಾವು ದೇರಳಕಟ್ಟೆಯವರೆಗೆ ರಿಕ್ಷಾ ಚಲೋ ಮಾಡಿದ್ದೇವೆ. ಮುಂದೊಂದು ದಿನ ದೆಹಲಿಯ ಪ್ರಧಾನಿ ಕಚೇರಿಗೂ ರಿಕ್ಷಾ ಚಲೋ ಹಮ್ಮಿಕೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಸಂಘಟನೆಯ ಸೇಸಪ್ಪ ಬೆದ್ರಕಾಡು, ಸಿ.ಎಂ.ರವೂಫ್, ಅರುಣ್ ಕುಮಾರ್, ರಫೀಕ್ ಹರೇಕಳ, ಮೋನು ಟಿಸ್ಕೋ, ಇಸ್ಮತ್ ಪಜೀರ್, ಸತ್ತಾರ್ ಸಿ.ಎಂ, ನಾಗೇಶ್, ಚಂದ್ರಶೇಖರ್ , ನೌಷಾದ್, ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Auto Drivers in Konaje, Mangalore staged a protest against the steep rise in petrol and diesel prices blaming the BJP-led Central government.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm