ಬ್ರೇಕಿಂಗ್ ನ್ಯೂಸ್
05-02-21 08:29 pm Mangaluru Correspondent ಕರಾವಳಿ
ಕೊಣಾಜೆ, ಫೆ.5: ಪೆಟ್ರೋಲ್, ಡಿಸೇಲ್, ಎಲ್ ಪಿಜಿ ವಿಪರೀತ ದರ ಏರಿಕೆ ಖಂಡಿಸಿ ಆಟೋ ರಾಜಕನ್ಮಾರ್ ಸಂಘಟನೆಯ ಆಶ್ರಯದಲ್ಲಿ ಶುಕ್ರವಾರ ದೇರಳಕಟ್ಟೆ ಜಂಕ್ಷನ್ ನಲ್ಲಿ ಅಟೋ ರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್ ಐ ಮುಖಂಡ ಮುನೀರ್ ಕಾಟಿಪಳ್ಳ ಮಾತನಾಡಿ, ತೈಲ ಏರಿಕೆಯೆಂದರೆ ರಿಕ್ಷಾ ಚಾಲಕರಿಗೆ ಮಾತ್ರವಲ್ಲ ಪ್ರತಿಯೊಂದರ ಮೇಲೂ ದರ ಏರಿಕೆಯ ಬಿಸಿ ತಟ್ಟುತ್ತದೆ. ದುಡಿಯುತ್ತಿರುವ ಹಲವರ ಹಕ್ಕುಗಳನ್ನು ಕೇಂದ್ರ ಸರಕಾರ ಕಸಿದುಕೊಳ್ಳುತ್ತಿದೆ. ಬಡವರಿಂದ ಕಸಿದುಕೊಂಡು ಅಂಬಾನಿ, ಅದಾನಿಯಂತವರ ಜೇಬು ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ. ತೈಲ ದರ ಏರಿಕೆಯ ವಿರುದ್ದ ಎಲ್ಲರೂ ಐಕ್ಯತೆಯೊಂದಿಗೆ ಹೋರಾಡೋಣ ಎಂದರು.

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಶಕೀಲ್ ಮಾತನಾಡಿ ಕೇಂದ್ರ ಸರಕಾರದ ದರ ಏರಿಕೆ ನೀತಿಯನ್ನು ಖಂಡಿಸಿ ಎಲ್ಲರೂ ಪಕ್ಷಭೇದ ಮರೆತು ಕೆಂಪುಕೋಟೆಗೆ ಲಗ್ಗೆ ಹಾಕುವ ದಿನ ದೂರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಟೋ ರಾಜಕನ್ಮಾರ್ ಸಂಘಟನೆಯ ಅಬ್ದುಲ್ ಜಲೀಲ್ ಪ್ರಾಸ್ತಾವಿಕ ಮಾತನಾಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ದರ ಪಾತಾಳಕ್ಕೆ ಇಳಿದರೂ ಇಲ್ಲಿ ಮಾತ್ರ ಏರಿಕೆಯಾಗುತ್ತಲೇ ಇದೆ. ಶ್ರೀಮಂತರಿಂದ ಬೇಕಾದರೆ ಕಸಿದುಕೊಳ್ಳಿ. ಆದರೆ ಬಡ ಜನರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಬೇಡಿ. ಇವತ್ತು ನಾವು ದೇರಳಕಟ್ಟೆಯವರೆಗೆ ರಿಕ್ಷಾ ಚಲೋ ಮಾಡಿದ್ದೇವೆ. ಮುಂದೊಂದು ದಿನ ದೆಹಲಿಯ ಪ್ರಧಾನಿ ಕಚೇರಿಗೂ ರಿಕ್ಷಾ ಚಲೋ ಹಮ್ಮಿಕೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಸಂಘಟನೆಯ ಸೇಸಪ್ಪ ಬೆದ್ರಕಾಡು, ಸಿ.ಎಂ.ರವೂಫ್, ಅರುಣ್ ಕುಮಾರ್, ರಫೀಕ್ ಹರೇಕಳ, ಮೋನು ಟಿಸ್ಕೋ, ಇಸ್ಮತ್ ಪಜೀರ್, ಸತ್ತಾರ್ ಸಿ.ಎಂ, ನಾಗೇಶ್, ಚಂದ್ರಶೇಖರ್ , ನೌಷಾದ್, ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Auto Drivers in Konaje, Mangalore staged a protest against the steep rise in petrol and diesel prices blaming the BJP-led Central government.
22-12-25 10:30 pm
Bangalore Correspondent
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm