ಬ್ರೇಕಿಂಗ್ ನ್ಯೂಸ್
05-02-21 08:29 pm Mangaluru Correspondent ಕರಾವಳಿ
ಕೊಣಾಜೆ, ಫೆ.5: ಪೆಟ್ರೋಲ್, ಡಿಸೇಲ್, ಎಲ್ ಪಿಜಿ ವಿಪರೀತ ದರ ಏರಿಕೆ ಖಂಡಿಸಿ ಆಟೋ ರಾಜಕನ್ಮಾರ್ ಸಂಘಟನೆಯ ಆಶ್ರಯದಲ್ಲಿ ಶುಕ್ರವಾರ ದೇರಳಕಟ್ಟೆ ಜಂಕ್ಷನ್ ನಲ್ಲಿ ಅಟೋ ರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್ ಐ ಮುಖಂಡ ಮುನೀರ್ ಕಾಟಿಪಳ್ಳ ಮಾತನಾಡಿ, ತೈಲ ಏರಿಕೆಯೆಂದರೆ ರಿಕ್ಷಾ ಚಾಲಕರಿಗೆ ಮಾತ್ರವಲ್ಲ ಪ್ರತಿಯೊಂದರ ಮೇಲೂ ದರ ಏರಿಕೆಯ ಬಿಸಿ ತಟ್ಟುತ್ತದೆ. ದುಡಿಯುತ್ತಿರುವ ಹಲವರ ಹಕ್ಕುಗಳನ್ನು ಕೇಂದ್ರ ಸರಕಾರ ಕಸಿದುಕೊಳ್ಳುತ್ತಿದೆ. ಬಡವರಿಂದ ಕಸಿದುಕೊಂಡು ಅಂಬಾನಿ, ಅದಾನಿಯಂತವರ ಜೇಬು ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ. ತೈಲ ದರ ಏರಿಕೆಯ ವಿರುದ್ದ ಎಲ್ಲರೂ ಐಕ್ಯತೆಯೊಂದಿಗೆ ಹೋರಾಡೋಣ ಎಂದರು.

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಶಕೀಲ್ ಮಾತನಾಡಿ ಕೇಂದ್ರ ಸರಕಾರದ ದರ ಏರಿಕೆ ನೀತಿಯನ್ನು ಖಂಡಿಸಿ ಎಲ್ಲರೂ ಪಕ್ಷಭೇದ ಮರೆತು ಕೆಂಪುಕೋಟೆಗೆ ಲಗ್ಗೆ ಹಾಕುವ ದಿನ ದೂರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಟೋ ರಾಜಕನ್ಮಾರ್ ಸಂಘಟನೆಯ ಅಬ್ದುಲ್ ಜಲೀಲ್ ಪ್ರಾಸ್ತಾವಿಕ ಮಾತನಾಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ದರ ಪಾತಾಳಕ್ಕೆ ಇಳಿದರೂ ಇಲ್ಲಿ ಮಾತ್ರ ಏರಿಕೆಯಾಗುತ್ತಲೇ ಇದೆ. ಶ್ರೀಮಂತರಿಂದ ಬೇಕಾದರೆ ಕಸಿದುಕೊಳ್ಳಿ. ಆದರೆ ಬಡ ಜನರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಬೇಡಿ. ಇವತ್ತು ನಾವು ದೇರಳಕಟ್ಟೆಯವರೆಗೆ ರಿಕ್ಷಾ ಚಲೋ ಮಾಡಿದ್ದೇವೆ. ಮುಂದೊಂದು ದಿನ ದೆಹಲಿಯ ಪ್ರಧಾನಿ ಕಚೇರಿಗೂ ರಿಕ್ಷಾ ಚಲೋ ಹಮ್ಮಿಕೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಸಂಘಟನೆಯ ಸೇಸಪ್ಪ ಬೆದ್ರಕಾಡು, ಸಿ.ಎಂ.ರವೂಫ್, ಅರುಣ್ ಕುಮಾರ್, ರಫೀಕ್ ಹರೇಕಳ, ಮೋನು ಟಿಸ್ಕೋ, ಇಸ್ಮತ್ ಪಜೀರ್, ಸತ್ತಾರ್ ಸಿ.ಎಂ, ನಾಗೇಶ್, ಚಂದ್ರಶೇಖರ್ , ನೌಷಾದ್, ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Auto Drivers in Konaje, Mangalore staged a protest against the steep rise in petrol and diesel prices blaming the BJP-led Central government.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm