ಬ್ರೇಕಿಂಗ್ ನ್ಯೂಸ್
05-02-21 08:29 pm Mangaluru Correspondent ಕರಾವಳಿ
ಕೊಣಾಜೆ, ಫೆ.5: ಪೆಟ್ರೋಲ್, ಡಿಸೇಲ್, ಎಲ್ ಪಿಜಿ ವಿಪರೀತ ದರ ಏರಿಕೆ ಖಂಡಿಸಿ ಆಟೋ ರಾಜಕನ್ಮಾರ್ ಸಂಘಟನೆಯ ಆಶ್ರಯದಲ್ಲಿ ಶುಕ್ರವಾರ ದೇರಳಕಟ್ಟೆ ಜಂಕ್ಷನ್ ನಲ್ಲಿ ಅಟೋ ರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್ ಐ ಮುಖಂಡ ಮುನೀರ್ ಕಾಟಿಪಳ್ಳ ಮಾತನಾಡಿ, ತೈಲ ಏರಿಕೆಯೆಂದರೆ ರಿಕ್ಷಾ ಚಾಲಕರಿಗೆ ಮಾತ್ರವಲ್ಲ ಪ್ರತಿಯೊಂದರ ಮೇಲೂ ದರ ಏರಿಕೆಯ ಬಿಸಿ ತಟ್ಟುತ್ತದೆ. ದುಡಿಯುತ್ತಿರುವ ಹಲವರ ಹಕ್ಕುಗಳನ್ನು ಕೇಂದ್ರ ಸರಕಾರ ಕಸಿದುಕೊಳ್ಳುತ್ತಿದೆ. ಬಡವರಿಂದ ಕಸಿದುಕೊಂಡು ಅಂಬಾನಿ, ಅದಾನಿಯಂತವರ ಜೇಬು ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ. ತೈಲ ದರ ಏರಿಕೆಯ ವಿರುದ್ದ ಎಲ್ಲರೂ ಐಕ್ಯತೆಯೊಂದಿಗೆ ಹೋರಾಡೋಣ ಎಂದರು.

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಶಕೀಲ್ ಮಾತನಾಡಿ ಕೇಂದ್ರ ಸರಕಾರದ ದರ ಏರಿಕೆ ನೀತಿಯನ್ನು ಖಂಡಿಸಿ ಎಲ್ಲರೂ ಪಕ್ಷಭೇದ ಮರೆತು ಕೆಂಪುಕೋಟೆಗೆ ಲಗ್ಗೆ ಹಾಕುವ ದಿನ ದೂರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಟೋ ರಾಜಕನ್ಮಾರ್ ಸಂಘಟನೆಯ ಅಬ್ದುಲ್ ಜಲೀಲ್ ಪ್ರಾಸ್ತಾವಿಕ ಮಾತನಾಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ದರ ಪಾತಾಳಕ್ಕೆ ಇಳಿದರೂ ಇಲ್ಲಿ ಮಾತ್ರ ಏರಿಕೆಯಾಗುತ್ತಲೇ ಇದೆ. ಶ್ರೀಮಂತರಿಂದ ಬೇಕಾದರೆ ಕಸಿದುಕೊಳ್ಳಿ. ಆದರೆ ಬಡ ಜನರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಬೇಡಿ. ಇವತ್ತು ನಾವು ದೇರಳಕಟ್ಟೆಯವರೆಗೆ ರಿಕ್ಷಾ ಚಲೋ ಮಾಡಿದ್ದೇವೆ. ಮುಂದೊಂದು ದಿನ ದೆಹಲಿಯ ಪ್ರಧಾನಿ ಕಚೇರಿಗೂ ರಿಕ್ಷಾ ಚಲೋ ಹಮ್ಮಿಕೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಸಂಘಟನೆಯ ಸೇಸಪ್ಪ ಬೆದ್ರಕಾಡು, ಸಿ.ಎಂ.ರವೂಫ್, ಅರುಣ್ ಕುಮಾರ್, ರಫೀಕ್ ಹರೇಕಳ, ಮೋನು ಟಿಸ್ಕೋ, ಇಸ್ಮತ್ ಪಜೀರ್, ಸತ್ತಾರ್ ಸಿ.ಎಂ, ನಾಗೇಶ್, ಚಂದ್ರಶೇಖರ್ , ನೌಷಾದ್, ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Auto Drivers in Konaje, Mangalore staged a protest against the steep rise in petrol and diesel prices blaming the BJP-led Central government.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am