ಬ್ರೇಕಿಂಗ್ ನ್ಯೂಸ್
05-02-21 08:51 pm Mangaluru Correspondent ಕರಾವಳಿ
ಮಂಗಳೂರು, ಫೆ.5: ಪೆಟ್ರೋಲ್, ಡೀಸೆಲ್ ಬೆಲೆ ವಿಪರೀತ ಏರಿಕೆ ಆಗಿರುವುದನ್ನು ವಿರೋಧಿಸಿ ಮಂಗಳೂರಿನಲ್ಲಿ ಡಿವೈಎಫ್ಐ ವತಿಯಿಂದ ಸ್ಕೂಟರನ್ನು ತಳ್ಳುಗಾಡಿಯಿಂದ ಎಳೆದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಎ.ಬಿ.ಶೆಟ್ಟಿ ಸರ್ಕಲ್ ಬಳಿಯಿಂದ ಕ್ಲಾಕ್ ಟವರ್ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು. ಬಳಿಕ ಪ್ರತಿಭಟನೆಯಲ್ಲಿ ಮಾತನಾಡಿದ ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಬಿಜೆಪಿಯವರು 2013ರಲ್ಲಿ ಪೆಟ್ರೋಲ್ ದರ 80 ರೂ. ಆಗಿದ್ದಾಗ ಭಾರತ್ ಬಂದ್ ನಡೆಸಿದ್ದರು. ತಾವು ಅಧಿಕಾರಕ್ಕೆ ಬಂದಲ್ಲಿ ಪೆಟ್ರೋಲಿಗೆ 50 ರೂ. ಮಾಡ್ತೇವೆ ಎಂದಿದ್ದರು. ಈಗ ಅಧಿಕಾರಕ್ಕೆ ಬಂದು ಆರು ವರ್ಷ ಕಳೆದಿದೆ. ಯಾಕೆ ಪೆಟ್ರೋಲ್ ದರ ಇಳಿಸಿಲ್ಲ ಎಂದು ಪ್ರಶ್ನೆ ಮಾಡಿದರು.


ಈಗಂತೂ ವಿಪರೀತವಾಗಿ ದರ ಏರಿಕೆ ಮಾಡಿದ್ದಾರೆ. ಜೊತೆಗೆ ಡೀಸೆಲ್, ಎಲ್ಪಿಜಿ ದರವನ್ನೂ ಏರಿಸಿ ಜನಸಾಮಾನ್ಯರ ಮೇಲೆ ಬರೆ ಹಾಕಿದ್ದಾರೆ. ಇವರಿಗೆ ಅಂಬಾನಿ, ಅದಾನಿಯಂತಹ ಕಂಪನಿ ಧಣಿಗಳು ಅಷ್ಟೇ ಮುಖ್ಯವಾಗಿದ್ದಾರೆ. ಕಂಪನಿಗಳ ಸಾಲಮನ್ನಾ ಮಾಡುತ್ತಾರೆ. ಕಳೆದ ಬಾರಿ 1.90 ಲಕ್ಷ ಕೋಟಿ ಸಾಲಮನ್ನಾ ಮಾಡಿದ್ದಾರೆ. ಇವರಿಗೆ ಸಾಮಾನ್ಯ ಜನರ ಮೇಲೆ ಕಾಳಜಿಯೇ ಇಲ್ಲ. ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ತೈಲ ದರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ವಿಪರೀತ ಇಳಿಕೆಯಾಗಿತ್ತು. ಆದರೆ, ಜನರಿಗೆ ಅದರ ಲಾಭ ಸಿಕ್ಕಿಲ್ಲ. ಈಗಲೂ 45 ಡಾಲರಿಗೆ ತೈಲ ಬ್ಯಾರೆಲ್ ಸಿಗುತ್ತಿದೆ. ಇವರು ಇತಿಹಾಸದಲ್ಲೇ ಅತಿ ಹೆಚ್ಚು ದರ ಪೀಕಿಸುತ್ತಿದ್ದಾರೆ ಎಂದು ಸಂತೋಷ್ ಹೇಳಿದರು.
ಪ್ರತಿಭಟನೆಯಲ್ಲಿ ಡಿವೈಎಫ್ಐ ದ.ಕ ಜಿಲ್ಲಾದ್ಯಕ್ಷ ಬಿ.ಕೆ ಇಮ್ತಿಯಾಜ್ , ಜೆಎಮ್ಎಸ್ ಜಿಲ್ಲಾ ಮುಖಂಡರಾದ ಜಯಂತಿ ಬಿ ಶೆಟ್ಟಿ, ಭಾರತಿ ಬೋಳಾರ್, ಅಸುಂತ ಡಿಸೋಜಾ, ಪ್ರಮಿಳಾ ದೇವಾಡಿಗ, ಡಿವೈಎಫ್ಐ ನಗರ ಸಮಿತಿ ಮುಖಂಡರಾದ ಎ.ಬಿ ನೌಶದ್ , ರಫೀಕ್ ಪಿ.ಜಿ, ದೀಪಕ್ ಬಜಾಲ್, ಚರಣ್ ಶೆಟ್ಟಿ ಪಂಜಿಮೊಗರು, ಹನೀಫ್ ಮುಂತಾದವರು ಉಪಸ್ಥಿತರಿದ್ದರು.
Activists today staged a protest against the steep rise in petrol and diesel prices near in Mangalore city by carrying their two-wheelers in procession, blaming the BJP-led Centre for the same.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm