ಬ್ರೇಕಿಂಗ್ ನ್ಯೂಸ್
06-02-21 01:24 pm Mangalore Correspondent ಕರಾವಳಿ
ಮಂಗಳೂರು, ಫೆ.6 : ಯುವ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಛಲವಾದಿ ಆಯ್ಕೆಯಾಗಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಮಂಗಳಮುಖಿ ಒಬ್ಬರಿಗೆ ರಾಜಕೀಯ ಪಕ್ಷದಲ್ಲಿ ಪದಾಧಿಕಾರಿ ಸ್ಥಾನ ದೊರಕಿದೆ.
ಮಂಗಳೂರಿನಲ್ಲಿ ಬ್ಯೂಟಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಪರಿವರ್ತನ್ ಟ್ರಾನ್ಸ್ ಕ್ವೀನ್-2018 ಸಂಜನಾ ಚಲವಾದಿಯವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ನಡೆಸಿರುವ ಯುವ ಕಾಂಗ್ರೆಸ್ ಮಂಗಳೂರು ದಕ್ಷಿಣ ಬ್ಲಾಕ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಮಹಿಳಾ ವಿಭಾಗದಿಂದ ಸ್ಪರ್ಧಿಸಿದ್ದರು. ಜನವರಿ 10, 11 ಮತ್ತು 12 ರಂದು ಆನ್ಲೈನ್ ಮೂಲಕ ಮತದಾನ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದೆ. ಅಧ್ಯಕ್ಷರಾಗಿ ಶಿವ, ಉಪಾಧ್ಯಕ್ಷರಾಗಿ ಸೋಹನ್, ದೀಕ್ಷಿತ್ ಪೂಜಾರಿ ಮತ್ತು ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಚಲವಾದಿ ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಜನಾ ಛಲವಾದಿ, ಯೂತ್ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುದು ಸಂತೋಷ ತಂದಿದೆ. ಮಂಗಳಮುಖಿಯರೆಂದರೆ ಬೇಡಿ ಬದುಕುವವರು, ಲೈಂಗಿಕ ಕಾರ್ಯಕರ್ತರು ಎಂಬ ಭಾವನೆಯಿದೆ. ಅವರಿಗೆ ಯಾವ ಸ್ಥಾನಮಾನವೂ ಸಿಗುತ್ತಿಲ್ಲ ಎಂಬ ಬೇಸರ ಕಾಡುತ್ತಲೇ ಇತ್ತು. ನಾನು ಇದನ್ನೆಲ್ಲಾ ದಾಟಿ ಮುಂದೆ ಬರುತ್ತೇನೆಂಬ ಛಲದಿಂದ ಹೋರಾಟ ನಡೆಸಿದ್ದರ ಫಲವಾಗಿ ರಾಜಕೀಯದಲ್ಲಿ ಸ್ಥಾನ ದೊರಕಿದೆ. ನನ್ನ ಊರಲ್ಲಿ ದೊರಕದ ಗೌರವವನ್ನು ನನಗೆ ಮಂಗಳೂರಿಗರು ನೀಡಿದ್ದಾರೆ. ಇದಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಸಂಜನಾ ಸಂತಸ ವ್ಯಕ್ತಪಡಿಸಿದ್ದಾರೆ.
ನನ್ನನ್ನು ಸೇರಿಸಿ ಮಂಗಳಮುಖಿಯರಿಗೆ ಉದ್ಯೋಗ ಹಾಗೂ ವಸತಿಯ ಅಭದ್ರತೆ ಕಾಡುತ್ತಿದ್ದು, ಸಮಾಜದಲ್ಲಿ ಎಲ್ಲರಂತೆ ಮಂಗಳಮುಖಿಯರಿಗೂ ಸಮಾನ ಅವಕಾಶ, ಸ್ಥಾನಮಾನ ದೊರೆಯುವಂತೆ ಹೋರಾಟ ಮಾಡುತ್ತೇನೆ ಎಂದು ಹೇಳಿದರು.
Congress gives position of Block Congress Secretary to Sanjana a Transgender which is first in Dakshina Kannada.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am