ಬ್ರೇಕಿಂಗ್ ನ್ಯೂಸ್
06-02-21 02:12 pm Mangalore Correspondent ಕರಾವಳಿ
ಮಂಗಳೂರು, ಫೆ. 6: ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ಬಿಲ್ಲವರು ಮತ್ತು ಕೋಟಿ ಚೆನ್ನಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು ಅಧಿಕಾರಿ ವಿರುದ್ಧ ಭಾರೀ ಆಕ್ರೋಶ ಕೇಳಿಬಂದಿದೆ. ಮೂಡುಬಿದ್ರಿಯ ಬಿಲ್ಲವ ಮುಖಂಡರು ಜಗದೀಶ ಅಧಿಕಾರಿ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.
ಎರಡು ದಿನಗಳ ಹಿಂದೆ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಬಗ್ಗೆ ಅವಹೇಳನ ಆಗುವ ರೀತಿ ಮಾತನಾಡಿದ್ದರು. ಪಟ್ಟ ಆದವರ ಕಾಲು ಹಿಡಿಯುತ್ತೇನೆ, ಜನಾರ್ದನ ಪೂಜಾರಿ ಅವರ ಕಾಲು ಹಿಡಿಯುವುದಿಲ್ಲ ಎನ್ನುವ ಮೂಲಕ ಜಗದೀಶ್ ಅಧಿಕಾರಿ ಬಿಲ್ಲವರು ಮತ್ತು ಕಾಂಗ್ರೆಸ್ ಪ್ರಮುಖರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕುರಿತು ಸ್ಪಷ್ಟನೆ ಕೇಳಲು ಬಿಲ್ಲವ ಸಮುದಾಯ ಮುಖಂಡರೊಬ್ಬರು ಜಗದೀಶ ಅಧಿಕಾರಿಗೆ ಕರೆ ಮಾಡಿದ್ದರು.

ಮಾತುಕತೆ ಬಳಿಕ ಕರೆ ಕಟ್ ಮಾಡದೆ, ತನ್ನ ಒಟ್ಟಿಗೆ ಇದ್ದವರ ಜೊತೆ ಜಗದೀಶ್ ಅಧಿಕಾರಿ ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಫೋನ್ನಲ್ಲಿ ರೆಕಾರ್ಡ್ ಆಗಿದ್ದು ಅದೀಗ ವೈರಲ್ ಆಗಿದೆ. ಬಿಲ್ಲವರನ್ನು ಯಾವತ್ತೂ ನಂಬುವಂತಿಲ್ಲ. ಅವರಿಗಿಂತ ಬ್ಯಾರಿಗಳನ್ನು ನಂಬಬಹುದು. ಕೋಟಿ ಚೆನ್ನಯರು ಕೂಡ ಪೆರ್ಮಲೆ ಬಲ್ಲಾಳರಿಗೆ ಅನ್ಯಾಯ ಮಾಡಿದರು. ಮತ್ತೊಂದು ರಾಜನಲ್ಲಿಗೆ ಹೋಗಿ ಅಲ್ಲಿಯ ಮಂತ್ರಿಯನ್ನು ಕೊಂದರು. ಇನ್ನೊಂದು ಕಡೆ ಹೋಗಿ ಅಲ್ಲಿಯ ರಾಜನನ್ನೇ ಸೋಲಿಸಿದರು.
ಕೊನೆಗೆ ಆಸುಪಾಸಿನ ಎಲ್ಲ ರಾಜರು ಸೇರಿ ಕೋಟಿ ಚೆನ್ನಯರನ್ನು ಕೊಲ್ಲುತ್ತಾರೆ. ಆಗಲೂ ಕೋಟಿ ಚೆನ್ನಯರು ಒಳ್ಳೆದು ಮಾಡಿಲ್ಲ. ಅವರ ಸಂತಾನದವರೂ ಅಷ್ಟೇ. ಜನಾರ್ದನ ಪೂಜಾರಿಯ ಕಾಲಿಗೆ ಬೀಳುವುದು ಯಾಕೆ ? ನಂಗೇನು ಅಂಥ ಗತಿ ಬಂದಿದೆ ಎಂದು ಬಿಲ್ಲವರ ಬಗ್ಗೆ ಮೂದಲಿಸಿ ಮಾತನಾಡಿದ್ದ ಆಡಿಯೋ ಈಗ ವೈರಲ್ ಆಗಿದ್ದು ಬಿಲ್ಲವ ಸಮುದಾಯದ ಮುಖಂಡರು ಬಿಜೆಪಿ ಮುಖಂಡನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Leaders of different units of Moodbidri Billawa Sangha, on Friday, February 5, filed a complaint at Moodbidri police station against BJP leader Jagadish Adhikari.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am