ಬ್ರೇಕಿಂಗ್ ನ್ಯೂಸ್
06-02-21 04:55 pm Mangalore Correspondent ಕರಾವಳಿ
ಮಂಗಳೂರು, ಫೆ.6: ಭಾರತ ಹಿಂದು ರಾಷ್ಟ್ರವೆಂದು ಘೋಷಣೆಯಾಗಬೇಕು ಅನ್ನೋದು ನಮ್ಮ ಹಳೆಯ ಬೇಡಿಕೆ. ಈಗ ಹೊಸತಾಗಿ ನಿರ್ಮಾಣಗೊಳ್ಳುತ್ತಿರುವ ಪ್ರಜಾಪ್ರಭುತ್ವದ ದೇಗುಲವಾಗಿರುವ ಸಂಸತ್ ಭವನಕ್ಕೆ ಹಿಂದು ರಾಷ್ಟ್ರ ಭವನ ಎಂದು ಹೆಸರಿಡಬೇಕೆಂದು ಅಖಿಲ ಭಾರತ ಹಿಂದು ಮಹಾಸಭಾ ಆಗ್ರಹಿಸಿದೆ.
ಮಂಗಳೂರಿನ ಆರ್ಯ ಸಮಾಜದಲ್ಲಿ ಸುದ್ದಿಗೋಷ್ಠಿ ನಡೆಸಿದ ಅಖಿಲ ಭಾರತ ಹಿಂದು ಮಹಾಸಭಾ ದಕ್ಷಿಣ ಭಾರತ ವಲಯ ಕಾರ್ಯದರ್ಶಿ ಶ್ರೀ ಸ್ವಾಮಿ ದತ್ತಾತ್ರೇಯ ಸ್ವಾಮಿ ಸ್ವರೂಪನಾಥ, ಹಿಂದು ರಾಷ್ಟ್ರ ಭವನ ಎಂದು ಹೆಸರಿಡಲು ಒತ್ತಾಯಿಸಿ ಈಗಾಗ್ಲೇ ಸಹಿ ಸಂಗ್ರಹ ಆರಂಭಿಸಲಾಗಿದೆ. ಫೆ.7ರಂದು ಚಿಕ್ಕಮಗಳೂರಿನಲ್ಲಿ ರಾಜ್ಯದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದರು.

ಹಿಂದು ವಿರೋಧಿ ಹೇಳಿಕೆ ನೀಡುತ್ತಿದ್ದ ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣದಲ್ಲಿ ವಕೀಲೆ ಮೀರಾ ರಾಘವೇಂದ್ರ ಅವರನ್ನು ಅಭಿನಂದಿಸುವುದಾಗಿ ಹೇಳಿದ ಅವರು, ಈ ಬಗ್ಗೆ ಬೆಂಗಳೂರಿನ ಹಲಸೂರು ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಕೂಡಲೇ ಹಿಂಪಡೆಯಬೇಕು. ಇದು ಹಿಂದುತ್ವಕ್ಕಾಗಿ ನಡೆದ ಹೋರಾಟ. ಅಂಥ ಕೇಸನ್ನು ರಾಜ್ಯ ಸರಕಾರ ಹಿಂದಕ್ಕೆ ಪಡೆಯಬೇಕು ಎಂದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷನಾಗಿರುವ ಜಗದೀಶ ಅಧಿಕಾರಿ ಬಿಲ್ಲವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸುತ್ತೇವೆ. ಕೋಟಿ ಚೆನ್ನಯರು ಮತ್ತು ಬಿಲ್ಲವ ಸಮುದಾಯಕ್ಕೆ ಅವಹೇಳನ ಮಾಡಿದ ಅಧಿಕಾರಿಯನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಬಿಲ್ಲವ ಸಮುದಾಯ ಹಿಂದುತ್ವಕ್ಕಾಗಿ ಅಗಾಧ ಕೊಡುಗೆ ನೀಡಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹಿಂದು ಮಹಾಸಭಾ ಸಮಿತಿಯ ರಾಜ್ಯಾಧ್ಯಕ್ಷ ಡಾ.ಎಲ್. ಕೆ. ಸುವರ್ಣ, ರಾಜ್ಯ ಪ್ರಭಾರಿ ರಾಜೇಶ್ ಪೂಜಾರಿ, ಕಾರ್ಯದರ್ಶಿ ನವೀನ್ ಕುಮಾರ್ ಸುರತ್ಕಲ್, ದ.ಕ. ಜಿಲ್ಲಾಧ್ಯಕ್ಷ ಲೋಕೇಶ್ ಉಳ್ಳಾಲ, ದ.ಕ ಜಿಲ್ಲಾ ಶ್ರಮಿಕ ಸಭಾ ಕಾರ್ಯದರ್ಶಿ ಪ್ರಕಾಶ್ ಭಟ್ ಉಪಸ್ಥಿತರಿದ್ದರು.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm