ಬ್ರೇಕಿಂಗ್ ನ್ಯೂಸ್
07-02-21 09:45 pm Mangaluru Correspondent ಕರಾವಳಿ
ಮೂಡುಬಿದ್ರೆ, ಫೆ.7: ಎಸ್ ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆ ಸಮಾಜದಲ್ಲಿ ದ್ವೇಷ , ಕೋಮು ಗಲಭೆಯನ್ನು ಎಬ್ಬಿಸಬೇಕೆನ್ನುವ ದೃಷ್ಟಿಯಿಂದ ತನ್ನ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಸಾರ್ವಜನಿಕ ಭಾಷಣದಲ್ಲಿ ಮತ್ತೊಮ್ಮೆ ತಾಂಟ್ ರೇ ತಾಂಟ್ ಹೇಳಿಕೆ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅಶಾಂತಿಗೆ ಕಾರಣವಾಗುತ್ತಿದ್ದಾರೆ. ಇವರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಹಿಂದು ಜಾಗರಣ ವೇದಿಕೆಯಿಂದ ಮೂಡುಬಿದ್ರೆ ಠಾಣೆಗೆ ದೂರು ನೀಡಲಾಗಿದೆ.
ಕೊಣಾಜೆ ಬಳಿಯ ಪಜೀರಿನಲ್ಲಿ ರಿಯಾಜ್ ಮತ್ತೆ ಪ್ರಚೋದನಕಾರಿ ಭಾಷಣ ಮಾಡಿದ್ದು ಯುವಕರನ್ನು ಗಲ್ಲಿ ಗಲ್ಲಿಯಲ್ಲಿ ಛೂ ಬಿಡುತ್ತೇನೆ. ಒಂದಲ್ಲ ಹತ್ತು ಸಾರಿ ಹೇಳುತ್ತೇನೆ, ತಾಂಟ್ ರೇ ಬಾ ತಾಂಟ್ ಎನ್ನುವ ಮೂಲಕ ತನ್ನ ಪಕ್ಷದ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ರಿಯಾಜ್ ನೀಡಿರುವ ಇಂತಹ ಹೇಳಿಕೆಗಳಿಂದ ಸಮಾಜದ ಶಾಂತಿಗೆ ಭಂಗ ಉಂಟಾಗುವ ಸಾಧ್ಯತೆ ಇದೆ. ಕೋಮು ಗಲಭೆಯನ್ನು ಹಬ್ಬಿಸುವ ಉದ್ದೇಶದಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ ರಿಯಾಜ್ ಪರಂಗಿಪೇಟೆ ವಿರುದ್ಧ ಕಲಂ 153 ಎ ಮತ್ತು 505 (1) ಮತ್ತು 505 (2) ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಜಾಗರಣ ವೇದಿಕೆ ಮುಖಂಡರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಮೂಡುಬಿದ್ರೆ ಹಿಂದು ಜಾಗರಣ ವೇದಿಕೆ ತಾಲೂಕು ಅಧ್ಯಕ್ಷ ಸಮಿತ್ ರಾಜ್ ದರೆಗುಡ್ಡೆ , ಉಪಾಧ್ಯಕ್ಷ ನಾಗೇಶ್ ಕುಲಾಲ್, ಹಿಂದು ಯುವವಾಹಿನಿ ಸಂಯೋಜಕ ಸಂದೀಪ ಸುವರ್ಣ ಕೆಲ್ಲಪುತ್ತಿಗೆ, ಕಾರ್ಯದರ್ಶಿ ಸಂದೀಪ್ ಹೆಗ್ಡೆ, ನಗರ ಪ್ರಮುಖರಾದ ನರೇಶ್ ಶೆಟ್ಟಿ ಉಪಸ್ಥಿತರಿದ್ದರು.
Ullal Hindu Jagarana Vedike Demands sting action against Riyaz Farangipete for his provocative speech in Mangalore.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm