ಬ್ರೇಕಿಂಗ್ ನ್ಯೂಸ್
07-02-21 09:45 pm Mangaluru Correspondent ಕರಾವಳಿ
ಮೂಡುಬಿದ್ರೆ, ಫೆ.7: ಎಸ್ ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆ ಸಮಾಜದಲ್ಲಿ ದ್ವೇಷ , ಕೋಮು ಗಲಭೆಯನ್ನು ಎಬ್ಬಿಸಬೇಕೆನ್ನುವ ದೃಷ್ಟಿಯಿಂದ ತನ್ನ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಸಾರ್ವಜನಿಕ ಭಾಷಣದಲ್ಲಿ ಮತ್ತೊಮ್ಮೆ ತಾಂಟ್ ರೇ ತಾಂಟ್ ಹೇಳಿಕೆ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅಶಾಂತಿಗೆ ಕಾರಣವಾಗುತ್ತಿದ್ದಾರೆ. ಇವರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಹಿಂದು ಜಾಗರಣ ವೇದಿಕೆಯಿಂದ ಮೂಡುಬಿದ್ರೆ ಠಾಣೆಗೆ ದೂರು ನೀಡಲಾಗಿದೆ.
ಕೊಣಾಜೆ ಬಳಿಯ ಪಜೀರಿನಲ್ಲಿ ರಿಯಾಜ್ ಮತ್ತೆ ಪ್ರಚೋದನಕಾರಿ ಭಾಷಣ ಮಾಡಿದ್ದು ಯುವಕರನ್ನು ಗಲ್ಲಿ ಗಲ್ಲಿಯಲ್ಲಿ ಛೂ ಬಿಡುತ್ತೇನೆ. ಒಂದಲ್ಲ ಹತ್ತು ಸಾರಿ ಹೇಳುತ್ತೇನೆ, ತಾಂಟ್ ರೇ ಬಾ ತಾಂಟ್ ಎನ್ನುವ ಮೂಲಕ ತನ್ನ ಪಕ್ಷದ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ರಿಯಾಜ್ ನೀಡಿರುವ ಇಂತಹ ಹೇಳಿಕೆಗಳಿಂದ ಸಮಾಜದ ಶಾಂತಿಗೆ ಭಂಗ ಉಂಟಾಗುವ ಸಾಧ್ಯತೆ ಇದೆ. ಕೋಮು ಗಲಭೆಯನ್ನು ಹಬ್ಬಿಸುವ ಉದ್ದೇಶದಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ ರಿಯಾಜ್ ಪರಂಗಿಪೇಟೆ ವಿರುದ್ಧ ಕಲಂ 153 ಎ ಮತ್ತು 505 (1) ಮತ್ತು 505 (2) ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಜಾಗರಣ ವೇದಿಕೆ ಮುಖಂಡರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಮೂಡುಬಿದ್ರೆ ಹಿಂದು ಜಾಗರಣ ವೇದಿಕೆ ತಾಲೂಕು ಅಧ್ಯಕ್ಷ ಸಮಿತ್ ರಾಜ್ ದರೆಗುಡ್ಡೆ , ಉಪಾಧ್ಯಕ್ಷ ನಾಗೇಶ್ ಕುಲಾಲ್, ಹಿಂದು ಯುವವಾಹಿನಿ ಸಂಯೋಜಕ ಸಂದೀಪ ಸುವರ್ಣ ಕೆಲ್ಲಪುತ್ತಿಗೆ, ಕಾರ್ಯದರ್ಶಿ ಸಂದೀಪ್ ಹೆಗ್ಡೆ, ನಗರ ಪ್ರಮುಖರಾದ ನರೇಶ್ ಶೆಟ್ಟಿ ಉಪಸ್ಥಿತರಿದ್ದರು.
Ullal Hindu Jagarana Vedike Demands sting action against Riyaz Farangipete for his provocative speech in Mangalore.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am